ರಾಜಕೀಯ ಬೆಳವಣಿಗೆಗೆ ತಲೆ ಹಾಕಬಾರದು; ಸುಬುದೇಂದ್ರ ಶ್ರೀಗಳು
ಬಳ್ಳಾರಿ, ಜುಲೈ 28; "ನಿತ್ಯ ರಾಜ್ಯದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುತ್ತವೆ. ಅದಕ್ಕೆ ನಾವು ತಲೆ ಹಾಕಬಾರದು" ಎಂದು ಮಂತ್ರಾಲಯದ ಸುಬುದೇಂದ್ರ ತೀರ್ಥ ಶ್ರೀಗಳು ಹೇಳಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಚಾತುರ್ಮಾಸದ ನಿಮಿತ್ತ ಪಂಚಮುಖಿ ಆಂಜನೇಯ ಸ್ವಾಮಿ ಪ್ರತಿಷ್ಠಾನ ಮಹೋತ್ಸವ ನಿಮಿತ್ತ ಆಗಮಿಸಿದ್ದ ಶ್ರೀಗಳು ಮಾಧ್ಯಮಗಳ ಜೊತೆ ಮಾತನಾಡಿದರು.
"ನಾವು ಲೋಕ ಕಲ್ಯಾಣಕ್ಕಾಗಿ ಪೀಠಾಧಿಪತಿಗಳು ಪ್ರಾರ್ಥನೆ ಮಾಡುವವರು, ಧರ್ಮ ಪೀಠಾಧಿಪತಿಗಳಾಗಿರುವುದರಿಂದ ರಾಜಕೀಯ ಮಾತನಾಡಬಾರದು. ನಮ್ಮ ಕಾರ್ಯ ಏನಿದ್ದರೂ ಲೋಕ ಕಲ್ಯಾಣಕ್ಕಾಗಿ ಮಾತ್ರ" ಎಂದರು.

"ಸುಖಃ, ಶಾಂತಿ ನೆಮ್ಮದಿ ಕೊಡಲೆಂದು ಹೋಮ ಪೂಜೆಗಳನ್ನು ಮಾಡುತ್ತೇವೆ. ಕೊರೊನಾದಿಂದ ಈಡಿ ಮನುಕುಲವೇ ತತ್ತರಿಸಿ ಹೋಗಿದೆ. ನಮ್ಮ ಮಠದಿಂದ ಕೋವಿಡ್ ಸಮಯದಲ್ಲಿ ಸಂತ್ರಸ್ಥರಿಗೆ ಅನ್ನ, ಔಷಧಿ ವ್ಯವಸ್ಥೆ ಮಾಡಲಾಗಿದೆ. ಕಡುಬಡುವರಿಗೆ ಆರ್ಥಿಕ ಸಹಾಯ ಮಾಡಿದ್ದೇವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಎಲ್ಲರಿಗೂ ಭಗವಂತ ಆಯುರ್ ಆರೋಗ್ಯ ಕಲ್ಪಿಸಲಿ" ಎಂದು ಪ್ರಾರ್ಥಿಸಿದರು.
"ನಮ್ಮ ರಾಜ್ಯಕ್ಕೆ ಸಮರ್ಥ ನಾಯಕತ್ವ ಇರಲಿ. ನಾಯಕತ್ವ ಬದಲಾವಣೆ ವೇಳೆಯಲ್ಲಿ ಇಂಥವರಿರಲಿ ಅಂತ ನಾವು ಹೇಳೊದು ಸರಿಯಲ್ಲ. ಸೂಕ್ತವಾದವರು, ಜನಪರ ಚಿಂತನೆ ಇದ್ದವರು ಬರಲಿ ಎನ್ನುವುದು ನಮ್ಮ ಆಶಯವಾಗಿದೆ" ಎಂದು ತಿಳಿಸಿದರು.
"ಕೇಂದ್ರ ಈ ನಿಟ್ಟಿನಲ್ಲಿ ಚಿಂತನೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳುಬೇಕು ಎನ್ನುವುದು ನಮ್ಮ ಅಭಿಲಾಷೆ. ಆದರೆ ರಾಜಕೀಯ ರಂಗದಲ್ಲಿ ಮಠಾಧಿಪತಿಗಳು ಮಾತನಾಡೋದು ಅಷ್ಟು ಸೂಕ್ತವಲ್ಲ" ಎಂದು ಶ್ರೀ ಸುಬುದೇಂದ್ರ ತೀರ್ಥ ಶ್ರೀಗಳು ಹೇಳಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications