ಮರಳಲ್ಲಿ ಮೂಡುತ್ತಿರುವ ತಾಜ್ ಮಹಲ್ ನೋಡಲು ಬನ್ನಿ
ಬಳ್ಳಾರಿ, ಜನವರಿ 09 : ಹಂಪಿ ಉತ್ಸವದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿವಿಧ ಕಲೆಗಳ ಸಮಾಗಮವು ನಡೆಯುತ್ತದೆ. ಈ ಬಾರಿಯ ಉತ್ಸವದಲ್ಲಿ ಮರಳು ಕಲಾ ಪ್ರದರ್ಶನವನ್ನು ಬಳ್ಳಾರಿ ಜಿಲ್ಲಾಡಳಿತ ಆಯೋಜನೆ ಮಾಡಿದೆ.
ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ಸಜ್ಜಾಗುತ್ತಿರುವ ಮರಳು ಕಲಾ ಪ್ರದರ್ಶನವು ಈ ಬಾರಿಯ ಮುಖ್ಯ ಆಕರ್ಷಣೆ. ಒಡಿಶಾಸದ ಕಲಾವಿದ ನಾರಾಯಣ ಸಾಹು ನೇತೃತ್ವದ ತಂಡವು ವಿವಿಧ ಕಲಾಕೃತಿಗಳನ್ನು ರಚನೆ ಮಾಡುತ್ತಿದೆ.
ಮರಳಿನಲ್ಲಿ ಹಂಪಿ ವಿರುಪಾಕ್ಷ ದೇವಾಲಯದ ಗೋಪುರ, ಉಗ್ರ ನರಸಿಂಹ, ಆನೆಲಾಯ ಮತ್ತು ಹಂಪಿಯ ಕಲ್ಲಿನ ರಥದ ಜೊತೆಗೆ ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಆಗ್ರಾದ ತಾಜ್ ಮಹಲ್ ನಿರ್ಮಾಣ ಮಾಡಲಾಗುತ್ತಿದೆ.
ಜನವರಿ 10ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2020ನೇ ಸಾಲಿನ ಹಂಪಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಮರಳು ಕಲಾ ಪ್ರದರ್ಶನವು ಎರಡು ದಿನಗಳ ಕಾಲ ನಡೆಯುವ ನಡೆಯುವ ಹಂಪಿ ಉತ್ಸವದ ಮೆರಗನ್ನು ಮತ್ತಷ್ಟು ಹೆಚ್ಚಿಸಲಿದೆ.

ಮರಳು ಕಲಾ ಪ್ರದರ್ಶನ
ಜನವರಿ 10ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2020ನೇ ಸಾಲಿನ ಹಂಪಿ ಉತ್ಸವ ಉದ್ಘಾಟಿಸಲಿದ್ದಾರೆ. ಮರಳು ಕಲಾ ಪ್ರದರ್ಶನವು ಎರಡು ದಿನಗಳ ಕಾಲ ನಡೆಯುವ ನಡೆಯುವ ಹಂಪಿ ಉತ್ಸವದ ಮೆರಗನ್ನು ಮತ್ತಷ್ಟು ಹೆಚ್ಚಿಸಲಿದೆ. ಉಗ್ರ ನರಸಿಂಹ, ಆನೆಲಾಯ ಮತ್ತು ಹಂಪಿಯ ಕಲ್ಲಿನ ರಥದ ಕಲಾಕೃತಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಗಣಿ ನಾಡಿನಲ್ಲಿ ಮತ್ಸ್ಯ ಮೇಳ
ಹಂಪಿ ಉತ್ಸವದ ಅಂಗವಾಗಿ ಈ ಬಾರಿ ವಿಶೇಷವಾಗಿ ಮತ್ಸ್ಯಮೇಳ ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತ ಬಳ್ಳಾರಿ ಹಾಗೂ ಮೀನುಗಾರಿಕೆ ವತಿಯಿಂದ ಆಯೋಜಿಸಲಾಗಿರುವ ಮತ್ಸ್ಯಮೇಳ ಹಂಪಿಯ ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ನಡೆಯಲಿದೆ.
ಜನವರಿ 10ರಂದು ಮತ್ಸ್ಯಮೇಳ ಉದ್ಘಾಟನೆಯಾಗಲಿದೆ. ಮೇಳದಲ್ಲಿ 11 ಅಡಿಯ ಸುರಂಗ ಮಾದರಿಯ ಅಕ್ವೇರಿಯಮ್ ನಿರ್ಮಿಸಲಾಗಿದೆ. 50ಕ್ಕೂ ಹೆಚ್ಚು ಫಿಶ್ ಟ್ಯಾಂಕ್ಗಳಲ್ಲಿ 10 ರಿಂದ 15 ಬಗೆಬಗೆಯ ಜಾತಿಯ ಮೀನುಗಳನ್ನು ಪ್ರದರ್ಶನಕ್ಕಿಡಲಾಗುತ್ತದೆ.

ಅಂತಿಮ ಹಂತದ ಸಿದ್ಧತೆಗಳು
ಎರಡು ದಿನಗಳ ಹಂಪಿ ಉತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಹಂಪಿ ಬೈಸ್ಕೈ, ಸಾಸುವೆಕಾಳು ಗಣಪ ಮುಂಭಾಗದಲ್ಲಿ ಸಾಹಸಕ್ರೀಡೆಗಳು, ಕಮಲಾಪುರ ಕೆರೆಯಲ್ಲಿ ಪಾರಂಪರಿಕ ಸ್ಪರ್ಧೆ, ಮಾತಂಗಪರ್ವತ ಮೈದಾನದ ಆವರಣದಲ್ಲಿ ಮತ್ಸ್ಯಮೇಳ, ವಿರೂಪಾಕ್ಷೇಶ್ವರ ದೇವಸ್ಥಾನದ ಮುಂಭಾಗದಲ್ಲಿ ರಂಗೋಲಿ ಹಾಗೂ ಮೆಹಂದಿ ಪ್ರದರ್ಶನ ಮುಂತಾದ ಕಾರ್ಯಕ್ರಮ ನಡೆಯಲಿದೆ.

ಸಮಾರೋಪ ಸಮಾರಂಭ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಹಂಪಿ ಉತ್ಸವದ ಸಮಾರೋಪ ಸಮಾರಂಭ ಜನವರಿ 11ರಂದು ಸಂಜೆ 6ಕ್ಕೆ ಕೃಷ್ಣದೇವರಾಯ ವೇದಿಕೆಯಲ್ಲಿ ನಡೆಯಲಿದೆ.
ಕೇಂದ್ರ ಸಚಿವರಾದ ಪ್ರಲ್ಹಾದ್ ಸಿಂಗ್ ಪಟೇಲ್, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications