ಗ್ರಾ.ಪಂ ಚುನಾವಣೆಯಲ್ಲಿ ಮಂಗಳಮುಖಿಯ ಗೆಲುವು
ಬಳ್ಳಾರಿ, ಡಿಸೆಂಬರ್ 30: ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30 ರಂದು ಭರದಿಂದ ಸಾಗುತ್ತಿದ್ದು, ಗ್ರಾ.ಪಂ ಚುನಾವಣೆಯಲ್ಲಿ ಮಂಗಳಮುಖಿ ಸುಧಾ ಗೆಲುವು ಸಾಧಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ರಾಜಾಪುರದ ಮತ ಕ್ಷೇತ್ರದಿಂದ ಮಂಗಳಮುಖಿ ಸುಧಾ ಗೆಲುವು ಪಡೆದಿದ್ದಾರೆ. ಈ ಗ್ರಾಮ ಪಂಚಾಯತಿ ರಚನೆಯಾಗಿ 26 ವರ್ಷಗಳ ನಂತರ ಚುನಾವಣೆ ನಡೆದಿತ್ತು.

26 ವರ್ಷಗಳ ನಂತರ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಗೆಲುವು ಗಳಿಸಿದ್ದಾರೆ. ಡಿ.30 ರಂದು ಪ್ರಕಟವಾಗಿದ್ದು, ಕಳೆದ 26 ವರ್ಷಗಳಿಂದ ಇಲ್ಲಿ ಅವಿರೋಧ ಆಯ್ಕೆ ನಡೆದಿತ್ತು.












Click it and Unblock the Notifications