ಹಗರಿಬೊಮ್ಮನಹಳ್ಳಿ: ಎಸ್ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮಧ್ಯೆ ತ್ರಿಕೋನ ಸ್ಪರ್ಧೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಸದ್ಯ ಎಲ್ಲ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತಬೇಟೆಯಲ್ಲಿ ನಿರತರಾಗಿದ್ದಾರೆ.
ಈ ಬಾರಿ ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರಗಳಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯೂ ಒಂದು. ಸದ್ಯ ಕಾಂಗ್ರೆಸ್ ಹತೋಟಿಯಲ್ಲಿರುವ ಈ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಬಿಜೆಪಿ ಮತ್ತು ಜೆಡಿಎಸ್ ಪೈಪೋಟಿ ನಡೆಸುತ್ತಿವೆ. ಹೀಗಾಗಿ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ ಹಗರಿಬೊಮ್ಮನಹಳ್ಳಿಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಹಗರಿಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಬಿ ಭೀಮಾ ನಾಯ್ಕ್ ಅವರು ಹಾಲಿ ಶಾಸಕರಾಗಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಬಿ ರಾಮಣ್ಣ ಅಖಾಡಕ್ಕಿಳಿದಿದ್ದರೆ, ಜೆಡಿಎಸ್ನಿಂದ ನೇಮಿರಾಜ್ ನಾಯ್ಕ್ ಸ್ಪರ್ಧಿಸುತ್ತಿದ್ದಾರೆ.
ಎಲ್ಬಿ ಭೀಮಾ ನಾಯ್ಕ್ - ಕಾಂಗ್ರೆಸ್
ಅವಿಭಜಿತ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸತತ ಎರಡು ಬಾರಿ ಗೆದ್ದಿರುವ ಎಲ್ಬಿ ಭೀಮಾ ನಾಯ್ಕ್ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದಾರೆ. 2018ರಲ್ಲಿ 78,337 ಮತಗಳನ್ನು ಪಡೆದು ಸಮೀಪದ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಕೆ ನೇಮಿರಾಜ ನಾಯ್ಕ್ ಅವರನ್ನು ಸೋಲಿಸಿದ್ದರು.
ಇದಕ್ಕೂ ಮುನ್ನ 2013ರಲ್ಲಿ ಆಗ ಜೆಡಿಎಸ್ನಲ್ಲಿದ್ದ ಭೀಮಾ ನಾಯ್ಕ್ ಅವರು ನೇಮಿರಾಜ ನಾಯ್ಕ್ ವಿರುದ್ಧ ಕೇವಲ 125 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದೀಗ ಮತ್ತೊಂದು ಬಾರಿ ಸ್ಪರ್ಧಿಸಿರುವ ಭೀಮಾ ನಾಯ್ಕ್ಗೆ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಂದ ದೊಡ್ಡ ಪೈಪೋಟಿ ನಿರೀಕ್ಷಿಸಲಾಗಿದೆ.

ಬಿ. ರಾಮಣ್ಣ - ಬಿಜೆಪಿ
ಇನ್ನು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹೊಸ ಮುಖ ಬಿ. ರಾಮಣ್ಣ ಸ್ಪರ್ಧಿಸಿದ್ದಾರೆ. ಈ ಬಾರಿ ನೇಮಿರಾಜ್ ನಾಯ್ಕ್ ಬದಲಾಗಿ ಬಿ. ರಾಮಣ್ಣಗೆ ಮಣೆ ಹಾಕಲಾಗಿದೆ. ಬಲ್ಲಾಹುಣ್ಸಿ ರಾಮಣ್ಣ ಅವರು ಜಿಲ್ಲಾ ದಿಶಾ ಸಮಿತಿ ಸದಸ್ಯರಾಗಿದ್ದಾರೆ.
ಎರಡು ಬಾರಿ ಲಂಬಾಣಿ ಸಮುದಾಯದ ನೇಮಿರಾಜ ನಾಯ್ಕ್ ಅವರಿಗೆ ಟಿಕೆಟ್ ನೀಡಿದ್ದ ಬಿಜೆಪಿ, ಇದೀಗ ಮಾದಿಗ ಸಮುದಾಯಕ್ಕೆ ಸೇರಿರುವ ಬಲ್ಲಾಹುಣ್ಸಿ ರಾಮಣ್ಣಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಕಠಿಣ ಸ್ಪರ್ಧೆ ಒಡ್ಡುವ ಮುನ್ಸೂಚನೆ ನೀಡಿದ್ದಾರೆ.
ನೇಮಿರಾಜ ನಾಯ್ಕ್ - ಜೆಡಿಎಸ್
2013 ಮತ್ತು 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನೇಮಿರಾಜ ನಾಯ್ಕ್ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ. ಹೀಗಾಗಿ ನೇಮಿರಾಜ ನಾಯ್ಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 2008ರಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾಗಿದ್ದ ನೇಮಿರಾಜ ನಾಯ್ಕ್, ನಂತರದ ಚುನಾವಣೆಗಳಲ್ಲಿ ಸೋಲು ಕಂಡಿದ್ದಾರೆ.

ಈ ಬಾರಿಯೂ ನೇಮಿರಾಜ ನಾಯ್ಕ್ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಸ್ಥಳೀಯವಾಗಿ ವಿರೋಧ ವ್ಯಕ್ತವಾದ ಕಾರಣ ಅವರಿಗೆ ಟಿಕೆಟ್ ಮಿಸ್ ಆಯಿತು. ಹೀಗಾಗಿ ಬಂಡಾಯವೆದ್ದಿದ್ದ ನೇಮಿರಾಜ ನಾಯ್ಕ್ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದರು. ನಂತರ, ಜೆಡಿಎಸ್ ಪಕ್ಷ ನೇಮಿರಾಜ ನಾಯ್ಕ್ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಿಸಿತು.
ಒಟ್ಟಾರೆಯಾಗಿ, ಹಗರಿಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ನ ಹಾಲಿ ಶಾಸಕ ಎಲ್ಬಿ ಭೀಮಾ ನಾಯ್ಕ್ ಅವರಿಗೆ ಬಿಜೆಪಿಯ ಬಿ. ರಾಮಣ್ಣ ಮತ್ತು ಜೆಡಿಎಸ್ನ ನೇಮಿರಾಜ್ ನಾಯ್ಕ್ ಮತ್ತು ಎನ್ಸಿಪಿಯ ಕೆ ಸುಗುಣ ಕಠಿಣ ಪೈಪೋಟಿ ನೀಡುತ್ತಿದ್ದಾರೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications