Get Updates
Get notified of breaking news, exclusive insights, and must-see stories!

T Narasipura Accident: ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಚೆಕ್‌ ವಿತರಣೆ

ಬಳ್ಳಾರಿ, ಜೂನ್‌, 05: ಮೈಸೂರು ಸಮೀಪ ತಿ.ನರಸೀಪುರದ ಕುರುಬೂರು ಬಳಿ ಮೇ 29ರಂದು ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದ ಬಳ್ಳಾರಿ ಜಿಲ್ಲೆ ಸಂಗನಕಲ್ಲು ಗ್ರಾಮದ ಮೃತರ ಕುಟುಂಬಸ್ಥರಿಗೆ ಭಾನುವಾರ ಸಂಜೆ ಸಚಿವ ಬಿ.ನಾಗೇಂದ್ರ ಅವರು ಪರಿಹಾರದ ಚೆಕ್ ವಿತರಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಂತೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು.

ಅಪಘಾತದಲ್ಲಿ ಒಟ್ಟು ಈವರೆಗೆ 11 ಜನ ಮೃತರಾಗಿದ್ದು, ಮೃತರ ಪೈಕಿ ಸಂಗನಕಲ್ಲು ಗ್ರಾಮದ 10 ಜನರು ಮೃತರಾಗಿದ್ದರು. ಸದ್ಯ 7 ಮೃತರ ಕುಟುಂಬಸ್ಥರಿಗೆ ಮಾತ್ರ ಚೆಕ್ ವಿತರಣೆ ಮಾಡಲಾಗಿದ್ದು, ಇನ್ನುಳಿದ ಮೂರು ಜನರಿಗೆ ಶೀಘ್ರದಲ್ಲೇ ಚೆಕ್ ವಿತರಿಸಲಾಗುವುದು ಎಂದು ಸಚಿವ ನಾಗೇಂದ್ರ ಅವರು ತಿಳಿಸಿದರು.

T Narasipura Accident

ಕಳೆದ ಮೇ ತಿಂಗಳ 29ರಂದು ದೇವರ ದರ್ಶನಕ್ಕೆಂದು ಸಂಗನಕಲ್ಲು ಗ್ರಾಮದ ಮೂರು ಕುಟುಂಬಗಳ 13 ಜನರು ಪ್ರವಾಸ ತೆರಳಿದ್ದರು. ಮೈಸೂರಿಗೆ ಹೋಗಿ ತಾಯಿಯ ದರ್ಶನ ಪಡೆದು ವಾಪಸ್ ಬರುವಾಗ ದುರಾದೃಷ್ಟವಶಾತ್ ಭೀಕರ ಅಪಘಾತ ಸಂಭವಿಸಿ ಈವರೆಗೆ 11 ಜನ ಮೃತಪಟ್ಟಿದ್ದಾರೆ.

ಸ್ಥಳದಲ್ಲೇ 10 ಜನರು ಮೃತರಾಗಿದ್ದು, ಈ ಪೈಕಿ 9 ಜನ ಸಂಗನಕಲ್ಲು ಗ್ರಾಮದವರಾಗಿದ್ದರು. ಗಾಯಾಳುಗಳ ಪೈಕಿ ಸಂದೀಪ್ ಎಂಬುವವರನ್ನು ಬದುಕುಳಿಸಲು ಮೈಸೂರಿನ ಕೆ.ಆರ್.ಆಸ್ಪತ್ರೆಯ ವೈದ್ಯರು ಶಕ್ತಿ ಮೀರಿ ಪ್ರಯತ್ನ ಪಟ್ಟರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೊನ್ನೆ ಅವರು ಮೃತರಾಗಿದ್ದಾರೆ ಎಂದು ಸಚಿವ ನಾಗೇಂದ್ರ ತಿಳಿಸಿದರು.

ಈ ದುರ್ಘಟನೆ ನಡೆಯುತ್ತಿದ್ದಂತೆ ಸಿಎಂ ಅವರ ಸೂಚನೆಯಂತೆ ನಾನು ಮೈಸೂರಿನ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೆ. ಇಂತಹ ಘಟನೆ ಯಾರ ಜೀವನದಲ್ಲೂ ನಡೆಯಬಾರದು ಎಂದು ಹೇಳಿದ ಸಚಿವ ನಾಗೇಂದ್ರ, ಅಲ್ಲಿ ಹೋಗಿ ನಾನು ನೋಡಿದಾಗ ಹೃದಯವಿದ್ರಾವಕ ದೃಶ್ಯ ಇತ್ತು. ಗಾಯಾಳು ಸಂದೀಪ್ ಉಳಿಯಬಹುದೆಂಬ ನಿರೀಕ್ಷೆ ಇತ್ತು. ಅದು ಹುಸಿಯಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಪರಿಹಾರ ನಿಧಿಯಿಂದ ತಲಾ ಒಬ್ಬರಿಗೆ 2 ಲಕ್ಷ ರೂಪಾಯಿ ಚೆಕ್ ನೀಡುವಂತೆ ಘೋಷಣೆ ಮಾಡಿದ್ದರು. ಜೊತೆಗೆ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಸಿಎಂ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನಾನು ಇಂದು ಸಂಗನಕಲ್ಲು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. ಹಾಗೆಯೆ ಸಿಎಂ ಪರಿಹಾರ ನಿಧಿಯ ಚೆಕ್ ವಿತರಿಸಿದ್ದೇನೆ ಎಂದರು.

ಕೇಂದ್ರ ಸರ್ಕಾರ ಕೂಡ ಪರಿಹಾರ ನೀಡಲಿ ಎಂದು ನಾನು ಕೂಡ ಒತ್ತಾಯ ಮಾಡುತ್ತೇನೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುವೆ ಎಂದು ಹೇಳಿದ ಅವರು, ಸರ್ಕಾರದಿಂದ ಉದ್ಯೋಗ ಹಾಗೂ ಇತರ ನೆರವು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ ಎಂದರು.

ಇನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವೆಂಕಟೇಶ್ ಪ್ರಸಾದ್, ಮುರಳಿಕೃಷ್ಣ, ಬೆಣಕಲ್ ಬಸವರಾಜಗೌಡ, ಪಿ.ಜಗನ್, ಮುದಿಮಲ್ಲಯ್ಯ, ಪ್ರಭು ರೆಡ್ಡಿ, ಭೀಮ, ವಿಜಯ್‍ಕುಮಾರ್, ಜೋಗಿನ್ ಚಂದ್ರ, ಕೆ.ರಾಮಕೃಷ್ಣ, ದುರುಗಣ್ಣ, ಕುರುಬ ನಾಗರಾಜ, ಎಂ.ಜಿ.ಕನಕ ಸೇರಿದಂತೆ ಹಲವರು ಹಾಜರಿದ್ದರು.

ಸಾಮೂಹಿಕ ಅಂತ್ಯಕ್ರಿಯೆ

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಸಂಗನಕಲ್ಲು ಗ್ರಾಮದಲ್ಲಿ 9 ಜನರ ಮೃತದೇಹಗಳನ್ನು ಮಂಗಳವಾರ (ಮೇ 30) ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಯಿತು.

ಸಂಗನಕಲ್ಲು ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿವಿಧಾನಗಳಿಂದ ಒಂದೇ ಸಾಲಿನಲ್ಲಿ ಗುಂಡಿಗಳನ್ನು ಅಗೆದು, ಏಕಕಾಲದಲ್ಲಿ ಮೃತದೇಹಗಳನ್ನು ಮಣ್ಣು ಮಾಡಲಾಯಿತು. ಮೈಸೂರಿನಿಂದ ನಾಲ್ಕು ಆಂಬ್ಯುಲೆನ್ಸ್‌ಗಳಲ್ಲಿ 9 ಜನರ ಮೃತದೇಹಗಳನ್ನು ತರಲಾಯಿತು. ಮೃತದೇಹಗಳನ್ನು ಕೆಲಹೊತ್ತು ಮನೆ ಅಂಗಳದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಈ ವೇಳೆ ಕೆಲವರು ಹೂಮಾಲೆ ಹಾಕಿ ನಮಸ್ಕರಿಸಿ ಅಂತಿಮ ದರ್ಶನ ಪಡೆದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+