ಮೊದಲ ಆರಾಧನೆಯ ಅವಕಾಶ ಯಾರಿಗೆ? ಮಂತ್ರಾಲಯ ಮಠಕ್ಕೆ ಮೇಲುಗೈ
ಬೆಂಗಳೂರು, ಡಿ; 4: ಕೊಪ್ಪಳ ಜಿಲ್ಲೆ, ಆನೆಗೊಂದಿಯಲ್ಲಿರುವ ನವವೃಂದಾವನ ಗಡ್ಡೆಯ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ಮುಗಿಯುವವರೆಗೆ, ಮೊದಲ ಪೂಜೆಗೆ ನಮಗೇ ಅವಕಾಶ ನೀಡಬೇಕು ಎನ್ನುವ ಮಂತ್ರಾಲಯ ಮಠದ ಆರ್ ಎಸ್ ಎ (Regular second appeal) ಕೈಗೆತ್ತೆಕೊಂಡ ಕೋರ್ಟ್, ಸುದೀರ್ಘ ವಾದಮಂಡನೆಯನ್ನು ಆಲಿಸಿ, ತೀರ್ಪು ನೀಡಿದೆ.
ಅರ್ಜಿಯ ವಿಚಾರಣೆ ನಡೆಸುತ್ತಿದ್ದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ಮೊದಲ ಆರಾಧನೆಯ ಅವಕಾಶವನ್ನು ಮಂತ್ರಾಲಯ ಮಠಕ್ಕೆ ನೀಡಿದೆ. ಆ ಮೂಲಕ, ಉತ್ತರಾದಿ ಮಠ ಹಿನ್ನಡೆಯನ್ನು ಅನುಭವಿಸಿದೆ.
ಆಚಾರ್ಯ ಮಧ್ವರ ಮೊದಲ ಶಿಷ್ಯ ಪದ್ಮನಾಭ ತೀರ್ಥರ ಮೂರು ದಿನಗಳ ಆರಾಧನಾ ಮಹೋತ್ಸವ, ಬುಧವಾರದಿಂದ ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಮೊದಲ ಆರಾಧನೆಯ ಅವಕಾಶವನ್ನು ರಾಘವೇಂದ್ರ ಮಠಕ್ಕೆ ನೀಡಬೇಕೆಂದು, ಮಂತ್ರಾಲಯ ಮಠ, ಹೈಕೋರ್ಟ್ ಮೊರೆ ಹೋಗಿತ್ತು.

ಈ ಸಂಬಂಧ, ಎರಡೂ ಮಠಗಳ ವಾದವನ್ನು ಆಲಿಸಿದ ನ್ಯಾ. ದೀಕ್ಷಿತ್, ಡಿಸೆಂಬರ್ 5ರಿಂದ, ಡಿ.6 ಮಧ್ಯಾಹ್ನ ಮೂರು ಗಂಟೆಯವರೆಗೆ, ನಂತರ ಅಂದರೆ ಡಿ. 6 ಮಧ್ಯಾಹ್ನ ಮೂರು ಗಂಟೆಯ ನಂತರ, ಡಿ 7 ಸಂಜೆಯ ವರೆಗೆ ಉತ್ತರಾದಿ ಮಠಕ್ಕೆ ಆರಾಧನೆ ನಡೆಸಲು, ಹೈಕೋರ್ಟ್ ಸೂಚಿಸಿದೆ.
ಕಳೆದ ವರ್ಷ, ನವೆಂಬರ್ 16 ರಿಂದ 18ರವರೆಗೆ ಪದ್ಮನಾಭ ತೀರ್ಥ ಆರಾಧನೆಯನ್ನು, ಎರಡೂ ಮಠದವರು ತಲಾ ಒಂದೂವರೆ ದಿನದಂತೆ ಆರಾಧನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಮೊದಲ, ಒಂದೂವರೆ ದಿನ ಉತ್ತರಾದಿ ಮಠ, ನಂತರ ಮಂತ್ರಾಲಯ ಮಠ ಆರಾಧನೆಯನ್ನು ಮಾಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications