ವಿಜಯನಗರ: ಮರಳಿ ಗೂಡಿಗೆ ಸೇರಿದ ಅಪರೂಪದ ಯೂರೇಷಿಯನ್ ರಣಹದ್ದು
ವಿಜಯನಗರ, ಜನವರಿ, 15: ಕಳೆದ ತಿಂಗಳಷ್ಟೆ ನಗರದ ರಾಣಿಪೇಟೆಯ ಶಾಲಾ ಮಕ್ಕಳ ಕೈಗೆ ಸಿಕ್ಕಿದ್ದ ಅಪರೂಪದ ಗ್ರಿಫನ್ ಯೂರೇಷಿಯನ್ ರಣಹದ್ದು ಮರಳಿಗೂಡಿಗೆ ಹಾರಿದೆ.
ಕಳೆದ ತಿಂಗಳು ಡಿಸೆಂಬರ್ನಲ್ಲಿ ನಗರದ ರಾಣಿಪೇಟೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಹುಡುಗರ ಕಣ್ಣಿಗೆ ಕಾಣಸಿಕ್ಕ ಯೂರೇಷಿಯನ್ ಗ್ರಿಫನ್ ಜಾತಿಯ ರಣಹದ್ದನ್ನು ಪತ್ರಕರ್ತ ಹಾಗೂ ಹವ್ಯಾಸ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು ರಕ್ಷಿಸಿದ್ದರು. ಅದನ್ನು ತಾಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ಗೆ ಹಸ್ತಾಂತರ ಮಾಡಿದ್ದರು. ಮೃಗಾಲಯದ ತಜ್ಞ ಪಶುವೈದ್ಯೆ ಡಾ.ವಾಣಿ ಅವರು, ಅಸ್ವಸ್ಥ ಸ್ಥಿತಿಯಲ್ಲಿದ್ದ ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಿದ್ದರು. ಚೇತರಿಸಿಕೊಂಡ ಪಕ್ಷಿಯನ್ನು ತಾಲೂಕಿನ ಇಂಗಳಿಗಿ ಗ್ರಾಮದ ಬೆಟ್ಟದ ತುದಿಯಲ್ಲಿ ಹಾರಿ ಬಿಟ್ಟು ಪಂಜರದಿಂದ ಅದನ್ನು ಮುಕ್ತಗೊಳಿಸಿದರು.
ರಣಹದ್ದಿನ ನೈಜ ಸ್ಥಳದ ಪತ್ತೆ
ವನ್ಯಜೀವಿ ಸಂಶೋದಕ ಡಾ.ಸಮದ್ ಕೊಟ್ಟೂರು ಅವರು ರಾಷ್ಟೀಯ ರಣಹದ್ದು ತಜ್ಞರನ್ನು ಸಂಪರ್ಕಿಸಿ, ಅಪರೂಪವಾಗಿ ಕಂಡು ಬಂದ ರಣಹದ್ದಿನ ನೈಜ ಗುರುತನ್ನು ಪತ್ತೆ ಮಾಡಿದರು. ಬೃಹತ್ ಗಾತ್ರದ ಪಕ್ಷಿಯ ಎತ್ತರ, ಗಾತ್ರ, ತೂಕ, ಗರಿಗಳ ಬಣ್ಣ, ಮುಂತಾದ ಗುಣ, ಬಣ್ಣವನ್ನು ಪರೀಕ್ಷಿಸಿದ್ದು, ಇದೊಂದು ವರ್ಷ ವಯೋಮಾನದ ಯೂರೋಪಿಯನ್ ಗ್ರಿಫನ್ ಎಂಬ ರಣಹದ್ಧು ಎಂಬುದನ್ನು ಖಚಿತ ಪಡಿಸಿದರು. ಸಾಮಾನ್ಯವಾಗಿ ಹೆಚ್ಚಾಗಿ ಉತ್ತರ ಭಾರತದಲ್ಲಿ ಕಂಡು ಬರುವ ಈ ರಣಹದ್ದುಗಳು ದಕ್ಷಿಣ ಭಾರತಕ್ಕೆ ವಲಸೆ ಬಂದಾಗ ಕೆಲವೊಮ್ಮೆ ನಿರ್ಜಲೀಕರಣದಿಂದ ಬಸವಳಿದು ನೆಲಕ್ಕೆ ಬೀಳುತ್ತವೆ.

ರಣಹದ್ದುಗಳು ನೆಲಕ್ಕೆ ಬೀಳುವುದೇಕೆ?
ಹಾಗೆಯೇ ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಹೆಚ್ಚಾಗಿ ರಣಹದ್ದುಗಳು ಬಸವಳಿದು ನೆಲಕ್ಕೆ ಬಿದ್ದಿರುವ ಪ್ರಸಂಗಗಳು ಕಂಡುಬಂದಿವೆ. ಅವುಗಳನ್ನು ಸಂರಕ್ಷಿಸಿ, ಚಿಕಿತ್ಸೆ ನೀಡಿ ಅವು ಚೇತರಿಸಿಕೊಂಡ ಬಳಿಕ ಮರಳಿ ಹಾರಿಬಿಡಲಾಗುತ್ತದೆ. ಅದೇ ರೀತಿ ಇದೀಗ ಈ ರಣಹದ್ದನ್ನು ಕೂಡ ಸಮೀಪದ ಇಂಗಳಗಿ ಗ್ರಾಮದ ಬಳಿಯ ಎತ್ತರದ ಬೆಟ್ಟದ ತುದಿಯಲ್ಲಿ ಪೆಟ್ಟಿಗೆಯಿಂದ ಹೊರಬಿಡಲಾಗಿದೆ. ನಂತರ ಸುತ್ತಮುತ್ತಲಿನ ಪರಿಸರವನ್ನು ಅವಲೋಕಿಸಲು ಅವಕಾಶ ನೀಡಲಾಯಿತು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಟ್ಟದ ಮೇಲೆ ಹಾರಾಡಿದ ರಣಹದ್ದು ಸುಲಲಿತವಾಗಿ ಉತ್ತರ ದಿಕ್ಕಿನ ಕಡೆ ಹಾರಿ ಕಣ್ಮರೆಯಾಯಿತು.
ನೀಲಿ ಬಣ್ಣದ ಉಂಗುರ ಹಾಕಿದ್ದು ಏಕೆ?
ಈ ರಣಹದ್ದಿನ ಕಾಲಿಗೆ ವಿಶೇಷ ಗುರುತಿನ ನೀಲಿ ಬಣ್ಣದ ಉಂಗುರವನ್ನು ಹಾಕಲಾಗಿದೆ. ಉಂಗುರದ ಮೇಲೆ ಇಂಗ್ಲೀಷ್ ಅಕ್ಷರದಲ್ಲಿ ಸಿಯು, ಸಿಯು ಎಂದು ಮುದ್ರಿಸಲಾಗಿದೆ. ಇದನ್ನು ಆಧಾರಿಸಿ ಮುದೊಂದು ದಿನ ರಣಹದ್ದು ಹೊಸಪೇಟೆಯ ಪ್ರದೇಶದಲ್ಲಿ ಕಾಣಿಸಕೊಂಡು ರಕ್ಷಿಸಲ್ಪಟ್ಟಿತ್ತು ಎಂಬುದನ್ನು ಸುಲಭವಾಗಿ ಗುರುತಿಸಬಹುದು ಎಂದು ಡಾ. ಸಮ್ಮದ್ ಕೊಟ್ಟೂರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಎನ್. ಕಿರಣ್, ತಜ್ಞ ಪಶುವೈದ್ಯೆ ಡಾ. ವಾಣಿ, ವನ್ಯಜೀವಿ ಸಂಶೋಧಕ ಡಾ.ಸಮದ್ ಕೊಟ್ಟೂರು, ಹವ್ಯಾಸಿ ಛಾಯಾಗ್ರಾಹಕ ಶಿವಶಂಕರ ಬಣಗಾರ ಹಾಗೂ ಮೃಗಾಲಯದ ಸಿಬ್ಬಂದಿ ಸೇರಿದಂತೆ ಮತ್ತಿತರರು ಹಾಜರಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications