2016ರ ಯುಪಿಎಸ್ಸಿ ಟಾಪರ್ ಈಗ ಬಳ್ಳಾರಿ ಜಿ.ಪಂ ಸಿಇಒ ಆಗಿ ನೇಮಕ
ಬಳ್ಳಾರಿ, ಆಗಸ್ಟ್ 25: ಯುಪಿಎಸ್ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದ ನಂದಿನಿ ಕೆ.ಆರ್ ಅವರು ಗಣಿನಾಡು ಬಳ್ಳಾರಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
Recommended Video
ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಕೆ.ಆರ್ ಅವರು, 2016ರ ಬ್ಯಾಚ್ ನ ಯುಪಿಎಸ್ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀಣರಾಗಿ, ಇಡೀ ದೇಶದ ಗಮನ ಸೆಳೆದಿದ್ದರು.
ಕಡು ಬಡತನದ ಹಿನ್ನೆಲೆಯಿಂದ ಬಂದ ನಂದಿನಿ ಅವರು, ಇದೀಗ ಬಳ್ಳಾರಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವುದು ಬಳ್ಳಾರಿ ಜಿಲ್ಲೆಯ ಜನರಿಗೆ ಹೆಮ್ಮೆಯ ಸಂಗತಿಯಾಗಿದೆ.

ಕೋಲಾರದ ಚಿನ್ಮಯ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿದ್ದ ನಂದಿನಿ, ಮೂಡಬಿದರೆಯ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಪಿಯುಸಿ ಹಾಗೂ ಬೆಂಗಳೂರಿನ ಎಂ.ಎಸ್ ರಾಮಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿದ್ದರು. ಕನ್ನಡ ಸಾಹಿತ್ಯವನ್ನು ಅತೀವ ಆಸಕ್ತಿಯಿಂದ ಓದುವ ಇವರಿಗೆ ವಾಲಿಬಾಲ್ ಕ್ರೀಡೆ ಅಂದರೆ ಅಚ್ಚುಮೆಚ್ಚು.
ಐಎಎಸ್ ಪರೀಕ್ಷೆಯಲ್ಲಿ ಟಾಪರ್ ಆಗಿ ಆಯ್ಕೆಯಾಗಿರುವ ನಂದಿನಿ ಅವರಿಗೆ ಮುಂಚೂಣಿಯಾಗಿ ಸಿಇಒ ಹುದ್ದೆಯನ್ನು ಅಲಂಕರಿಸಲು ಬಳ್ಳಾರಿ ಜಿಲ್ಲಾ ಪಂಚಾಯಿತಿ ಒಂದು ರೀತಿ ಸ್ಪೂರ್ತಿದಾಯಕವಾಗಿದೆ.
ಈ ಹಿಂದೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕೆ.ನಿತೀಶ್ ಅವರು ಆಯ್ಕೆಯಾಗಿದ್ದರು. ಅವರ ಕಾರ್ಯವೈಖರಿ ಅಷ್ಟೊಂದು ಸಮಂಜಸ ಅನಿಸಿರಲಿಲ್ಲ ಎಂದು ಜಿಲ್ಲೆ ಜನರು ಮಾತು.
ನಿತೀಶ್ ಅವರ ಹಿಂದೆ ಸಿಇಒ ಆಗಿ ಕೆಲಸ ನಿರ್ವಹಿಸಿದ್ದ ಡಾ.ಕೆ.ವಿ ರಾಜೇಂದ್ರ ಅವರ ಕಾರ್ಯವೈಖರಿ ಜನಮನ್ನಣೆ ಗಳಿಸಿತ್ತು. ಇದೀಗ ನಂದಿನಿ ಅವರು ಕೂಡ ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಗಳಿಸುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications