ಜೂನ್ 21ರ ಬಳಿಕ ಹಂಪಿ ಪ್ರವಾಸಿಗರ ವೀಕ್ಷಣೆಗೆ ಮುಕ್ತ
ವಿಜಯನಗರ, ಜೂನ್ 14; ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿತ್ತು. ಜೂನ್ 16ರಂದು ಪಾರಂಪರಿಕ ಸ್ಮಾರಕ, ಮ್ಯೂಸಿಯಂ ಸೇರಿದಂತೆ ಪ್ರವಾಸಿತಾಣಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ.
ಸೋಮವಾರ ಕೇಂದ್ರ ಪುರಾತತ್ವ ಇಲಾಖೆ ಪಾರಂಪರಿಕ ತಾಣ, ಮ್ಯುಸಿಯಂಗಳಿಗೆ ಪ್ರವಾಸಿಗರು ಜೂನ್ 16ರಿಂದ ಭೇಟಿ ನೀಡಬಹುದುದ ಎಂದು ಆದೇಶ ಹೊರಡಿಸಿದೆ. ಈ ಮೂಲಕ ಪ್ರವಾಸಿ ತಾಣಗಳ ಸುತ್ತಮುತ್ತಲಿನ ವಾಣಿಜ್ಯ ಚಟುವಟಿಕೆಗೆ ಅನುಮತಿ ಸಿಕ್ಕಿದಂತಾಗಿದೆ.
ಏಪ್ರಿಲ್ 15ರಂದು ಪ್ರವಾಸಿತಾಣಗಳ ವೀಕ್ಷಣೆಗೆ ನಿರ್ಬಂಧ ಹೇರಿ ಪುರಾತತ್ವ ಇಲಾಖೆ ಆದೇಶ ನೀಡಿತ್ತು. ಇದರಿಂದಾಗಿ ಪ್ರವಾಸಿತಾಣಗಳಲ್ಲಿ ಕೆಲಸ ಮಾಡುವ ಗೈಡ್ಗಳು ಸೇರಿದಂತೆ ಇತರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.

ಹಂಪಿ ಭೇಟಿಗೆ ಅವಕಾಶ; ಕೇಂದ್ರ ಪುರಾತತ್ವ ಇಲಾಖೆ ಆದೇಶ ಹೊರಡಿಸಿದರೂ ಯುನೆಸ್ಕೋ ಪಾರಂಪರಿಕ ಪಟ್ಟಿಯಲ್ಲಿರುವ ಹಂಪಿಗೆ ಭೇಟಿ ನೀಡಲು ಪ್ರವಾಸಿಗರು ಜೂನ್ 21ರ ತನಕ ಕಾಯಬೇಕು.
ಕರ್ನಾಟಕ ಸರ್ಕಾರ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಜೂನ್ 21ರ ತನಕ ಲಾಕ್ಡೌನ್ ವಿಸ್ತರಣೆ ಮಾಡಿದೆ. ಆದ್ದರಿಂದ ಪ್ರವಾಸಿಗರ ಭೇಟಿ, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ.
ಜೂನ್ 21ರ ಬಳಿಕ ಹಂಪಿ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸುಮಾರು ಎರಡು ತಿಂಗಳ ಬಳಿಕ ಹಂಪಿಗೆ ಪುನಃ ಪ್ರವಾಸಿಗರು ಭೇಟಿ ನೀಡಬಹುದು.
ಕಳೆದ ವರ್ಷ ಸಹ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿದ್ದ ಕಾರಣ ಹಂಪಿಯ ಗೈಡ್ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಅಗ ಇನ್ಫೋಸಿಸ್ನ ಸುಧಾಮೂರ್ತಿ ಗೈಡ್ಗಳಿಗೆ ನೆರವು ನೀಡಿದ್ದರು. ಈ ಬಾರಿ ಸಹ ಅವರು ಗೈಡ್ಗಳಿಗೆ 10 ಸಾವಿರ ರೂ. ಧನ ಸಹಾಯ ಮಾಡಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications