ಕೂಡ್ಲಿಗಿಯಲ್ಲಿ ಕೂಲ್ ಆಗಿ ಶೆಣೈ ಕೇಳಿದ ಪ್ರಶ್ನೆ 'ಫೇಸ್ಬುಕ್ ಎಂದ್ರೇನು?'
ಕೂಡ್ಲಿಗಿ, ಜೂನ್ 09: ಕೂಡ್ಲಿಗಿ ಉಪವಿಭಾಗ ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ನೀಡಿ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಅನುಪಮಾ ಶೆಣೈ ಅವರು ಕೂಡ್ಲಿಗಿಗೆ ಮರಳಿದ್ದಾರೆ. ಎದುರಿಗೆ ಸಿಕ್ಕ ಸುದ್ದಿಗಾರರು ಫೇಸ್ ಬುಕ್ ಸ್ಟೇಟಸ್ ಬಗ್ಗೆ ಕೇಳಿದ ಪ್ರಶ್ನೆಗೆ ಕೂಲ್ ಆಗಿ ಉತ್ತರಿಸಿದ ಅನುಪಮಾ, ಫೇಸ್ ಬುಕ್ ಎಂದರೇನು? ಎಂದು ಮರು ಪ್ರಶ್ನೆ ಹಾಕಿದ್ದಾರೆ.[ಅನುಪಮಾ ವರ್ಸಸ್ ಪರಮೇಶ್ವರ್ : ಇದುವರೆಗಿನ ಕಥೆಗಳು]
ಶನಿವಾರ (ಜೂನ್ 04) ರಂದು ರಾಜೀನಾಮೆ ಇತ್ತ ಬಳಿಕ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಅನುಪಮಾ ಶೆಣೈ ಅವರ ಫ್ರೊಫೈಲ್ ಹೆಚ್ಚು ಸಕ್ರಿಯವಾಗಿತ್ತು. ಶೆಣೈ ಅವರು ಎಲ್ಲಿದ್ದಾರೆ ಎಂಬ ಕುತೂಹಲದ ಪ್ರಶ್ನೆಯ ಜೊತೆಗೆ ಅವರು ನೆಕ್ಸ್ಟ್ ಏನು ಸ್ಟೇಟಸ್ ಹಾಕುತ್ತಾರೆ ಎಂಬ ಸಹಜ ಕುತೂಹಲ ಈ ಕ್ಷಣದ ತನಕ ಇದ್ದೇ ಇದೆ.['ರೆಬೆಲ್' ಕಾಪ್ ಅನುಪಮಾ ವ್ಯಕ್ತಿಚಿತ್ರ]

ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಪರಮೇಶ್ವರ್ ನಾಯ್ಕ್ ಅವರ ವಿರುದ್ಧ ಸಮರ ಸಾರುವ ಸ್ಟೇಟಸ್ ಬಂದ ಮೇಲಂತೂ ರೋಚಕತೆ ಹೆಚ್ಚಾಯಿತು. ಅನುಪಮಾ ಅವರ ಮನವೊಲಿಸಿ ಕರೆದುಕೊಂಡು ಬರಲು ಪೊಲೀಸರ ತಂಡ ಬರುತ್ತಿದ್ದಂತೆ, ಅನುಪಮಾ ಅವರು ಉತ್ತರ ಕನ್ನಡ ಜಿಲ್ಲೆ ತೊರೆದು ಬಳ್ಳಾರಿ ಜಿಲ್ಲೆಗೆ ಗುರುವಾರ ಬೆಳಗ್ಗೆ ಬಂದಿದ್ದಾರೆ.[ಫೇಸ್ ಬುಕ್ ಖಾತೆ ಹ್ಯಾಕ್ ಆಗಿರಬಹುದು']
ಬೆಳ್ಳಂಬೆಳ್ಳಗೆ ಅನುಪಮಾ ಅವರನ್ನು ಎದುರುಗೊಂಡ ಪತ್ರಕರ್ತರು ಕೇಳಿದ ಪ್ರಶ್ನೆಗೆ ಹೆಚ್ಚಿನ ಪ್ರತಿಕ್ರಿಯೆ ನೀಡದ ಅನುಪಮಾ, ಫೇಸ್ ಬುಕ್ ಎಂದರೇನು? ನನಗೆ ಯಾವ ಫೇಸ್ ಬುಕ್ ಗೊತ್ತಿಲ್ಲ. ವಿಡಿಯೋ ನೋಡಿ:
ನನ್ನ ಹೆಸರಿನಲ್ಲಿ ಬೇರೆ ಯಾರೋ ಪೋಸ್ಟ್ ಹಾಕುತ್ತಿರಬಹುದು. ನನ್ನ ಪ್ರೊಫೈಲ್ ಹ್ಯಾಕ್ ಆಗಿರುವ ಸಾಧ್ಯತೆಯಿದೆ ಎಂದಿದ್ದಾರೆ. ಡಿವೈಎಸ್ಪಿ ಅನುಪಮಾ ಅವರು ಸದ್ಯದಲ್ಲೇ ಎಸ್ ಪಿ ಚೇತನ್ ಅವರನ್ನು ಭೇಟಿ ಮಾಡಿ ಮುಂದಿನ ನಡೆ ಇಡಲಿದ್ದಾರೆ.ಅನುಪಮಾ ಅವರೇ, [ಆತ್ಮರಕ್ಷಣೆಗಾಗಿ ಪಿಸ್ತೂಲು ಇಟ್ಟುಕೊಳ್ಳಿ!] (ಒನ್ಇಂಡಿಯಾ ಸುದ್ದಿ)
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications