ವಿಡಿಯೋ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಸಿಲಿಂಡರ್ ಸ್ಫೋಟ
ಹಂಪಿ, ಅಕ್ಟೋಬರ್ 28: ಕರ್ನಾಟಕದ ಪ್ರಮುಖ ಪ್ರೇಕ್ಷಣೀಯ ಸ್ಥಳ ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಸಿಲಿಂಡರ್ ಸ್ಫೋಟಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ರಾತ್ರಿ ವಿರೂಪಾಕ್ಷ ದೇಗುಲದ ಬಳಿ ಇರುವ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆ ವಿಡಿಯೋ ವೈರಲ್ ಆದ ಬಳಿಕ ಭಕ್ತರು ಆತಂಕಗೊಂಡಿದ್ದಾರೆ. ಆದರೆ ಸಿಲಿಂಡರ್ ಸ್ಪೋಟದಿಂದ ಯಾವುದೇ ಹಾನಿ ಸಂಭವಿಸಿಲ್ಲ. ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲಾಗಿದೆ.
ಹಂಪಿಯು ಯುನೆಸ್ಕೋ ವಿಶ್ವ ಪರಂಪರೆಯ ಐತಿಹಾಸಿಕ ತಾಣವಾಗಿದೆ. ಹಂಪಿಯ ಹೆಮ್ಮೆಗಳಲ್ಲೊಂದು ಇಲ್ಲಿನ ವಿರೂಪಾಕ್ಷ ದೇವಾಲಯ. ಇದು ಮೂಲತಃ ಶಿವನಿಗೆ ಅರ್ಪಿತವಾಗಿದೆ. ಬೆಂಗಳೂರಿನಿಂದ ಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಹಂಪಿ ದಕ್ಷಿಣ ಭಾರತದ ಅತಿ ವಿಶಿಷ್ಟ ಹಾಗು ಜನಪ್ರಿಯ ದೇವಾಲಯಗಳ ನಗರ. ಇದು ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದೆಂಬ ಖ್ಯಾತಿ ಗಳಿಸಿದೆ.
Cylinder blast at a shop creates panic near Virupaksha temple in #Hampi None hurt, fire brought under control. Viral video attached @NewIndianXpress @XpressBengaluru @KannadaPrabha @NammaKalyana @AnandSingh_hpt @vijayanagaraemp @VijayanagarLive @NammaBengaluroo pic.twitter.com/M5TWrBgotN
— Amit Upadhye (@Amitsen_TNIE) October 28, 2022
ವಿರೂಪಾಕ್ಷ ದೇವಾಲಯವು ಮೂಲತಃ ಒಂದು ಶಿವ ಪರಂಪರೆಯ ದೇಗುಲವಾಗಿದ್ದು, ಹಂಪಿಯ ಅತ್ಯಂತ ಜನಪ್ರಿಯ ಪ್ರವಾಸಿ ಆಕರ್ಷಣೆಯಾಗಿದೆ. ಈ ದೇಗುಲದಲ್ಲಿ ಇಂದಿಗೂ ಪೂಜೆ ಪುರಸ್ಕಾರಗಳು ನಡೆಯುತ್ತಿವೆ. ವಿಶೇಷ ಹಾಗೂ ರಜಾ ದಿನಗಳಲ್ಲಿ ನೂರಾರು ಜನ ಈ ದೇವಸ್ಥಾನ ವೀಕ್ಷಣೆಗೆ ಆಗಮಿಸುತ್ತಾರೆ. ಜೊತೆಗೆ ಪೂಜೆ ಕೂಡ ಸಲ್ಲಿಸುತ್ತಾರೆ.

ಹಂಪಿಯನ್ನು ಹಾಳು ಹಂಪಿಯೆಂದೇ ಕೆಲವೊಮ್ಮೆ ಬಣ್ಣಿಸಲಾಗುತ್ತದೆ. ಏಕೆಂದರೆ ಇಲ್ಲಿನ ನೂರಾರು ಕಲ್ಲಿನ ಕಟ್ಟಡಗಳು ಕೆತ್ತನೆಗಳು ಹಾಳಾಗಿವೆ. ಇಂತಹ ಹಾಳಾದ ಅವಶೇಷಗಳ ನಡುವೆಯೂ ಈ ದೇಗುಲ ಭವ್ಯವಾಗಿ ಪ್ರವಾಸಿಗರನ್ನು, ಭಕ್ತಾಧಿಗಳನ್ನು ಕೈ ಬಿಸಿ ಕರೆಯುತ್ತಿದೆ. ಡಿಸೆಂಬರ್ ತಿಂಗಳಿನಲ್ಲಿ ಈ ದೇಗುಲಕ್ಕೆ ದೊಡ್ಡ ಮಟ್ಟದಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ದೇಗುಲದ ವಾರ್ಷಿಕ ಉತ್ಸವ, ಜಾತ್ರೆ ಫೆಬ್ರವರಿ ತಿಂಗಳಲ್ಲಿ ನಡೆಯುತ್ತದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications