KKRTC Student Bus Pass: ಬಸ್ ಪಾಸ್ಗಾಗಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬಳ್ಳಾರಿ, ಜೂನ್. 01: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ತಿಳಿಸಿದ್ದಾರೆ.
ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿದ್ದು, ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಪಾಸ್ಗಳನ್ನು ವಿತರಣೆ ಮಾಡಲಾಗುವುದು. ಈ ಸಂಬಂಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಸ್ಗಳನ್ನು ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (URL-sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಿ, ಕರ್ನಾಟಕ ಒನ್ ಕೇಂದ್ರಗಳ ಮುಖಾಂತರ ಪಾಸ್ ಪಡೆಯಲು ಅವಕಾಶ ನೀಡಲಾಗಿದೆ.

ಬಳ್ಳಾರಿ ವಿಭಾಗದ ವ್ಯಾಪ್ತಿಯ ಬಳ್ಳಾರಿ ನಗರದಲ್ಲಿ 02 ಕೇಂದ್ರಗಳು ಮತ್ತು ಸಿರುಗುಪ್ಪ, ಕುರುಗೋಡು, ಕಂಪ್ಲಿ, ಸಂಡೂರು ಭಾಗದ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಲು ಗುರುತಿಸಿಲಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲಿ ಜೂನ್ 03 ರಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಬಹುದಾಗಿದೆ.
ಕರ್ನಾಟಕ ಒನ್ ಕೇಂದ್ರಗಳ ವಿವರ:
ಬಳ್ಳಾರಿ ನಗರದ ಹಳೇ ತಾಲ್ಲೂಕು ಕಚೇರಿ ಕಾಂಪೌಂಡ್ ಆವರಣದ ಭೂಮಿ ಕೇಂದ್ರದ ಕರ್ನಾಟಕ ಒನ್ ಕೇಂದ್ರ ಹಾಗೂ ದುರ್ಗಮ್ಮ ಗುಡಿ ಹತ್ತಿರದ ಹಳೇ ಕಪ್ಪಗಲ್ ರಸ್ತೆಯ ಬಂಗಾರ ಸಿದ್ದಪ್ಪ ಕಾಂಪ್ಲೆಕ್ಸ್ನ ಕರ್ನಾಟಕ-ಒನ್ ಕೇಂದ್ರ. ಸಿರುಗುಪ್ಪ ಪಟ್ಟಣದ ಪಾರ್ವತಿ ನಗರದ ಕರ್ನಾಟಕ-ಒನ್ ಕೇಂದ್ರ. ಕುರುಗೋಡಿನ ಗಟ್ಟಿ ಕಾಂಪ್ಲೆಕ್ಸ್ನ ಕರ್ನಾಟಕ ಒನ್ ಕೇಂದ್ರ, ಕಂಪ್ಲಿಯ ಚಂದ್ರಕಲಾ ಟಾಕೀಸ್ ಹತ್ತಿರದ ಕರ್ನಾಟಕ-ಒನ್ ಕೇಂದ್ರ ಮತ್ತು ಸಂಡೂರಿನ ಪುರಸಭೆ ಬಸ್ ನಿಲ್ದಾಣ ಎದುರುಗಡೆಯ ಶ್ರೀನಿವಾಸ ಕಾಂಪ್ಲೆಕ್ಸ್ನ ಕರ್ನಾಟಕ-ಒನ್ ಕೇಂದ್ರ.
ಬಸ್ ಪಾಸ್ಗೆ ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಸೇವಾಸಿಂಧು ಪೋರ್ಟಲ್ ಐಡಿ (URL-sevasindhu.karnataka.gov.in) ಆಗಿದ್ದು, ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ.

ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂಪಾಯಿ ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿ ಪಡೆಯಲು ಅವಕಾಶವಿದೆ. ಸ್ಯಾಟ್ಸ್, ಯುಯುಸಿಎಂಎಸ್, ಪಿಯುಇ (SATS/ UUCMS / PUE) ಸಂಖ್ಯೆಯನ್ನು ಹೊಂದಿರದ ವಿದ್ಯಾರ್ಥಿಗಳು ವಾಸಸ್ಥಳ ವಿಳಾಸ ಹಾಗೂ ಇತರೆ ಮಾಹಿತಿ ಬಗ್ಗೆ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರಣ ಪತ್ರ ಪಡೆದು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಗರಿಷ್ಠ ಪ್ರಯಾಣ ಮಿತಿ 60 ಕಿ.ಮೀ ಆಗಿರುತ್ತದೆ.
-
CBSE 10th Results 2026: ಹತ್ತನೇ ತರಗತಿ ನಂತರ ನಿಮ್ಮ ಆಯ್ಕೆ ಏನಾಗಿರಬೇಕು? ಮುಂದಿನ ಹಾದಿ ಹೀಗಿರಲಿ -
CBSE ಹೊಸ ನಿಯಮ: ಮುಖ್ಯ ವಿಷಯದಲ್ಲಿ ಫೇಲ್ ಆದರೂ ಪಾಸ್ ಅವಕಾಶ, CBSE ರಿಸಲ್ಟ್ ನೋಡುವುದು ಹೇಗೆ -
CBSE Results 2026: ಸಿಬಿಎಸ್ಇ 10 ಮತ್ತು 12ನೇ ತರಗತಿಯ ಉತ್ತರ ಪತ್ರಿಕೆಯ ಪ್ರತಿ ಪಡೆಯುವುದು ಹೇಗೆ? -
Central Board of Secondary Education: 10ನೇ ತರಗತಿ ಎರಡು ಪರೀಕ್ಷೆ ವ್ಯವಸ್ಥೆ: ಅವಕಾಶವೇ ಅಥವಾ ಹೆಚ್ಚುವರಿ ಒತ್ತಡವೇ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications