ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇಮಕ ರದ್ದು!
ಬಳ್ಳಾರಿ, ಜನವರಿ 29: ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಆದೇಶ ರದ್ದುಗೊಳಿಸಲಾಗಿದೆ. ಬುಧವಾರ ಕೆ. ಎ. ರಾಮಲಿಂಗಪ್ಪ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿತ್ತು.
ಶುಕ್ರವಾರ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿ. ಎಸ್. ಶಿವಕುಮಾರಸ್ವಾಮಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ದಿನಾಂಕ 27/1/2020ರಂದು ಕೆ. ಎ. ರಾಮಲಿಂಗಪ್ಪ ಅವರನ್ನು ನೇಮಕ ಮಾಡಿದ್ದ ಆದೇಶ ರದ್ದಾಗಿದೆ.
ಬಳ್ಳಾರಿ ಸಿಇಒ ನಂದಿನಿ ಮಾದರಿ ಕೆಲಸ; ವಾಪಸ್ ಆಗಬೇಕಿದ್ದ ಅನುದಾನ ಬಳಕೆ
ಕಳೆದ 8 ತಿಂಗಳಿನಿಂದ ಅಧ್ಯಕ್ಷರಾಗಿದ್ದ ದಮ್ಮೂರ್ ಶೇಖರ್ ಅವರನ್ನು ದಿಢೀರ್ ಬದಲಾವಣೆ ಮಾಡಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಸಂಬಂಧಿಯಾದ ಬಿಜೆಪಿ ಮುಖಂಡ ರಾಮಲಿಂಗಪ್ಪ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿತ್ತು.
ಬಳ್ಳಾರಿಯಲ್ಲಿ ದಿಢೀರ್ ಬೆಳವಣಿಗೆ; ಬುಡಾ ಅಧ್ಯಕ್ಷರ ಬದಲಾವಣೆ
ಶುಕ್ರವಾರ ಬುಡ ನೂತನ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಹಿಂದೆ ಅಧ್ಯಕ್ಷರಾಗಿದ್ದ ದಮ್ಮೂರ್ ಶೇಖರ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಬಳ್ಳಾರಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ; ಆನಂದ್ ಸಿಂಗ್
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3) (ಎ) ರ ಅನ್ವಯ ಮತ್ತು 3 (4)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ವರೆಗೆ ಅಥವ ಮುಂದಿನ ಆದೇಶದ ವರೆಗೆ ಯಾವುದು ಮೊದಲೊ ಅಲ್ಲಿಯ ತನಕ ದಮ್ಮೂರ್ ಶೇಖರ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.