ಸಿಎಂ ಸಿದ್ದು ಕುರ್ಚಿ ಕಾಲು ಯಾರ ಕೈಲಿದೆ ಗೊತ್ತೆ?
ಬಳ್ಳಾರಿ, ಆ.19 : "ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಒಂದು ಕಾಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೈಯಲ್ಲಿರುವುದರಿಂದ ಸಿದ್ದರಾಮಯ್ಯನವರಿಗೆ ಕುರ್ಚಿಯನ್ನು ಕಳೆದುಕೊಳ್ಳುವ ಭಯ ಆವರಿಸಿದೆ" ಎಂದು ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಲೇವಡಿ ಮಾಡಿದ್ದಾರೆ.
ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಮಂಗಳವಾದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಓಬಳೇಶ್ ಪರವಾಗಿ ಮತಯಾಚನೆ ಮಾಡಲು ಆಗಮಿಸಿದ್ದ ಮಾಜಿ ಸಂಸದೆ ತೇಜಸ್ವಿನಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳ್ಳಾರಿ ಚುನಾವಣಾ ಉಸ್ತುವಾರಿ ಡಿಕೆ ಶಿವಕುಮಾರ್ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ಬಳ್ಳಾರಿ ಜಿಲ್ಲೆಯ ಗಣಿಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಚುನಾವಣೆ ಹೆಸರಿನಲ್ಲಿ ಬಳ್ಳಾರಿಗೆ ಸ್ವಾರ್ಥ ರಾಜಕಾರಣ ಮಾಡಲು ಬಂದಿದ್ದಾರೆ ಎಂದು ಆರೋಪಿಸಿದರು. ಈಗಾಗಲೇ ಕನಕಪುರ, ರಾಮನಗರ, ಪ್ರದೇಶದ ನೈಸರ್ಗಿಕ ಸಂಪತ್ತನ್ನು ನುಂಗಿ ನೀರು ಕುಡಿದಿರುವ ಡಿ.ಕೆ.ಶಿವಕುಮಾರ್ ಅಕ್ರಮ ಕಲ್ಲು ಗಣಿಗಾರಿಕೆ ಮೂಲಕ ಸಾವಿರಾರು ಕೋಟಿ ರೂ. ಅಕ್ರಮ ಸಂಪತ್ತು ಗಳಿಸಿದ್ದಾರೆ ಎಂದು ದೂರಿದರು. [ಉಪ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು]
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಒಂದು ಕಾಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೈಯಲ್ಲಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿಎಂ ಮುಂದಾಗುತ್ತಿಲ್ಲ. ಡಿಕೆ ಶಿವಕುಮಾರ್ ಅಕ್ರಮದ ವಿರುದ್ಧ ಕ್ರಮ ತೆಗೆದುಕೊಂಡರೆ, ಸಿದ್ದರಾಮಯ್ಯನವರಿಗೆ ಕುರ್ಚಿಯನ್ನು ಕಳೆದುಕೊಳ್ಳುವ ಭಯವಿದೆ ಎಂದು ತೇಜಸ್ವಿನಿ ಅವರು ಲೇವಡಿ ಮಾಡಿದರು.
ಸತ್ತ ವ್ಯಕ್ತಿಗಳ ಹೆಸರಿನಲ್ಲೇ ಡಿನೋಟಿಫಿಕೇಶನ್ ಮಾಡಿಸಿದ್ದ ಕುಖ್ಯಾತಿಗೆ ಸಚಿವ ಶಿವಕುಮಾರ್ ಹೆಸರಾಗಿದ್ದಾರೆ ಎಂದು ವ್ಯಂಗ್ಯವಾಡಿದ ತೇಜಸ್ವಿನಿ ಅವರು, ಕನಕಪುರದಲ್ಲಿ ಶಿವಕುಮಾರ್ ಅವ್ಯಾವಹತವಾಗಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಆದರೆ ಇದನ್ನು ತಡೆಯುವ ಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದರು.
ಅಂದಹಾಗೆ, ಆ.21ರಂದು ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಮಂಗಳವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಕಾಂಗ್ರೆಸ್ನಿಂದ ಎನ್.ವೈ.ಗೋಪಾಲಕೃಷ್ಣ ಮತ್ತು ಬಿಜೆಪಿಯಿಂದ ಓಬಳೇಶ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications