ರಾಜಕೀಯ ಬೆಳವಣಿಗೆಗೆ ತಲೆ ಹಾಕಬಾರದು; ಸುಬುದೇಂದ್ರ ಶ್ರೀಗಳು
ಬಳ್ಳಾರಿ, ಜುಲೈ 28; "ನಿತ್ಯ ರಾಜ್ಯದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುತ್ತವೆ. ಅದಕ್ಕೆ ನಾವು ತಲೆ ಹಾಕಬಾರದು" ಎಂದು ಮಂತ್ರಾಲಯದ ಸುಬುದೇಂದ್ರ ತೀರ್ಥ ಶ್ರೀಗಳು ಹೇಳಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಚಾತುರ್ಮಾಸದ ನಿಮಿತ್ತ ಪಂಚಮುಖಿ ಆಂಜನೇಯ ಸ್ವಾಮಿ ಪ್ರತಿಷ್ಠಾನ ಮಹೋತ್ಸವ ನಿಮಿತ್ತ ಆಗಮಿಸಿದ್ದ ಶ್ರೀಗಳು ಮಾಧ್ಯಮಗಳ ಜೊತೆ ಮಾತನಾಡಿದರು.
"ನಾವು ಲೋಕ ಕಲ್ಯಾಣಕ್ಕಾಗಿ ಪೀಠಾಧಿಪತಿಗಳು ಪ್ರಾರ್ಥನೆ ಮಾಡುವವರು, ಧರ್ಮ ಪೀಠಾಧಿಪತಿಗಳಾಗಿರುವುದರಿಂದ ರಾಜಕೀಯ ಮಾತನಾಡಬಾರದು. ನಮ್ಮ ಕಾರ್ಯ ಏನಿದ್ದರೂ ಲೋಕ ಕಲ್ಯಾಣಕ್ಕಾಗಿ ಮಾತ್ರ" ಎಂದರು.

"ಸುಖಃ, ಶಾಂತಿ ನೆಮ್ಮದಿ ಕೊಡಲೆಂದು ಹೋಮ ಪೂಜೆಗಳನ್ನು ಮಾಡುತ್ತೇವೆ. ಕೊರೊನಾದಿಂದ ಈಡಿ ಮನುಕುಲವೇ ತತ್ತರಿಸಿ ಹೋಗಿದೆ. ನಮ್ಮ ಮಠದಿಂದ ಕೋವಿಡ್ ಸಮಯದಲ್ಲಿ ಸಂತ್ರಸ್ಥರಿಗೆ ಅನ್ನ, ಔಷಧಿ ವ್ಯವಸ್ಥೆ ಮಾಡಲಾಗಿದೆ. ಕಡುಬಡುವರಿಗೆ ಆರ್ಥಿಕ ಸಹಾಯ ಮಾಡಿದ್ದೇವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಎಲ್ಲರಿಗೂ ಭಗವಂತ ಆಯುರ್ ಆರೋಗ್ಯ ಕಲ್ಪಿಸಲಿ" ಎಂದು ಪ್ರಾರ್ಥಿಸಿದರು.
"ನಮ್ಮ ರಾಜ್ಯಕ್ಕೆ ಸಮರ್ಥ ನಾಯಕತ್ವ ಇರಲಿ. ನಾಯಕತ್ವ ಬದಲಾವಣೆ ವೇಳೆಯಲ್ಲಿ ಇಂಥವರಿರಲಿ ಅಂತ ನಾವು ಹೇಳೊದು ಸರಿಯಲ್ಲ. ಸೂಕ್ತವಾದವರು, ಜನಪರ ಚಿಂತನೆ ಇದ್ದವರು ಬರಲಿ ಎನ್ನುವುದು ನಮ್ಮ ಆಶಯವಾಗಿದೆ" ಎಂದು ತಿಳಿಸಿದರು.
"ಕೇಂದ್ರ ಈ ನಿಟ್ಟಿನಲ್ಲಿ ಚಿಂತನೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳುಬೇಕು ಎನ್ನುವುದು ನಮ್ಮ ಅಭಿಲಾಷೆ. ಆದರೆ ರಾಜಕೀಯ ರಂಗದಲ್ಲಿ ಮಠಾಧಿಪತಿಗಳು ಮಾತನಾಡೋದು ಅಷ್ಟು ಸೂಕ್ತವಲ್ಲ" ಎಂದು ಶ್ರೀ ಸುಬುದೇಂದ್ರ ತೀರ್ಥ ಶ್ರೀಗಳು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications