ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಆನಂದ ಸಿಂಗ್‌ಗೆ ಧನ್ಯವಾದ ಹೇಳಿದ ವಾಲ್ಮೀಕಿ ಪೀಠ ಸ್ವಾಮೀಜಿ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ನವೆಂಬರ್ 23: ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಯಿಂದ ಈ ಭಾಗ ಅಭಿವೃದ್ಧಿಯಾಗಲಿದೆ. ಈಗಾಗಲೇ ಜಿಲ್ಲೆ ರಚನೆಯ ಪ್ರಕ್ರಿಯೆ ಶೇಕಡಾ 95ರಷ್ಟು ಮುಗಿದಿದೆ. ಜಿಲ್ಲೆಗಾಗಿ ಶ್ರಮಿಸಿದ ಅರಣ್ಯ ಖಾತೆ ಸಚಿವ ಆನಂದ ಸಿಂಗ್ ಅವರಿಗೆ ಅಭಿನಂದನೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದರು.

ಹೊಸಪೇಟೆ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಚುನಾವಣೆ ನೀತಿ ಸಂಹಿತೆ ಇದೆ. ಹೀಗಾಗಿ ಮೀಸಲಾತಿ ಕುರಿತು ಮಾತನಾಡಲು ಬರುವುದಿಲ್ಲ. ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿಯನ್ನು ಡಿಸೆಂಬರ್ ಒಳಗೆ ನೀಡಲಾಗುವುದಾಗಿ ಸರ್ಕಾರ ತಿಳಿಸಿದೆ ಎಂದರು.‌

Ballari: Valmiki Gurupeeta Swamiji Thanked Anand Singh For Vijayanagar District Formation

 ಬಲವಂತದ 'ಬಳ್ಳಾರಿ ಬಂದ್' ಮಾಡಿದರೆ ಕ್ರಮ: ಸಚಿವ ಆನಂದ ಸಿಂಗ್ ಬಲವಂತದ 'ಬಳ್ಳಾರಿ ಬಂದ್' ಮಾಡಿದರೆ ಕ್ರಮ: ಸಚಿವ ಆನಂದ ಸಿಂಗ್

ಕುರುಬರಿಗೆ ಎಸ್ಟಿ ಮೀಸಲಾತಿ ಹೋರಾಟದ ಬಗ್ಗೆ ಸ್ವಾಮೀಜಿಗಳು ಪ್ರತಿಕ್ರಿಯೆ‌ ನೀಡಲು ನಿರಾಕರಿಸಿದರು. ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕುರಿತು ಮಾತನಾಡುವೆ. ಆದರೆ, ಬೇರೆ ವಿಚಾರದ ಕುರಿತು ಮಾತನಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ನೂರು ಕ್ಷೇತ್ರಗಳಲ್ಲಿ ನಾಯಕರು ನಿರ್ಣಾಯಕರಾಗಿದ್ದಾರೆ. ಹೊಸಪೇಟೆ ಕ್ಷೇತ್ರ ಒಂದೇ ಅಲ್ಲ. ಚುನಾವಣೆ ಎಂದಾಗ ಹಣ ಮಾನದಂಡವಾಗುತ್ತದೆ. ಆರ್ಥಿಕವಾಗಿ ಸಬಲರು ಹಾಗೂ ಸಾಂಘಿಕ ಒಗ್ಗಟ್ಟು ಬೇಕಾಗುತ್ತದೆ. ಆದರೆ ಇತ್ತೀಚೆಗೆ ಈ ಅರಿವು ಸಮುದಾಯದಲ್ಲಿ ಮೂಡುತ್ತಿದೆ ಎಂದರು.

English summary
Valmiki gurupeeta prasannanandapuri swamiji expressed his happiness over separate vijayanagar district formation and thanked forest minister anand singh
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X