ಸಿಎಂ ಸಿದ್ದು ಕುರ್ಚಿ ಕಾಲು ಯಾರ ಕೈಲಿದೆ ಗೊತ್ತೆ?
ಬಳ್ಳಾರಿ, ಆ.19 : "ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಒಂದು ಕಾಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೈಯಲ್ಲಿರುವುದರಿಂದ ಸಿದ್ದರಾಮಯ್ಯನವರಿಗೆ ಕುರ್ಚಿಯನ್ನು ಕಳೆದುಕೊಳ್ಳುವ ಭಯ ಆವರಿಸಿದೆ" ಎಂದು ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಲೇವಡಿ ಮಾಡಿದ್ದಾರೆ.
ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಮಂಗಳವಾದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಓಬಳೇಶ್ ಪರವಾಗಿ ಮತಯಾಚನೆ ಮಾಡಲು ಆಗಮಿಸಿದ್ದ ಮಾಜಿ ಸಂಸದೆ ತೇಜಸ್ವಿನಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳ್ಳಾರಿ ಚುನಾವಣಾ ಉಸ್ತುವಾರಿ ಡಿಕೆ ಶಿವಕುಮಾರ್ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ಬಳ್ಳಾರಿ ಜಿಲ್ಲೆಯ ಗಣಿಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಚುನಾವಣೆ ಹೆಸರಿನಲ್ಲಿ ಬಳ್ಳಾರಿಗೆ ಸ್ವಾರ್ಥ ರಾಜಕಾರಣ ಮಾಡಲು ಬಂದಿದ್ದಾರೆ ಎಂದು ಆರೋಪಿಸಿದರು. ಈಗಾಗಲೇ ಕನಕಪುರ, ರಾಮನಗರ, ಪ್ರದೇಶದ ನೈಸರ್ಗಿಕ ಸಂಪತ್ತನ್ನು ನುಂಗಿ ನೀರು ಕುಡಿದಿರುವ ಡಿ.ಕೆ.ಶಿವಕುಮಾರ್ ಅಕ್ರಮ ಕಲ್ಲು ಗಣಿಗಾರಿಕೆ ಮೂಲಕ ಸಾವಿರಾರು ಕೋಟಿ ರೂ. ಅಕ್ರಮ ಸಂಪತ್ತು ಗಳಿಸಿದ್ದಾರೆ ಎಂದು ದೂರಿದರು. [ಉಪ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು]
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಒಂದು ಕಾಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೈಯಲ್ಲಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿಎಂ ಮುಂದಾಗುತ್ತಿಲ್ಲ. ಡಿಕೆ ಶಿವಕುಮಾರ್ ಅಕ್ರಮದ ವಿರುದ್ಧ ಕ್ರಮ ತೆಗೆದುಕೊಂಡರೆ, ಸಿದ್ದರಾಮಯ್ಯನವರಿಗೆ ಕುರ್ಚಿಯನ್ನು ಕಳೆದುಕೊಳ್ಳುವ ಭಯವಿದೆ ಎಂದು ತೇಜಸ್ವಿನಿ ಅವರು ಲೇವಡಿ ಮಾಡಿದರು.
ಸತ್ತ ವ್ಯಕ್ತಿಗಳ ಹೆಸರಿನಲ್ಲೇ ಡಿನೋಟಿಫಿಕೇಶನ್ ಮಾಡಿಸಿದ್ದ ಕುಖ್ಯಾತಿಗೆ ಸಚಿವ ಶಿವಕುಮಾರ್ ಹೆಸರಾಗಿದ್ದಾರೆ ಎಂದು ವ್ಯಂಗ್ಯವಾಡಿದ ತೇಜಸ್ವಿನಿ ಅವರು, ಕನಕಪುರದಲ್ಲಿ ಶಿವಕುಮಾರ್ ಅವ್ಯಾವಹತವಾಗಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಆದರೆ ಇದನ್ನು ತಡೆಯುವ ಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದರು.
ಅಂದಹಾಗೆ, ಆ.21ರಂದು ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಮಂಗಳವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಕಾಂಗ್ರೆಸ್ನಿಂದ ಎನ್.ವೈ.ಗೋಪಾಲಕೃಷ್ಣ ಮತ್ತು ಬಿಜೆಪಿಯಿಂದ ಓಬಳೇಶ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications