ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇಮಕ ರದ್ದು!

|
Google Oneindia Kannada News

ಬಳ್ಳಾರಿ, ಜನವರಿ 29: ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಆದೇಶ ರದ್ದುಗೊಳಿಸಲಾಗಿದೆ. ಬುಧವಾರ ಕೆ. ಎ. ರಾಮಲಿಂಗಪ್ಪ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿತ್ತು.

ಶುಕ್ರವಾರ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿ. ಎಸ್. ಶಿವಕುಮಾರಸ್ವಾಮಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ದಿನಾಂಕ 27/1/2020ರಂದು ಕೆ. ಎ. ರಾಮಲಿಂಗಪ್ಪ ಅವರನ್ನು ನೇಮಕ ಮಾಡಿದ್ದ ಆದೇಶ ರದ್ದಾಗಿದೆ.

ಬಳ್ಳಾರಿ ಸಿಇಒ ನಂದಿನಿ ಮಾದರಿ ಕೆಲಸ; ವಾಪಸ್ ಆಗಬೇಕಿದ್ದ ಅನುದಾನ ಬಳಕೆಬಳ್ಳಾರಿ ಸಿಇಒ ನಂದಿನಿ ಮಾದರಿ ಕೆಲಸ; ವಾಪಸ್ ಆಗಬೇಕಿದ್ದ ಅನುದಾನ ಬಳಕೆ

ಕಳೆದ 8 ತಿಂಗಳಿನಿಂದ ಅಧ್ಯಕ್ಷರಾಗಿದ್ದ ದಮ್ಮೂರ್ ಶೇಖರ್ ಅವರನ್ನು ದಿಢೀರ್ ಬದಲಾವಣೆ ಮಾಡಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಸಂಬಂಧಿಯಾದ ಬಿಜೆಪಿ ಮುಖಂಡ ರಾಮಲಿಂಗಪ್ಪ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿತ್ತು.

ಬಳ್ಳಾರಿಯಲ್ಲಿ ದಿಢೀರ್ ಬೆಳವಣಿಗೆ; ಬುಡಾ ಅಧ್ಯಕ್ಷರ ಬದಲಾವಣೆ ಬಳ್ಳಾರಿಯಲ್ಲಿ ದಿಢೀರ್ ಬೆಳವಣಿಗೆ; ಬುಡಾ ಅಧ್ಯಕ್ಷರ ಬದಲಾವಣೆ

Bellary Urban Development Authority New President Appointment Cancelled

ಶುಕ್ರವಾರ ಬುಡ ನೂತನ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಹಿಂದೆ ಅಧ್ಯಕ್ಷರಾಗಿದ್ದ ದಮ್ಮೂರ್ ಶೇಖರ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಬಳ್ಳಾರಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ; ಆನಂದ್ ಸಿಂಗ್ ಬಳ್ಳಾರಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ; ಆನಂದ್ ಸಿಂಗ್

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3) (ಎ) ರ ಅನ್ವಯ ಮತ್ತು 3 (4)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ವರೆಗೆ ಅಥವ ಮುಂದಿನ ಆದೇಶದ ವರೆಗೆ ಯಾವುದು ಮೊದಲೊ ಅಲ್ಲಿಯ ತನಕ ದಮ್ಮೂರ್ ಶೇಖರ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ballari
English summary
Urban development department cancelled the appointed of new president for the Bellary Urban Development Authority(BUDA). Dammur Shekar will continue as president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X