ಡೆಡ್ಸ್ಟೋರೇಜ್ ತಲುಪಿದ ತುಂಗಭದ್ರಾ ಡ್ಯಾಂ ನೀರಿನ ಮಟ್ಟ
ಬಳ್ಳಾರಿ, ಮೇ 19: ಬರಗಾಲ, ಬೇಸಿಗೆಯ ಹೊಡೆತಕ್ಕೆ ಸಿಲುಕಿದ ತುಂಗಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಭಾರೀ ಕುಸಿತವಾಗಿದೆ. ಪ್ರಸ್ತುತ ಡ್ಯಾಂನಲ್ಲಿ 3.40 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಿದ್ದು, ಡ್ಯಾಂ ಡೆಡ್ಸ್ಟೋರೇಜ್ ಹಂತವನ್ನು ತಲುಪಿದೆ.
ಬಳ್ಳಾರಿಯಲ್ಲಿರುವ ತುಂಗಭದ್ರಾ ಡ್ಯಾಂನ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 105.79 ಟಿಎಂಸಿ ಅಡಿ. ಆದರೆ ಮೇ 18ರ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ ಡ್ಯಾಂನಲ್ಲಿ 3.40 ಟಎಂಸಿ ಅಡಿ ನೀರಿನ ಸಂಗ್ರಹವಿದೆ.

ತುಂಗಭದ್ರಾ ಜಲಾಶಯದ ನೀರಿನ ಮೇಲೆ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಹಕ್ಕಿದೆ. ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಸಹ ಇಲ್ಲಿಂದ ಪೂರೈಕೆಯಾಗುತ್ತದೆ.
ಆದರೆ ಕಳೆದ ಬಾರಿ ನೈಋತ್ಯ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಲಾಶಯ ಭರ್ತಿ ಆಗಿರಲಿಲ್ಲ. ಈಗ ಬೇಸಿಗೆ ಧಗೆಗೆ ಡ್ಯಾಂ ಸಂಪೂರ್ಣ ಖಾಲಿಯಾಗಿದ್ದು, ನೀರಿನ ಮಟ್ಟ ಡೆಡ್ಸ್ಟೋರೇಜ್ಗೆ ಕುಸಿದಿದೆ.
ಒಳಹರಿವು ಇಲ್ಲ: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್ಎನ್ಎಂಡಿಸಿ) ವರದಿಯ ಪ್ರಕಾರ ತುಂಗಭದ್ರಾ ಡ್ಯಾಂನ ಒಳಹರಿವು ಶೂನ್ಯ, ಹೊರ ಹರಿವು 45 ಕ್ಯುಸೆಕ್ ಆಗಿದೆ.
ಮಲೆನಾಡಿನಲ್ಲಿ ಮಳೆ ಸುರಿದು ತುಂಗ ಮತ್ತು ಭದ್ರಾ ನದಿಗಳಿಗೆ ಒಳಹರಿವು ಬಂದು ಅದರ ನೀರು ಗಾಜನೂರಿನಲ್ಲಿರುವ ತುಂಗ ಮತ್ತು ಶಿವಮೊಗ್ಗದ ಭದ್ರಾ ಡ್ಯಾಂ ತಲುಪಬೇಕು. ಡ್ಯಾಂನ ಬಾಗಿಲು ತೆರೆದು ನದಿಗೆ ನೀರು ಬಿಟ್ಟ ಬಳಿಕ ದಾವಣಗೆರೆ, ಹರಿಹರ ಮೂಲಕ ನೀರು ತುಂಗಭದ್ರಾ ಡ್ಯಾಂಗೆ ಬರಬೇಕು.
ನೈಋತ್ಯ ಮುಂಗಾರು ಮಳೆ ಆರಂಭವಾಗಿ ಉತ್ತಮವಾಗಿ ಮಳೆ ಸುರಿದಲ್ಲಿ ತುಂಗ ಡ್ಯಾಂ ಬೇಗ ಭರ್ತಿಯಾಗುತ್ತದೆ. ಭದ್ರಾ ಡ್ಯಾಂನಲ್ಲಿ ಪ್ರಸ್ತುತ 13.41 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಆದರೆ ನದಿಗೆ ಸದ್ಯ ನೀರನ್ನು ಹರಿಸುವುದಿಲ್ಲ.
ಆದ್ದರಿಂದ ಮುಂದಿನ ಒಂದು ತಿಂಗಳ ಕಾಲ ತುಂಗಭದ್ರಾ ಡ್ಯಾಂಗೆ ಒಳಹರಿವು ಹೆಚ್ಚಳವಾಗುವುದಿಲ್ಲ. 2023ರ ಮೇ 18ರಂದು ಡ್ಯಾಂನಲ್ಲಿ 3.83 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು. 45 ಕ್ಯುಸೆಕ್ ಒಳಹರಿವು ಇತ್ತು. ಆದರೆ ಈ ಬಾರಿ ನೀರು ಸಂಪೂರ್ಣ ಖಾಲಿಯಾಗಿದೆ.
ಡ್ಯಾಂನಲ್ಲಿ ಜಲಚರಗಳಿಗೆ ಅನುಕೂಲವಾಗುವಂತೆ 4 ಟಿಎಂಸಿ ಅಡಿ ನೀರಿನ ಸಂಗ್ರಹ ಇರಬೇಕು ಎಂಬ ನಿಯಮವಿದೆ. ಆದರೆ ಇದಕ್ಕಿಂತಲೂ ಕಡಿಮೆ ನೀರು ತುಂಗಭದ್ರಾ ಡ್ಯಾಂನಲ್ಲಿ ಇದ್ದು, ಡ್ಯಾಂ ನಂಬಿಕೊಂಡಿರುವ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ.
ಪ್ರಸ್ತುತ ಡ್ಯಾಂನಲ್ಲಿರುವ 3.40 ಟಎಂಸಿ ಅಡಿ ನೀರಿನ ಸಂಗ್ರಹದಲ್ಲಿ 1.40 ಟಿಎಂಸಿ ಅಡಿ ನೀರನ್ನು ಬಳಕೆ ಮಾಡಬಹುದು ಎಂದು ಅಂದಾಜಿಸಲಾಗಿದೆ. ಆದರೆ ಈ ನೀರು ಸಹ ಕುಡಿಯಲು ಯೋಗ್ಯವಾಗಿರುತ್ತದೆಯೇ? ಎಂಬುದು ಪ್ರಶ್ನೆಯಾಗಿದೆ.
ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತುಂಗಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಹಲವು ಬಾರಿ ಕುಡಿಯುವ ನೀರಿಗೆ ಮಾತ್ರ ನೀರು ಹರಿಸಲಾಗುತ್ತದೆ ಎಂದು ತೀರ್ಮಾನ ಕೈಗೊಳ್ಳಲಾಗಿತ್ತು. ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ, ಮೆಣಸು ಮುಂತಾದ ಅಧಿಕ ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ ನೀಡಲಾಗಿತ್ತು.
ಪೂರ್ವ ಮುಂಗಾರು ಮತ್ತು ಚಂಡ ಮಾರುತದ ಪ್ರಭಾವದಿಂದ ತುಂಗ ಮತ್ತು ಭದ್ರಾ ನದಿ ವ್ಯಾಪ್ತಿಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಆದರೆ ಈ ನೀರು ಡ್ಯಾಂಗೆ ಹರಿದು ಬರಲು ಸುಮಾರು ಒಂದು ತಿಂಗಳು ಬೇಕಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications