Hampi Utsav : ಪ್ರವಾಸೋದ್ಯಮದಲ್ಲಿ ಚೇತರಿಕೆ: ಜನವರಿಯಲ್ಲಿ ವಿಜೃಂಭಣೆಯಿಂದ ಹಂಪಿ ಉತ್ಸವ ಆಚರಿಸಲು ಸಿದ್ದತೆ
ವಿಜಯನಗರ, ನವೆಂಬರ್ 18 : ಎರಡು ವರ್ಷಗಳ ಕೋವಿಡ್ 19 ಬಿಕ್ಕಟ್ಟಿನ ನಂತರ ಪ್ರವಾಸೋದ್ಯಮ ಚೇತರಿಕೆ ಕಾಣುತ್ತಿದ್ದು ಈ ವರ್ಷ ಹಂಪಿ ಉತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡುವ ಮೂಲಕ ಇದನ್ನು ಜನರ ಉತ್ಸವನ್ನಾಗಿಸಲು ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.
ಅವರು ಶುಕ್ರವಾರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ 2023ರ ಜನವರಿ ತಿಂಗಳಲ್ಲಿ ಏರ್ಪಡಿಸಲು ಉದ್ದೇಶಿಸಿರುವ ಹಂಪಿ ಉತ್ಸವದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಜಿಲ್ಲಾದಿಕಾರಿ ಟಿ.ವೆಂಕಟೇಶ್ ಈ ಬಗ್ಗೆ ಮಾಹಿತಿ ನೀಡಿದ ಈಗಾಗಲೇ ಮೊದಲ ಸಿದ್ದತಾ ಸಭೆಯನ್ನು ನಡೆಸಲಾಗಿದ್ದು ಜನವರಿ 7, 8 ರಂದು ನಡೆಸಲು ದಿನಾಂಕವನ್ನು ನಿಗದಿ ಮಾಡಲಾಗಿದೆ. ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿರುವುದರಿಂದ ದಿನಾಂಕದಲ್ಲಿ ಸ್ವಲ್ಪ ಬದಲಾವಣೆಗಳಾಗಲಿದ್ದು ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ದಿನಾಂಕ ಅಂತಿಮಗೊಳಿಸಲಾಗುತ್ತದೆ ಎಂದರು.
ಚುನಾವಣೆ ಸಮೀಪಿಸುತ್ತಿದ್ದು ಇದರ ಸಿದ್ದತೆ ಜೊತೆಗೆ ಹಂಪಿ ಉತ್ಸವವನ್ನು ಮಾಡಬೇಕಾಗಿದ್ದು ಕೋವಿಡ್ ನಂತರ ಮತ್ತು ಜಿಲ್ಲೆ ರಚನೆಯಾದ ನಂತರ ಇದೇ ಮೊದಲು ಉತ್ಸವ ನಡೆಯುತ್ತಿದೆ. ಉತ್ಸವಕ್ಕೆ ಸಾಕಷ್ಟು ಪ್ರವಾಸಿಗರು ಹಾಗೂ ಸ್ಥಳೀಯರು ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ. ಆದ್ದರಿಂದ ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮುಂಚಿತವಾಗಿ ಕೈಗೊಂಡು ಯಶ್ವಸ್ವಿಯಾಗಿ ಮಾಡುವ ಮೂಲಕ ಇದು ಜನಮಾನಸದಲ್ಲಿ ಉಳಿಯುವಂತೆ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.

26 ಸಮಿತಿಗಳ ರಚನೆ
ಹಂಪಿ ಉತ್ಸವವನ್ನು ಯಶಸ್ವಿಯಾಗಿ ನಡೆಸಬೇಕೆನ್ನುವ ಉದ್ದೇಶದಿಂದ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸ್ವಾಗತ ಮತ್ತು ಶಿಷ್ಟಚಾರ ಸಮಿತಿ, ಸಾರಿಗೆ ಸಮಿತಿ, ವಸತಿ ಸಮಿತಿ, ಆಹಾರ ಸಮಿತಿ, ಪ್ರಚಾರ, ಜಾಹಿರಾತು ಮತ್ತು ಮಾಧ್ಯಮ ಸಮಿತಿ, ಆಹ್ವಾನ ಪತ್ರಿಕೆ, ಕರಪತ್ರ, ನೆನಪಿನ ಕಾಣಿಕೆ, ಪಾಸು, ಪ್ರಮಾಣ ಪತ್ರ, ಬ್ಯಾನರ್ ಸಮಿತಿ, ಮೂಲಭೂತ ಸೌಲಭ್ಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮಿತಿ, ಆರೋಗ್ಯ ಮತ್ತು ನೈರ್ಮಲೀಕರಣ ಸಮಿತಿ, ಕಾನೂನು ಸುವ್ಯವಸ್ಥೆ ಸಮಿತಿ, ಪ್ರದರ್ಶನ ಸಮಿತಿ ಸೇರಿದಂತೆ 26 ಸಮಿತಿಗಳನ್ನು ರಚನೆ ಮಾಡಲಾಗಿದೆ. ಈ ಸಮಿತಿಗಳು ಸಭೆಗಳನ್ನು ನಡೆಸಿ ಆಯಾ ಸಮಿತಿಗೆ ಸಂಬಂಧಿಸಿದ ಕ್ರಿಯಾ ಯೋಜನೆಯನ್ನು ವಾರದಲ್ಲಿ ನೀಡಬೇಕೆಂದು ಸೂಚನೆ ನೀಡಿದರು.
ಉತ್ಸವದ ವೇಳೆ ಮುಖ್ಯ ವೇದಿಕೆ, ಸಮಾನಂತರ ವೇದಿಕೆ ಸೇರಿದಂತೆ ಎಷ್ಟು ವೇದಿಕೆಗಳಿರಬೇಕೆಂದು ಸಚಿವರು ಹಾಗೂ ಜನಪ್ರತಿಗಳೊಂದಿಗೆ ಚರ್ಚಿಸಿ ಸಂಪನ್ಮೂಲವನ್ನಾಧರಿಸಿ ನಿರ್ಧರಿಸಲಾಗುತ್ತದೆ ಎಂದರು.

ಮೂಲಭೂತ ಸೌಕರ್ಯಕ್ಕೆ ಒತ್ತು
ಹಂಪಿ ವಿಶ್ವ ಪಾರಂಪರಿಕ ತಾಣವಾಗಿರುವುದರಿಂದ ಅಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಕಾನೂನಿನ ತೊಡಕುಗಳಿವೆ. ಆದರೂ ಸಹ ವಿವಿಧ ಕಂಪನಿಗಳ ಸಿ.ಎಸ್.ಆರ್.ನಿಧಿಯಡಿ ಕುಡಿಯುವ ನೀರು ಸೇರಿದಂತೆ ಪ್ರತಿ ವರ್ಷ ಹಂಪಿ ಉತ್ಸವ ಆಚರಣೆಗೆ ಬೇಕಾದ ಕಾಯಂ ಅಲ್ಲದ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದೆ. ಇದಲ್ಲದೆ ಕೇಂದ್ರ ಪುರಾತತ್ವ ಇಲಾಖೆಗೆ ಒಳಪಡುವ ಸ್ಮಾರಕಗಳನ್ನು ಹೊರತುಪಡಿಸಿ ರಾಜ್ಯ ಪುರಾತತ್ವ ಇಲಾಖೆಗೆ ಸೇರುವ ಸ್ಮಾರಕಗಳನ್ನು ಆಕರ್ಷಿಸಲು ಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದರು.

ಉತ್ಸವಕ್ಕೆ ಅನುದಾನ ಕ್ರೂಢೀಕರಣ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಳೆದ ಎರಡು ವರ್ಷ ತಲಾ ಎರಡು ಕೋಟಿ ಅನುದಾನ ನೀಡಿದ್ದು, ಈ ವರ್ಷದ ಅನುದಾನ ಹಾಗೂ ಹೆಚ್ಚುವರಿಯಾಗಿ ಪಡೆಯುವ ಅನುದಾನ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯಿಂದ ಬರುವ ಅನುದಾನ ಸೇರಿದಂತೆ ಜಿಲ್ಲೆಯಲ್ಲಿರುವ ವಿವಿಧ ಕಂಪನಿಗಳಿಂದ ಪ್ರಾಯೋಜಕತ್ವ ಪಡೆಯುವ ಮೂಲಕ ಸಂಪನ್ಮೂಲವನ್ನು ಕ್ರೂಢೀಕರಿಸಿ ಅದ್ದೂರಿ ಉತ್ಸವ ಆಚರಿಸಲಾಗುತ್ತದೆ ಎಂದರು.

ಶೇ.50ಕ್ಕಿಂತ ಹೆಚ್ಚು ಸ್ಥಳೀಯ ಕಲಾವಿದರಿಗೆ ಆದ್ಯತೆ
ಹಂಪಿಗೆ ದೇಶ, ವಿದೇಶ ಹಾಗೂ ವಿವಿಧ ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಉತ್ಸವದಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲಾವಿದರ ಜೊತೆಗೆ ಸ್ಥಳೀಯವಾಗಿಯು ಶೇ 50 ಕ್ಕಿಂತಲೂ ಹೆಚ್ಚು ಕಲಾವಿದರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಈಗಾಗಲೇ 150 ಕ್ಕಿಂತಲೂ ಹೆಚ್ಚಿನ ಅರ್ಜಿಗಳು ಕಚೇರಿಗೆ ಸಲ್ಲಿಕೆಯಾಗಿದ್ದು, ಅಧಿಕಾರಿಗಳ ಸಮಿತಿಯು ಪರಿಶೀಲನೆ ನಡೆಸಿ ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವರು ಎಂದರು.
ಹಂಪಿ ಉತ್ಸವದಲ್ಲಿ ಕರಕುಶಲ ಪ್ರದರ್ಶನ, ಸಾಹಸ ಕ್ರೀಡೆಗಳು, ಫಲಪುಷ್ಪ ಪ್ರದರ್ಶನ, ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ, ಧ್ವನಿ ಬೆಳಕು, ಹಂಪಿ ಬೈ ಸ್ಕೈ, ಛಾಯಾಚಿತ್ರ ಪ್ರದರ್ಶನ ಸೇರಿದಂತೆ ಅನೇಕ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ಇದಲ್ಲದೆ ಉತ್ಸವಕ್ಕೆ ಆಗಮಿಸುವ ಪ್ರವಾಸಿಗರು, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications