KKRTC Student Bus Pass: ಬಸ್ ಪಾಸ್ಗಾಗಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬಳ್ಳಾರಿ, ಜೂನ್. 01: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ತಿಳಿಸಿದ್ದಾರೆ.
ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿದ್ದು, ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಪಾಸ್ಗಳನ್ನು ವಿತರಣೆ ಮಾಡಲಾಗುವುದು. ಈ ಸಂಬಂಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಸ್ಗಳನ್ನು ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (URL-sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಿ, ಕರ್ನಾಟಕ ಒನ್ ಕೇಂದ್ರಗಳ ಮುಖಾಂತರ ಪಾಸ್ ಪಡೆಯಲು ಅವಕಾಶ ನೀಡಲಾಗಿದೆ.

ಬಳ್ಳಾರಿ ವಿಭಾಗದ ವ್ಯಾಪ್ತಿಯ ಬಳ್ಳಾರಿ ನಗರದಲ್ಲಿ 02 ಕೇಂದ್ರಗಳು ಮತ್ತು ಸಿರುಗುಪ್ಪ, ಕುರುಗೋಡು, ಕಂಪ್ಲಿ, ಸಂಡೂರು ಭಾಗದ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಲು ಗುರುತಿಸಿಲಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲಿ ಜೂನ್ 03 ರಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಬಹುದಾಗಿದೆ.
ಕರ್ನಾಟಕ ಒನ್ ಕೇಂದ್ರಗಳ ವಿವರ:
ಬಳ್ಳಾರಿ ನಗರದ ಹಳೇ ತಾಲ್ಲೂಕು ಕಚೇರಿ ಕಾಂಪೌಂಡ್ ಆವರಣದ ಭೂಮಿ ಕೇಂದ್ರದ ಕರ್ನಾಟಕ ಒನ್ ಕೇಂದ್ರ ಹಾಗೂ ದುರ್ಗಮ್ಮ ಗುಡಿ ಹತ್ತಿರದ ಹಳೇ ಕಪ್ಪಗಲ್ ರಸ್ತೆಯ ಬಂಗಾರ ಸಿದ್ದಪ್ಪ ಕಾಂಪ್ಲೆಕ್ಸ್ನ ಕರ್ನಾಟಕ-ಒನ್ ಕೇಂದ್ರ. ಸಿರುಗುಪ್ಪ ಪಟ್ಟಣದ ಪಾರ್ವತಿ ನಗರದ ಕರ್ನಾಟಕ-ಒನ್ ಕೇಂದ್ರ. ಕುರುಗೋಡಿನ ಗಟ್ಟಿ ಕಾಂಪ್ಲೆಕ್ಸ್ನ ಕರ್ನಾಟಕ ಒನ್ ಕೇಂದ್ರ, ಕಂಪ್ಲಿಯ ಚಂದ್ರಕಲಾ ಟಾಕೀಸ್ ಹತ್ತಿರದ ಕರ್ನಾಟಕ-ಒನ್ ಕೇಂದ್ರ ಮತ್ತು ಸಂಡೂರಿನ ಪುರಸಭೆ ಬಸ್ ನಿಲ್ದಾಣ ಎದುರುಗಡೆಯ ಶ್ರೀನಿವಾಸ ಕಾಂಪ್ಲೆಕ್ಸ್ನ ಕರ್ನಾಟಕ-ಒನ್ ಕೇಂದ್ರ.
ಬಸ್ ಪಾಸ್ಗೆ ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಸೇವಾಸಿಂಧು ಪೋರ್ಟಲ್ ಐಡಿ (URL-sevasindhu.karnataka.gov.in) ಆಗಿದ್ದು, ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ.

ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂಪಾಯಿ ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿ ಪಡೆಯಲು ಅವಕಾಶವಿದೆ. ಸ್ಯಾಟ್ಸ್, ಯುಯುಸಿಎಂಎಸ್, ಪಿಯುಇ (SATS/ UUCMS / PUE) ಸಂಖ್ಯೆಯನ್ನು ಹೊಂದಿರದ ವಿದ್ಯಾರ್ಥಿಗಳು ವಾಸಸ್ಥಳ ವಿಳಾಸ ಹಾಗೂ ಇತರೆ ಮಾಹಿತಿ ಬಗ್ಗೆ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರಣ ಪತ್ರ ಪಡೆದು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಗರಿಷ್ಠ ಪ್ರಯಾಣ ಮಿತಿ 60 ಕಿ.ಮೀ ಆಗಿರುತ್ತದೆ.
-
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications