ವಿಮ್ಸ್ನಲ್ಲಿ ವಿದ್ಯುತ್ ವ್ಯತ್ಯಯ, ಆಕ್ಸಿಜನ್ ಕೊರತೆ: ಇಬ್ಬರ ಸಾವು?
ಬಳ್ಳಾರಿ, ಸೆಪ್ಟೆಂಬರ್ 14 : ವಿಜಯಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಆಸ್ಪತೆಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿ ಇಬ್ಬರು ಒಳರೋಗಿಗಳು ಮೃತರಾಗಿದ್ದಾರೆ ಎಂಬ ವಿಡಿಯೋಗಳು ಬಳ್ಳಾರಿ ಜಿಲ್ಲೆಯಾದ್ಯಂತ ವೈರಲ್ ಆಗುತ್ತಿವೆ.
ಮೃತರನ್ನು ಮೌಲಾ ಹುಸೇನ್ ಮತ್ತು ಚಿಟ್ಟೆಮ್ಮ ಎಂದು ಗುರುತಿಸಲಾಗಿದೆ. ಮೌಲಾ ಅವರಿಗೆ ಮೂತ್ರಪಿಂಡ ಸೇರಿದಂತೆ ಗಂಭೀರ ಸಮಸ್ಯೆಗಳಿದ್ದವು. ಚಿಟ್ಟೆಮ್ಮ ಅವರಿಗೆ ಹಾವು ಕಡಿದಿತ್ತು. ಈ ಇಬ್ಬರು ಸಾವನ್ನಪ್ಪಿದ್ದಾರೆ. ಆದರೆ ಕರೆಂಟ್ ಕೈಕೊಟ್ಟಿದ್ದಕ್ಕೂ ಸಾವಿಗೂ ಸಂಬಂಧವಿಲ್ಲ ಎಂದು ವಿಮ್ಸ್ ಮೂಲಗಳು ತಿಳಿಸಿವೆ.
ಇದೊಂದು ಅತಿ ದೊಡ್ಡ ದುರಂತ ಎಂದೇ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಎಕ್ಸ್ಪ್ರೆ ಸ್ಲೈನ್ ಸೌಲಭ್ಯ ಇದ್ದಾಗಲೂ ಕೂಡ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ಆಗಿದ್ದು ಹೇಗೆ? ಸದರಿ ಘಟನೆಯು ನಿನ್ನೆ ನಡೆದಿದ್ದು, ಎರಡು- ಮೂರು ತಾಸುಗಳ ಕಾಲ ಕರೆಂಟ್ ಕಟ್ ಆಗಿತ್ತು ಎನ್ನಲಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ರೋಗಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ವಿಮ್ಸ್ ನಿರ್ದೇಶಕ ಡಾ.ಗಂಗಾಧರ್ ಗೌಡರನ್ನು ಸಂಪರ್ಕ ಮಾಡಲು ಪ್ರಯತ್ನಿಸಲಾಯಿತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಆದರೆ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ನಿನ್ನೆ ಮೃತರಾಗಿರುವುದಂತೂ ಖಚಿತ ಎನ್ನುತ್ತವೆ ಆಸ್ಪತ್ರೆಯ ಮೂಲಗಳು. ಆದರೆ ಈ ಮೂವರು ಯಾವ ಕಾರಣದಿಂದ ನಿಧನರಾದ ಎಂಬುದನ್ನೂ ಆಸ್ಪತ್ರೆಯೇ ಖಚಿತಪಡಿಸಬೇಕಿದೆ.
ಬುಧವಾರ ಬೆಳಗ್ಗೆ 8.20ರಿಂದ 10 ಗಂಟೆವರೆಗೆ ಕರೆಂಟ್ ಹೋಗಿತ್ತು. ಇದಕ್ಕೆ ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಮಾಡಲಾಗಿತ್ತು. 9.30ರಲ್ಲಿ ಒಬ್ಬರು, 9.35ರಲ್ಲಿ ಮತ್ತೊಬ್ಬರು ರೋಗಿ ಮೃತಪಟ್ಟಿದ್ದಾರೆ ಎಂದು ವಿಮ್ಸ್ ಮೂಲಗಳು ಹೇಳಿವೆ.
ವಿಮ್ಸ್ ಕಟ್ಟಡ 60 ವರ್ಷ ಹಳೆಯದು. ವಿದ್ಯುತ್ ಪೂರೈಸುವ ವಾಹಕಗಳು (ತಂತಿ) ಅಷ್ಟೇ ಹಳೆಯದಾಗಿವೆ. ಅಗತ್ಯವಿರುವ ಎಲ್ಲ ವಿಭಾಗಗಳಿಗೂ ಜನರೇಟರ್ ಸೌಲಭ್ಯ ಒದಗಿಸಲಾಗಿದೆ. ಐಸಿಯುಗೂ ಹೊಸ ಜನರೇಟರ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications