ರಾಜ್ಯದ ಮೂರನೇ ಹುಲಿ ಸಫಾರಿ ಕೇಂದ್ರ ಹಂಪಿಯಲ್ಲಿ!
Recommended Video

ಬಳ್ಳಾರಿ, ಸೆಪ್ಟೆಂಬರ್ 19: ಹಂಪಿಯಲ್ಲಿ ರಾಜ್ಯದ ಮೂರನೇ ಹುಲಿ ಸಫಾರಿ ಕೇಂದ್ರ ಆರಂಭವಾಗಲಿದೆ, ಶೀಘ್ರದಲ್ಲಿ ಹಂಪಿ ನೋಡಲು ಬರುವ ಪ್ರವಾಸಿಗರಿಗೆ ಹತ್ತಿರದಿಂದ ಹುಲಿಗಳನ್ನು ನೋಡುವ ಅವಕಾಶ ದೊರೆಯಲಿದೆ.
ಹುಲಿಗಳನ್ನು ನೋಡಲು ಬನ್ನೇರುಘಟ್ಟ, ಶಿವಮೊಗ್ಗ ಜಿಲ್ಲೆಯಲ್ಲಿರುವ ತಾವರೆಕೊಪ್ಪಕ್ಕೆ ಹೋಗಬೇಕಿತ್ತು ಆದರೆ ಇನ್ನುಮುಂದೆ ಹಂಪಿಯಲ್ಲೂ ನೋಡಬಹುದಾಗಿದೆ, ಹಂಪಿ ಬಳಿ ಇರುವ ಅಟಲ್ ಬಿಹಾರಿ ಜಿಯೋಲಾಜಿಕಲ್ ಪಾರ್ಕ್ ನಲ್ಲಿ ಹುಲಿ ಮತ್ತು ಸಿಂಹ ಸಫಾರಿ ಕೇಂದ್ರ ನವೆಂಬರ್ ನಿಂದ ಆರಂಭವಾಗಲಿದೆ.
ವಾಜಪೇಯಿ ಪಾರ್ಕ್ ನಲ್ಲಿ ತಲೆ ಎತ್ತಲಿರುವ ಸಫಾರಿ ಕೇಂದ್ರ ರಾಜ್ಯದಲ್ಲಿ ಮೂರನೇಯದು ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ, ಈಗಾಗಲೇ ಹಂಪಿ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳವಾಗಿದ್ದು ಇನ್ನುಮುಂದೆ ಇನ್ನಷ್ಟು ಆಕ್ಷರ್ಷಣೀಯವಾಗುವುದರ ಜತೆಗೆ ಸಾಕಷ್ಟು ಮಂದಿಯನ್ನು ಆಕರ್ಷಿಸಲಿದೆ, ರಜಾ ದಿನಗಳಲ್ಲಿ ಮಕ್ಕಳನ್ನು ಕರೆದುಕೊಂಡು ಭೇಟಿ ನೀಡಬಹುದು.

ಹೋಲ್ಡಿಂಗ್ ಹೌಸ್ ವ್ಯವಸ್ಥೆ ಮಾಡಲಾಗಿದೆ
ಸಫಾರಿ ಕೇಂದ್ರದ ಸುತ್ತಲೂ ಸುಮಾರು 16 ಅಡಿ ಎತ್ತರದ ತಂತಿ ಬೇಲಿ ವ್ಯವಸ್ಥೆ ಮಾಡಲಾಗಿದೆ. ಹುಲಿ ಮತ್ತು ಸಿಂಹಗಳಿಗೆ ಎಂಟು ಹೋಲ್ಡಿಂಗ್ ಹೌಸ್ ನಿರ್ಮಿಸಲಾಗಿದೆ. ಸಫಾರಿಗೆ ಹೋಗುವ ಪ್ರವಾಸಿಗರಿಗೆ ಹುಲಿ ಮತ್ತು ಸಿಂಹ ಕಾಣುವ ಮಾದರಿಯಲ್ಲಿ ಬ್ರೆಕಲ್ ಪ್ರದೇಶವನ್ನು ಒದಗಿಸಲಾಗಿದೆ. ಹುಲಿ ಸಫಾರಿ ಕೇಂದ್ರದ ಒಳಗಡೆ ಮೂರು ಕಿ.ಮೀ ಸಫಾರಿ ಮಾಡಲು ಟ್ರಕ್ ವ್ಯವಸ್ಥೆ ಮಾಡಲಾಗಿದೆ.

ಹಂಪಿ ಉತ್ಸವ ಸಂದರ್ಭದಲ್ಲಿ ಆರಂಭ
ಮೃಗಾಲಯದ ಪ್ರಾಧಿಕಾರ ನವೆಂಬರ್ ನಲ್ಲಿ ನಡೆಯುವ ಹಂಪಿ ಉತ್ಸವ ಸಂದರ್ಭದಲ್ಲಿ ಹುಲಿ ಮತ್ತು ಸಿಂಹಗಳ ಸಫಾರಿ ಕೇಂದ್ರಕ್ಕೆ ಚಾಲನೆ ನೀಡಲು ನಿರ್ಧರಿಸಿದೆ.

ಹುಲಿ ಸಫಾರಿ ಸಿದ್ಧತೆ ಅಂತಿಮ ಹಂತ
ಹುಲಿ ಸಫಾರಿ ಕೇಂದ್ರ ಹಂಪಿಯಲ್ಲಿ ಆರಂಭವಾಗುತ್ತಿದ್ದು, ಎರಡು ಹುಲಿ ಮತ್ತು ಎರಡು ಸಿಂಹವನ್ನು ಬನ್ನೇರುಘಟ್ಟದಿಂದ ತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಂಪಿಯ ಅನತಿ ದೂರದಲ್ಲಿನ ಕಮಲಾಪುರ ಬಳಿಯ ಸುಮಾರು 150 ಹೆಕ್ಟೇರ್ ಪ್ರಧೇಶದಲ್ಲಿ ಈ ಪಾರ್ಕ್ ಇದೆ. ಸುಮಾರು 30 ಹೆಕ್ಟೇರ್ ಪ್ರದೇಶದಲ್ಲಿ ಜಿಂಕೆ ಸೇರಿದಂತೆ ಇತರೆ ಪ್ರಾಣಿಗಳ ಸಫಾರಿ ಕೇಂದ್ರ ಆರಂಭಿಸಲಾಗಿದೆ.

ನವೆಂಬರ್ 3ರಿಂದ 5ರವರೆಗೆ ಹಂಪಿ ಉತ್ಸವ
ನವೆಂಬರ್ 3ರಿಂದ 5ರವರೆಗೆ ಮೂರು ದಿನಗಳ ಕಾಲ ಪ್ರತಿ ವರ್ಷದಂತೆ ಅದ್ಧೂರಿಯಾಗಿ ಹಂಪಿ ಉತ್ಸವ ನೆರವೇರಲಿದೆ, ಉತ್ಸವದ ಯಶಸ್ವಿಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿ ಉತ್ಸವಕ್ಕೆಂದೇ 10ಕೋಟಿ ರೂ,ಗಳ ಅನುದಾನವನ್ನು ತೆಗೆದಿರಿಸುತ್ತಿತ್ತು, ಆದರೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬಜೆಟ್ ನಲ್ಲಿ ಹಂಪಿ ಉತ್ಸವಕ್ಕೆ ಯಾವುದೇ ಅನುದಾನವನ್ನು ತೆಗೆದಿರಿಸಿರಲಿಲ್ಲ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಂಪನ್ಮೂಲ ಕ್ರೋಢೀಕರಿಸಿ ಹಂಪಿ ಉತ್ಸವ ನೆರವೇರಿಸುವುದಾಗಿ ಹಂಪಿ ಉತ್ಸವ ನಡೆಯಲಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications