KKRTC Student Bus Pass: ಬಸ್ ಪಾಸ್ಗಾಗಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬಳ್ಳಾರಿ, ಜೂನ್. 01: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ತಿಳಿಸಿದ್ದಾರೆ.
ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿದ್ದು, ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಪಾಸ್ಗಳನ್ನು ವಿತರಣೆ ಮಾಡಲಾಗುವುದು. ಈ ಸಂಬಂಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಸ್ಗಳನ್ನು ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (URL-sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಿ, ಕರ್ನಾಟಕ ಒನ್ ಕೇಂದ್ರಗಳ ಮುಖಾಂತರ ಪಾಸ್ ಪಡೆಯಲು ಅವಕಾಶ ನೀಡಲಾಗಿದೆ.

ಬಳ್ಳಾರಿ ವಿಭಾಗದ ವ್ಯಾಪ್ತಿಯ ಬಳ್ಳಾರಿ ನಗರದಲ್ಲಿ 02 ಕೇಂದ್ರಗಳು ಮತ್ತು ಸಿರುಗುಪ್ಪ, ಕುರುಗೋಡು, ಕಂಪ್ಲಿ, ಸಂಡೂರು ಭಾಗದ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಲು ಗುರುತಿಸಿಲಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲಿ ಜೂನ್ 03 ರಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಬಹುದಾಗಿದೆ.
ಕರ್ನಾಟಕ ಒನ್ ಕೇಂದ್ರಗಳ ವಿವರ:
ಬಳ್ಳಾರಿ ನಗರದ ಹಳೇ ತಾಲ್ಲೂಕು ಕಚೇರಿ ಕಾಂಪೌಂಡ್ ಆವರಣದ ಭೂಮಿ ಕೇಂದ್ರದ ಕರ್ನಾಟಕ ಒನ್ ಕೇಂದ್ರ ಹಾಗೂ ದುರ್ಗಮ್ಮ ಗುಡಿ ಹತ್ತಿರದ ಹಳೇ ಕಪ್ಪಗಲ್ ರಸ್ತೆಯ ಬಂಗಾರ ಸಿದ್ದಪ್ಪ ಕಾಂಪ್ಲೆಕ್ಸ್ನ ಕರ್ನಾಟಕ-ಒನ್ ಕೇಂದ್ರ. ಸಿರುಗುಪ್ಪ ಪಟ್ಟಣದ ಪಾರ್ವತಿ ನಗರದ ಕರ್ನಾಟಕ-ಒನ್ ಕೇಂದ್ರ. ಕುರುಗೋಡಿನ ಗಟ್ಟಿ ಕಾಂಪ್ಲೆಕ್ಸ್ನ ಕರ್ನಾಟಕ ಒನ್ ಕೇಂದ್ರ, ಕಂಪ್ಲಿಯ ಚಂದ್ರಕಲಾ ಟಾಕೀಸ್ ಹತ್ತಿರದ ಕರ್ನಾಟಕ-ಒನ್ ಕೇಂದ್ರ ಮತ್ತು ಸಂಡೂರಿನ ಪುರಸಭೆ ಬಸ್ ನಿಲ್ದಾಣ ಎದುರುಗಡೆಯ ಶ್ರೀನಿವಾಸ ಕಾಂಪ್ಲೆಕ್ಸ್ನ ಕರ್ನಾಟಕ-ಒನ್ ಕೇಂದ್ರ.
ಬಸ್ ಪಾಸ್ಗೆ ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಸೇವಾಸಿಂಧು ಪೋರ್ಟಲ್ ಐಡಿ (URL-sevasindhu.karnataka.gov.in) ಆಗಿದ್ದು, ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ.

ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂಪಾಯಿ ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿ ಪಡೆಯಲು ಅವಕಾಶವಿದೆ. ಸ್ಯಾಟ್ಸ್, ಯುಯುಸಿಎಂಎಸ್, ಪಿಯುಇ (SATS/ UUCMS / PUE) ಸಂಖ್ಯೆಯನ್ನು ಹೊಂದಿರದ ವಿದ್ಯಾರ್ಥಿಗಳು ವಾಸಸ್ಥಳ ವಿಳಾಸ ಹಾಗೂ ಇತರೆ ಮಾಹಿತಿ ಬಗ್ಗೆ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರಣ ಪತ್ರ ಪಡೆದು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಗರಿಷ್ಠ ಪ್ರಯಾಣ ಮಿತಿ 60 ಕಿ.ಮೀ ಆಗಿರುತ್ತದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications