ಬಳ್ಳಾರಿಯಲ್ಲಿ ಕೃತಜ್ಞತಾ ಸಮಾವೇಶ, ದೋಸ್ತಿಗಳಿಂದ ಶಕ್ತಿ ಪ್ರದರ್ಶನ
Recommended Video
ಬಳ್ಳಾರಿ, ನವೆಂಬರ್ 22: ಬಳ್ಳಾರಿ ಉಪಚುನಾವಣೆಯಲ್ಲಿ ದಾಖಲೆಯೊಂದಿಗೆ ಗೆದ್ದ ಸಂತೋಶಕ್ಕೆ ಇಂದು ಸಂಜೆ ಬಳ್ಳಾರಿಯಲ್ಲಿ ಕೃತಜ್ಞತಾ ಸಮಾವೇಶ ಆಯೋಜಿಸಲಾಗಿದ್ದು, ದೋಸ್ತಿಗಳು ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ಬಳ್ಳಾರಿ ಉಪ ಚುನಾವಣೆ ಉಸ್ತುವಾರಿ ವಹಿಸಿದ್ದ ಡಿ.ಕೆ.ಶಿವಕುಮಾರ್, ಗೆದ್ದ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಸೇರಿದಂತೆ ಕಾಂಗ್ರೆಸ್ನ ಎಲ್ಲ ಧುರಿಣ ನಾಯಕರು ಮತ್ತು ಜೆಡಿಎಸ್ನಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ನೂ ಹಲವು ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!
ಕೃತಜ್ಞತಾ ಸಮಾವೇಶವು ಬಿಜೆಪಿಗೆ ಸ್ಪಷ್ಟ ಸಂದೇಶವನ್ನು ರವಾನಿಸಲೆಂದೇ ಆಯೋಜಿಸಲಾಗುತ್ತಿದೆ. ಒಗ್ಗಟ್ಟಿನ ಶಕ್ತಿಯನ್ನು ಪ್ರದರ್ಶಿಸಲು ಸಹ ಈ ಸಮಾವೇಶವನ್ನು ಬಳಸಿಕೊಳ್ಳುತ್ತಿದೆ ಕಾಂಗ್ರೆಸ್-ಜೆಡಿಎಸ್.
ಡಿ.ಕೆ.ಶಿವಕುಮಾರ್ಗೆ ಹೊಸ ಟಾಸ್ಕ್ ನೀಡಲಿದೆ ಹೈಕಮಾಂಡ್!
ಈ ಸಮಾವೇಶವು ಮುಂದಿನ ಲೋಕಸಭೆ ಚುನಾವಣೆಗೆ ಪೂರ್ವ ತಯಾರಿಯೂ ಆಗಿರಲಿದೆ ಎನ್ನಲಾಗಿದೆ. ಜಿಲ್ಲೆಯ ಬಿಜೆಪಿ ಮುಖಂಡರಿಗೆ ಸಂದೇಶವನ್ನು ರವಾನಿಸಲೆಂದು ಹಾಗೂ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬಲೆಂದು ಈ ಸಮಾವೇಶವನ್ನು ಬಳಸಿಕೊಳ್ಳಲಾಗುತ್ತಿದೆ.