Breaking: ತುಂಗಭದ್ರಾ ಬಳಿಕ ಮಾಲವಿ ಡ್ಯಾಂ ರಿಪೇರಿ ಕಾರ್ಯ ಆರಂಭ
ಹೊಸಪೇಟೆ, ಆಗಸ್ಟ್ 21: ಮುನಿರಾಬಾದ್ನಲ್ಲಿರುವ ತುಂಗಭದ್ರಾ ಡ್ಯಾಂನ ಕ್ರೆಸ್ಟ್ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿ ಆತಂಕ ಉಂಟಾಗಿತ್ತು. ಒಂದು ವಾರದ ಬಳಿಕ ಇದರ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿ, ನದಿಗೆ ಹರಿದು ಹೋಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಈಗ ಮಾಲವಿ ಡ್ಯಾಂ ರಿಪೇರಿ ಕಾಮಗಾರಿ ಆರಂಭವಾಗಿದ್ದು, ಬೇಗಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
ಈ ಕುರಿತು ವಿಜಯನಗರ ಜಿಲ್ಲಾಡಳಿತ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮಾಹಿತಿ ನೀಡಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿರುವ ಮಾಲವಿ ಡ್ಯಾಂ ರಿಪೇರಿ ಕಾಮಗಾರಿ ಆರಂಭವಾಗಿರುವ ಫೋಟೋವನ್ನು ಸಹ ಹಂಚಿಕೊಂಡಿದೆ. ಡ್ಯಾಂ ಒಡ್ಡು ಒಡೆದು ನೀರು ವ್ಯರ್ಥವಾಗುತ್ತಿರುವ ಕುರಿತು ಆಕ್ರೋಶ ವ್ಯಕ್ತವಾಗಿತ್ತು.

ಮಾಲವಿ ಡ್ಯಾಂನ 9ನೇ ಗೇಟ್ ದುರಸ್ತಿ ಮಾಡಬೇಕು ಎಂದು ಹಲವು ದಿನಗಳಿಂದ ಒತ್ತಾಯಿಸಲಾಗುತ್ತಿತ್ತು. ಕಳೆದ ವಾರ ತುಂಗಭದ್ರಾ ಡ್ಯಾಂ ಗೇಟ್ ನಂಬರ್ 19ರ ಕಾಮಗಾರಿ ಆರಂಭವಾದ ಬಳಿಕ ಈ ಡ್ಯಾಂ ಬಗ್ಗೆಯೂ ಗಮನ ನೀಡಿ ಎಂದು ವಿಜಯನಗರ ಜಿಲ್ಲಾಡಳಿತದ ಗಮನ ಸೆಳೆಯಲಾಗಿತ್ತು.
ಡ್ಯಾಂನ 9ನೇ ಗೇಟ್ನಲ್ಲಿ ನೀರು ಸಂಗ್ರಹಕ್ಕೆ ಹಾಕಿದ್ದ ಒಡ್ಡು ಒಡೆದ ಹೋದ ಪರಿಣಾಮ ಬಹುಪಾಲು ನೀರು ಹರಿದು ಹೋಗುತ್ತಿತ್ತು. ಡ್ಯಾಂ ದುರಸ್ತಿ ಕಾರ್ಯಕ್ಕಾಗಿಯೇ 4.02 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಸುಮಾರು 2 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂ ಇದಾಗಿದೆ.
ಮಾಲವಿ ಡ್ಯಾಂ ಭರ್ತಿಯಾದರೆ ಡ್ಯಾಂ ಸುತ್ತಮುತ್ತಲೂ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಅಲ್ಲದೇ ಸುಮಾರು 16 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿಗೆ ಅನುಕೂಲವಾಗಲಿದೆ. ಸದ್ಯ ಜಲಾಶಯದ ಗೇಟ್ಗಳಲ್ಲಿ ಸುಮಾರು 5 ಅಡಿಗಳಷ್ಟು ನೀರಿನ ಸಂಗ್ರಹವಿದೆ.
ವಿಜಯನಗರ ಜಿಲ್ಲಾಧಿಕಾರಿ ಎಂ. ಎಸ್. ದಿವಾಕರ ಜುಲೈನಲ್ಲಿ ಮಾಲವಿ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಗೇಟ್ ದುರಸ್ತಿ ಮಾಡಬೇಕು, ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ರೈತರು ಡಿಸಿಗೆ ಮನವಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.
ತುಂಗಭದ್ರಾ ಡ್ಯಾಂನಿಂದ ಮಾಲವಿ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ರೂಪಿಸಬೇಕು ಎಂಬುದು ಬಹಳ ವರ್ಷಗಳ ಬೇಡಿಕೆಯಾಗಿತ್ತು. 2017ರಲ್ಲಿ ಈ ಯೋಜನೆಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಅಲ್ಲದೇ ಡ್ಯಾಂ ಅಭಿವೃದ್ಧಿಗೆ 13 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು.
ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಳ್ಳಾರಿ ಜಿಲ್ಲೆ ವಿಭಜನೆಗೊಂಡಿತು. ಬಳ್ಳಾರಿಯಲ್ಲಿದ್ದ ಹಗರಿಬೊಮ್ಮನಹಳ್ಳಿ ತಾಲೂಕು ವಿಜಯನಗರ ಜಿಲ್ಲೆಗೆ ಸೇರಿತು. ತುಂಗಭದ್ರಾದಿಂದ ಮಾಲವಿ ಡ್ಯಾಂ ತುಂಬಿಸುವ ಯೋಜನೆ ಸುಮಾರು 145 ಕೋಟಿ ರೂ. ವೆಚ್ಚದ್ದಾಗಿದೆ.
2022ರಲ್ಲಿ 13 ವರ್ಷದ ಬಳಿಕ ಮಾಲವಿ ಡ್ಯಾಂ ಭರ್ತಿಯಾಗಿತ್ತು. ಆಗ ರೈತರು ಸಂತಸಗೊಂಡಿದ್ದರು. ಕಾಲುವೆಗಳ ಮೂಲಕ ನೀರು ಹರಿದು, ಬೆಳೆಗಳಿಗೆ ಸಹಾಯಕವಾಗಿತ್ತು. ಮೂರು ಮೋಟಾರುಗಳ ಮೂಲಕ ತುಂಗಭದ್ರಾ ಡ್ಯಾಂ ನೀರನ್ನು ಮಾಲವಿ ಡ್ಯಾಂಗೆ ಹರಿಸುವ ಕಾಮಗಾರಿಯ ನೀರು ಡ್ಯಾಂಗೆ ಬಂದು ಸೇರಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications