ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಪೊಲೀಸ್ ಶಕ್ತಿ ಸಾಕು: ಶೆಣೈ
Recommended Video

ಬಳ್ಳಾರಿ, ಅಕ್ಟೋಬರ್ 30: ಕೂಡ್ಲಿಗಿಯ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಅವರು ಹೊಸ ರಾಜಕೀಯ ಪಕ್ಷ ಕಟ್ಟಲು ಮುಂದಾಗಿರುವುದು ಹೊಸ ಸುದ್ದಿಯೇನಲ್ಲ, ಉಡುಪಿ, ಕಲಬುರಗಿಯಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದರು. ಸೋಮವಾರದಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಈ ಮೊದಲೇ ಘೋಷಿಸಿದ್ದಮ್ತೆ ನವೆಂಬರ್ ಮೊದಲ ವಾರದಲ್ಲಿಯೇ ಅಸ್ತಿತ್ವಕ್ಕೆ ಬರಲಿದೆ. ಬಹುಶಃ ನವೆಂಬರ್ 01ರ ಕನ್ನಡ ರಾಜ್ಯೋತ್ಸವ ದಿನದಂದು ಪಕ್ಷದ ಹೆಸರು ಘೋಷಣೆ, ಪಕ್ಷದ ಕಚೇರಿ ಉದ್ಘಾಟನೆಯಾಗಲಿದೆ.
ಶೆಣೈ ಎಲ್ಲಿಂದ ಸ್ಪರ್ಧೆ?: ನಾನು ಚುನಾವಣೆಗೆ ಸ್ಪರ್ಧಿಸಲು ಆಸೆ ಹೊಂದಿದ್ದೇನೆ, ಆದರೆ, ಕ್ಷೇತ್ರ ಯಾವುದು ಎಂದು ಇನ್ನೂ ಅಂತಿಮವಾಗಿಲ್ಲ ಎಂದರು.
ಮೊದಲ ಹಂತದಲ್ಲಿ 80 ಕ್ಷೇತ್ರಗಳನ್ನು ಪ್ರಮುಖವಾಗಿ ಪರಿಗಣಿಸಿದ್ದೇವೆ, ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಗಳನ್ನು ಕಣಕ್ಕಿಳಿಸುವ ಇರಾದೆ ಇದೆ ಎಂದರು. ಸುದ್ದಿಗೋಷ್ಠಿ ಮುಖ್ಯಾಂಶಗಳು ಮುಂದಿವೆ...

ಹೊಸ ಪಕ್ಷ ಉದ್ಘಾಟನೆ ಯಾವಾಗ?
ಈ ಮೊದಲೇ ಘೋಷಿಸಿದ್ದಂತೆ ನವೆಂಬರ್ ಮೊದಲ ವಾರದಲ್ಲಿಯೇ ಅಸ್ತಿತ್ವಕ್ಕೆ ಬರಲಿದೆ. ಬಹುಶಃ ನವೆಂಬರ್ 01ರ ಕನ್ನಡ ರಾಜ್ಯೋತ್ಸವ ದಿನದಂದು ಪಕ್ಷದ ಹೆಸರು ಘೋಷಣೆ, ಪಕ್ಷದ ಕಚೇರಿ ಉದ್ಘಾಟನೆಯಾಗಲಿದೆ. ಪಕ್ಷದ ಉದ್ದೇಶ, ಪ್ರಣಾಳಿಕೆ ವಿವರ ನಂತರ ಪ್ರಕಟಿಸಲಾಗುವುದು.ನನ್ನ ಪಕ್ಷದಲ್ಲಿ ಕೃಷಿ, ಆರೋಗ್ಯ, ಕಾನೂನು ಮತ್ತು ಸುವ್ಯವಸ್ಥೆ. ಸಾರಿಗೆ ಮತ್ತು ಶಿಕ್ಷಣದಲ್ಲಿರುವವರಿಗೆ ಪಕ್ಷದಿಂದ ಸ್ಪರ್ದಿಸಲು ಹೆಚ್ಚು ಒತ್ತುಕೊಡಲಿದ್ದೇವೆ.

ಭ್ರಷ್ಟಾಚಾರದ ಜೊತೆ ದುಷ್ಟಾಚಾರ
* ರಾಜ್ಯದಲ್ಲಿ ಭ್ರಷ್ಟಾಚಾರದ ಜೊತೆ ದುಷ್ಟಾಚಾರ ಕೂಡಾ ವ್ಯಾಪಕವಾಗಿದೆ. ಡಿಕೆ ರವಿ ಪ್ರಕರಣದಂತೆ ಎಂ ಕೆ ಗಣಪತಿ ಪ್ರಕರಣ ಸಹ ಮುಚ್ಚಿ ಹಾಕುವ ಸಾಧ್ಯತೆಯಿದೆ
* ಗಣಪತಿ ಆತ್ಮಹತ್ಯೆ ಪತ್ರ ದಾಖಲೆಗಳಲ್ಲಿ ಇಲ್ಲ ನಿಜ, ವಿಡಿಯೋ ಸಾಕ್ಷ್ಯವಿತ್ತು. ಆದರೆ, ಡೆಡ್ ಬಾಡಿ ಕೈಯಲ್ಲಿ ಡೆತ್ ನೋಟ್ ಇತ್ತು.
ಗಣಪತಿ ಪ್ರಕರಣ ಚುನಾವಣೆಯಲ್ಲಿ ಪ್ರಮುಖ ಅಂಶವಾಗುವ ಸಾಧ್ಯತೆಯಿದ್ದು, ಕಾಂಗ್ರೆಸ್ ಸೂಕ್ತ ನಿರ್ಧಾರ ಕೈಗೊಳ್ಳುವುದು ಒಳ್ಳೆಯದು ಎಂದರು.

ಅನುಪಮಾ ಅವರ ಮುಖ್ಯ ಗುರಿ
ನಾನು ಕೆಲಸ ಮಾಡುವ ಸಂದರ್ಭದಲ್ಲಿ ನನ್ನ ಮೇಲೆ ರಾಜಕೀಯ ಪ್ರಯೋಗ ಮಾಡಿದರು. ಹಾಗಾಗಿ ರಾಜಕೀಯ ಪ್ರವೇಶ ಮಾಡಬೇಕಾಯಿತು. ಇದರ ಹಿನ್ನಲೆಯಲ್ಲಿ ರಾಜಕೀಯದಲ್ಲಿ ಪೊಲೀಸ್ ಶಕ್ತಿಯನ್ನು ಬಳಸಿ ಭ್ರಷ್ಟಾಚಾರವನ್ನ ನಿರ್ಮೂಲನೆ ಮಾಡಲು ಇಚ್ಛಿಸುತ್ತೇನೆ. ಸಂವಿಧಾನಕ್ಕೆ ಹೆಚ್ಚು ಒತ್ತುಕೊಟ್ಟು ಜನರಿಗೆ ಮತ್ತು ಸರ್ಕಾರಿ ನೌಕರರಿಗೆ ನೆಮ್ಮದಿ ಜೀವನ ನೀಡುವುದು ನಮ್ಮ ಮುಖ್ಯ ಗುರಿ

ಕಾನೂನು ಹೋರಾಟ ಮುಂದುವರೆದಿದೆ
ಡಿವೈಎಸ್ಪಿ ರಾಜೀನಾಮೆ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರೆದಿದೆ,
ಕಾನೂನು ಹೋರಾಟದಲ್ಲಿ ಜಯ ಸಿಗದೆ ಮರಳಿ ಇಲಾಖೆಗೆ ಹೋಗಲು ಅಲ್ಲ, ಬದಲಾಗಿ ಸರ್ಕಾರಿ ನೌಕರರಿಗೆ ಆದ ಅನ್ಯಾಯ, ಮಹಿಳೆಯ ಆದ ಅಗೌರವದ ವಿರುದ್ದವಾಗಿ ಕಾನೂನು ಹೋರಾಟ ಮಾಡುತ್ತಿರುವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications