ಬಳ್ಳಾರಿ ವಿಮ್ಸ್ ದುರಂತ; ರೋಗಿಗಳ ಸಾವಿನ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು?
ಬಳ್ಳಾರಿ, ಸೆಪ್ಟೆಂಬರ್ 18: ಬಳ್ಳಾರಿಯ ವಿಮ್ಸ್ನಲ್ಲಿ ಇತ್ತೀಚೆಗೆ ಸಂಭವಿಸಿದ ಎರಡು ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ವಿಮ್ಸ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯುತ್ ಕೇಬಲ್ ಬ್ಲಾಸ್ಟ್ ಆಗಿರುವ ಸ್ಥಳ, ವಿದ್ಯುತ್ ಪೂರೈಕೆ ಆಗುವ ಜನರೇಟರ್, ಎಂಐಸಿಯುಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು. ಆರೋಗ್ಯ ಸಚಿವ ಡಾ.ಸುಧಾಕರ್ಗೆ ಸಚಿವ ಬಿ.ಶ್ರೀರಾಮುಲು, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಡಾ.ಸುಜಾತಾ, ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಅವರು ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಸುಧಾಕರ್ ಅವರು, ಸೆಪ್ಟೆಂಬರ್ 14ರಂದು ಬೆಳಗ್ಗೆ 8:20ರಿಂದ 9:30ರವರೆಗೆ ವಿದ್ಯುತ್ ಕಡಿತ ಆಗಿರುವುದು ನಿಜ. ಆದರೆ ಅಂದು ವೆಂಟಿಲೇಟರ್ನಲ್ಲಿದ್ದ ಮೌಲಾ ಹುಸೇನ್ ಮತ್ತು ಚೆಟ್ಟೆಮ್ಮ ಅವರ ಸಾವಿಗೆ ವಿದ್ಯುತ್ ಕಡಿತ ಕಾರಣವಲ್ಲ ಎಂದರು.
ಸಾವು ಪ್ರಕರಣಗಳ ಬಗ್ಗೆ ಸಚಿವರು ಹೇಳಿದ್ದೇನು?
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮೌಲಾಹುಸೇನ್ (35), ವಿಷಕಾರಿ ಹಾವು ಕಡಿತದಿಂದ ವಿಮ್ಸ್ಗೆ ದಾಖಲಾಗಿದ್ದ ಚೆಟ್ಟೆಮ್ಮ(30) ಎನ್ನುವವರ ಆರೋಗ್ಯದ ಸ್ಥಿತಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿಯೇ ಗಂಭೀರವಾಗಿತ್ತು. ಅವರಿಗೆ ಗುಣಮಟ್ಟದ ಚಿಕಿತ್ಸೆ ನೀಡಿದಾಗಿಯೂ ಆರೋಗ್ಯದಲ್ಲಿ ಸುಧಾರಣೆ ಆಗದೇ ಸಾವನ್ನಪ್ಪಿದ್ದಾರೆ ಅಂತಾ ವಿಮ್ಸ್ನ ಆಡಳಿತ ಮಂಡಳಿ ಮತ್ತು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದರು.

ಈ ಘಟನೆಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ತನಿಖೆ ನಡೆಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ತನಿಖಾ ಸಮಿತಿಯೊಂದನ್ನು ರಚಿಸಿದೆ. ಸದರಿ ಸಮಿತಿ ಒಂದು ಬಾರಿ ಭೇಟಿ ನೀಡಿ ಪರಿಶೀಲಿಸಿ ಹೋಗಿದೆ. ಜೆಸ್ಕಾಂ ಎಂಜಿನಿಯರ್ ಒಬ್ಬರ ಅವಶ್ಯವಿದೆ ಎಂದು ಸಮಿತಿಯಲ್ಲಿ ತಿಳಿಸಿದ್ದರು. ಹಾಗಾಗಿ ಜೆಸ್ಕಾಂ ಎಂಜಿನಿಯರ್ ಒಬ್ಬರನ್ನು ಒದಗಿಸಲಾಗುವುದು ಎಂದರು.
ಸಮಿತಿಯಿಂದ ಶೀಘ್ರ ವರದಿ ಸಲ್ಲಿಕೆ
ಸಮಿತಿಯು ಶೀಘ್ರ ವರದಿ ಸಲ್ಲಿಸಲಿದೆ ಎಂದು ವಿವರಿಸಿದ ಅವರು, ತನಿಖಾ ಸಮಿತಿ ವರದಿ ಅನುಸಾರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಮ್ಸ್ನಲ್ಲಿ ಉತ್ಕೃಷ್ಟ ಮಟ್ಟದ ಹಾಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗುವ ನಿಟ್ಟಿನಲ್ಲಿ ನಿರ್ದೇಶಕರು ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ತಜ್ಞ ವೈದ್ಯರ ಸಭೆ ಕರೆದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿಮ್ಸ್ ನಿರ್ದೇಶಕರ ನೇಮಕಾತಿಯು ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ವೈದ್ಯರು ತಮ್ಮ ಕರ್ತವ್ಯದ ಅವಧಿಯಲ್ಲಿ ಖಾಸಗಿ ಕ್ಲಿನಿಕ್ ನಡೆಸುವ ವಿಷಯದಲ್ಲಿ ಶೀಘ್ರವೇ ಬಿಗಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಮ್ಸ್ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಮ್ಸ್ ನಿರ್ದೇಶಕರಿಗೆ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications