ಬಳ್ಳಾರಿ ಉಪ ಮೇಯರ್ ಪದ್ಮಾವತಿ ಕೊಲೆ ಹಿಂದೆ ಯಾರ ಕೈ?: ಟಪಾಲ್ ಪ್ರಶ್ನೆ
ಬಳ್ಳಾರಿ, ಮಾರ್ಚ್ 26: ಕರಾವಳಿ, ಮಲೆನಾಡು ಭಾಗದ ಯಾರೇ ಕೊಲೆಗೀಡಾಗಲಿ ಬೊಬ್ಬೆ ಹೊಡೆಯುವ ಬಿಜೆಪಿ, ತಮ್ಮದೇ ಪಕ್ಷದ ರಾಜ್ಯ ಮಟ್ಟದ ಮಹಿಳಾ ನಾಯಕಿ, ಬಳ್ಳಾರಿ ನಗರ ಮಾಜಿ ಉಪಮೇಯರ್ ಪದ್ಮಾವತಿ ಯಾದವ್ ಕೊಲೆ ಪ್ರಕರಣದ ಬಗ್ಗೆ ಮೌನ ವಹಿಸಿರುವುದು ಯಾವ ಪುರಷಾರ್ಥಕ್ಕಾಗಿ, ಯಾರಿಗಾಗಿ ಎಂದು ಆರ್ ಟಿಐ ಕಾರ್ಯಕರ್ತ ಟಪಾಲ್ ಗಣೇಶ್ ಪ್ರಶ್ನಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಯಾರೇ ಕೊಲೆ ಆಗಲಿ 'ತನ್ನ ಕಾರ್ಯಕರ್ತರ ಕಗ್ಗೊಲೆ, ಪ್ರಜಾಪ್ರಭುತ್ವದ ಕೊಲೆ' ಎಂದು ಆರೋಪ - ಟೀಕೆ ಮಾಡುತ್ತಲೇ ಪ್ರಚಾರ ಪಡೆಯುವ ಬಿಜೆಪಿ, ಸತ್ತವರ ಮನೆಯಲ್ಲಿ ರಾಜಕೀಯ ಮಾಡುತ್ತಿದೆ. ಸತ್ತವರ ಲೆಕ್ಕವನ್ನು ತಮ್ಮ ಖಾತೆಗೆ ಹಾಕಿಕೊಳ್ಳುತ್ತಿದೆ ಎಂದರು.
ಆದರೆ, ಬಳ್ಳಾರಿಯ ಪದ್ಮಾವತಿ ಯಾದವ್ ಕೊಲೆ ಪ್ರಕರಣ ಕುರಿತು ಏತಕ್ಕಾಗಿ ಮಾತನಾಡುತ್ತಿಲ್ಲ? ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ಮುಖಂಡರಿಗೆ ತಮ್ಮದೇ ಪಕ್ಷದ ನಾಯಕಿ, ಉಪ ಮೇಯರ್ ಆಗಿದ್ದ ಪದ್ಮಾವತಿ ಯಾದವ್ ಅವರ ನೆನಪಿಲ್ಲವೇ? ಅವರು ಪಕ್ಷಕ್ಕಾಗಿ ಸಲ್ಲಿಸಿದ ಸೇವೆ, ತ್ಯಾಗ, ಪಕ್ಷವನ್ನು ಸಂಘಟಿಸಲು ತೋರಿದ ಬದ್ಧತೆಯನ್ನು ಬಿಜೆಪಿ ಆಗಲೇ ಮರೆತುಬಿಟ್ಟಿತೆ ಎಂದು ಟಪಾಲ್ ಗಣೇಶ್ ಪ್ರಶ್ನಿಸಿದ್ದಾರೆ.

ಯಾವುದೇ ತನಿಖೆಗಳಿಂದ ಈ ಕೊಲೆ ಹಿಂದಿನ ಕೈಗಳು, ಕೊಲೆಗೆ ಕಾರಣ ಮತ್ತು ಆರೋಪಿಗಳ ಸುಳಿವು ಬಹಿರಂಗ ಆಗಲೇ ಇಲ್ಲ. ಏತಕ್ಕಾಗಿ? ಪದ್ಮಾವತಿ ಕೊಲೆ ಆದಾಗ ಬಿಜೆಪಿಯದ್ದೇ ಸರಕಾರ ಇತ್ತು. ಕಾಂಗ್ರೆಸ್ ಸರಕಾರದ ಐದು ವರ್ಷಗಳ ಆಡಳಿತ ಪೂರ್ಣಗೊಳ್ಳುವಾಗಲೂ ಈ ಪ್ರಕರಣದ ಸತ್ಯಾಸತ್ಯತೆ ಬಹಿರಂಗ ಆಗಲೇ ಇಲ್ಲ ಎಂದರು.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಜನತೆಗೆ ಉತ್ತರಿಸಲಿಕ್ಕಾಗಿ ಕಾಂಗ್ರೆಸ್ ಸರಕಾರ ಅಥವಾ ತನಿಖಾ ಅಧಿಕಾರಿಗಳು ಜಿ.ಪದ್ಮಾವತಿ ಯಾದವ್ ಕೊಲೆ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಜಿ. ಪದ್ಮಾವತಿ ಯಾದವ್ ಕೊಲೆಯ ಪ್ರಮುಖ ಆರೋಪಿಗಳು ಯಾರು ಎನ್ನುವುದು ಬಳ್ಳಾರಿ ನಗರದ ಜನಸಾಮಾನ್ಯರಿಗೆ ಮತ್ತು ಬಿಜೆಪಿಯ ರಾಜ್ಯ - ಸ್ಥಳೀಯ ಮತ್ತು ಹಿರಿಯ ಮುಖಂಡರಿಗೆ ಗೊತ್ತಿದ್ದರೂ ಅವರನ್ನು ಪಕ್ಕದಲ್ಲಿ ಕೂಡಿಸಿಕೊಂಡು ಆದರ್ಶ, ಭ್ರಷ್ಟಾಚಾರ, ಪ್ರಾಮಾಣಿಕತೆ ಇನ್ನಿತರ ವಿಚಾರಗಳ ಬಗ್ಗೆ ಫುಂಖಾನುಫುಂಖವಾಗಿ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications