ವಿಜಯನಗರ; ಜನಪ್ರತಿನಿಧಿಗಳಿಗೆ ಆನಂದ್ ಸಿಂಗ್ ಭರ್ಜರಿ ದೀಪಾವಳಿ ಉಡುಗೊರೆ
ವಿಜಯನಗರ, ಅಕ್ಟೋಬರ್, 24: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೊಸಪೇಟೆ ನಗರಸಭೆ ಸದಸ್ಯರು, ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರಿಗೆ ದೀಪಾವಳಿಗೆ ಭರ್ಜರಿ ಉಡುಗೊರೆ ನೀಡಿರುವುದು ರಾಷ್ಟ್ರದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸ್ವಕ್ಷೇತ್ರದ ಜನಪ್ರತಿನಿಧಿಗಳ ಮನವೊಲಿಸಲು ಸಚಿವ ಆನಂದ್ ಸಿಂಗ್ ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ. ಹೊಸಪೇಟೆ ನಗರಸಭೆ ಸದಸ್ಯರಿಗೆ 1 ಲಕ್ಷ ರೂಪಾಯಿ ನಗದು, 1 ಕೆ.ಜಿ ಬೆಳ್ಳಿ, ರೇಷ್ಮೆ ಸೀರೆ, ಪಂಚೆ, ಅಂಗಿ, ಮುತ್ತಿನ ಹಾರ ಹಾಗೂ ಡ್ರೈ ಫ್ರೂಟ್ಸ್ ಡಬ್ಬಿ ಒಳಗೊಂಡ ಕಿಟ್ ಅನ್ನು ಕೊಟ್ಟಿದ್ದಾರೆ. ಪಂಚಾಯಿತಿಯ ಒಬ್ಬ ಸದಸ್ಯರಿಗೆ ತಲಾ 27 ಸಾವಿರ ರೂಪಾಯಿ ನಗದು, 500 ಗ್ರಾಂ ಬೆಳ್ಳಿ ಅದರೊಂದಿಗೆ ದೀಪಾವಳಿ ಹಬ್ಬದ ಶ್ರೀ ಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಎಂದು ಬರೆದ ಆಹ್ವಾನವನ್ನು ನೀಡಿದ್ದಾರೆ.
ಚುನಾವಣೆಗೆ ಈಗಿನಿಂದಲೇ ಕಸರತ್ತು
ಸಚಿವರ ಬೆಂಬಲಿಗರು ಎಲ್ಲ ಸದಸ್ಯರಿಗೆ ಕೊಡುಗೆ ತಲುಪಿಸುತ್ತಿದ್ದಾರೆ ಎಂದು ಗೊತ್ತಾಗಿದ್ದು, ಸಚಿವರ ಈ ಗಿಫ್ಟ್ ಸಾಮಾಜಿಕ ಜಾಲತಾಣದಲ್ಲಿ ಇದೀಗ ಎಲ್ಲೆಡೆ ವೈರಲ್ ಆಗಿದೆ. ಹೊಸಪೇಟೆ ನಗರಸಭೆಯಲ್ಲಿ 35 ಸದಸ್ಯರು, 5 ಜನ ನಾಮನಿರ್ದೇಶಿತ ಸದಸ್ಯರಿದ್ದಾರೆ. ಕಮಲಾಪುರ ಪಟ್ಟಣ ಪಂಚಾಯತ್ ಮತ್ತು ವಿಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿ 10 ಗ್ರಾಮ ಪಂಚಾಯಿತಿಯ 182 ಸದಸ್ಯರಿದ್ದಾರೆ. ಸಾಮಾನ್ಯವಾಗಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರನ್ನು ತಮ್ಮ ಪಕ್ಷಗಳತ್ತ ಸೆಳೆಯಲು ರಾಜಕಾರಣಿಗಳು ನಾನಾ ಕಸರತ್ತುಗಳನ್ನು ನಡೆಸುತ್ತಾರೆ.

ಆದರೆ ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಜನರ ಬದಲಾಗಿ ಜನಪ್ರತಿನಿಧಿಗಳನ್ನು ಮನವೊಲಿಸಲು ಒಡವೆ, ನಗದುಗಳನ್ನು ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಚುನಾವಣೆ ಇನ್ನು ಆರಂಭವಾಗದೇ ಇಷ್ಟು ಕಸರತ್ತು ನಡೆಸುವ ಸಚಿವರು, ಇನ್ನು ಚುನಾವಣೆ ಬಂದರೆ ತಮ್ಮ ಗೆಲುವಿಗಾಗಿ ಏನೆಲ್ಲ ಉಡುಗೊರೆಗಳನ್ನು ನೀಡುತ್ತಾರೆಯೋ ಎನ್ನುವ ವಿಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications