ಹೆಂಡತಿ ಶೀಲ ಶಂಕಿಸಿ ಕೊಲೆ ಮಾಡಿದ ಪತಿರಾಯ ಹೇಳಿದ್ದೇನು?
ಬಳ್ಳಾರಿ, ಫೆಬ್ರುವರಿ 02: ರಾತ್ರಿ ಮಲಗಿದ ನನ್ನ ಪತ್ನಿ ಮತ್ತೆ ಏಳಲೇ ಇಲ್ಲ, ಅವಳು ಹೃದಯಾಘಾತದಿಂದ ಸತ್ತು ಹೋಗಿದ್ದಾಳೆ ಎಂದು ಸಂಬಂಧಿಕರಿಗೆ ಕರೆ ಮಾಡಿ ನಾಟಕವಾಡಿದ ಪತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಹೀಗೆ ನಾಟಕವಾಡಿ ಜನರನ್ನು ಸೇರಿಸಿ ಕೊನೆಯಲ್ಲಿ ತಾನೇ ಪೊಲೀಸ್ ಅತಿಥಿಯಾದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಸಿಲಾ ನಗರದಲ್ಲಿ ನಡೆದಿದೆ. ಕಳೆದ ಎಂಟು ವರ್ಷಗಳ ಹಿಂದೆ ಶಾರದಾ ಭಾಯಿ ಜೊತೆ ಢಾಕ್ಯಾ ನಾಯಕ್ ಮದುವೆಯಾಗಿದೆ.
ಆದರೆ ಪದೇ ಪದೇ ಹೆಂಡತಿಯ ಶೀಲದ ಮೇಲೆ ಗಂಡ ಸಂಶಯ ಪಡುತಿದ್ದ ಕಾರಣ ಕಳೆದ ಎರಡು ದಿನಗಳ ಹಿಂದೆ ಢಾಕ್ಯಾ ನಾಯಕ್ ಹೆಂಡತಿಯ ಜೊತೆ ಇದೇ ವಿಷಯಕ್ಕೆ ಜಗಳ ಮಾಡಿಕೊಂಡಿದ್ದಾನೆ.

ಜಗಳ ವಿಕೋಪಕ್ಕೆ ತಿರುಗಿದಾಗ ಅಕ್ಕ ಪಕ್ಕದ ಮನೆಯವರು ಜಗಳ ಬಿಡಿಸಿದ್ದಾರೆ. ಆದರೆ ನಿನ್ನೆ ರಾತ್ರಿ ಗಂಡ ಹೆಂಡತಿ ಇಬ್ಬರೂ ಊಟ ಮಾಡಿ ಮಲಗಿದ್ದು ತನ್ನ ಎರಡು ಮಕ್ಕಳನ್ನು ಮನೆ ಆಚೆ ಮಲಗಲು ಹೇಳಿ, ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.
ಬಳಿಕ ಹೆಂಡತಿ ಮನೆಯವರಿಗೆ ಕರೆ ಮಾಡಿ ನನ್ನ ಹೆಂಡತಿ ರಾತ್ರಿ ಮಲಗಿದವಳು ಮತ್ತೆ ಏಳುತ್ತಲೇ ಇಲ್ಲ ಅವಳಿಗೆ ಹೃದಯಾಘಾತ ಆಗಿರಬಹುದು ಎಂದು ನಾಟಕ ಆಡಿದ್ದಾನೆ. ಬಳಿಕೆ ಹೆಂಡತಿ ಮನೆಯವರು ಮನೆಗೆ ಬಂದಿದ್ದಾರೆ.

ಅನುಮಾನ ಬಂದ ಹೆಂಡತಿ ಮನೆಯವರು ಪೊಲೀಸ್ ಠಾಣೆಗೆ ಕರೆ ಮಾಡಿದ್ದು, ಸಂಡೂರು ಪೊಲೀಸರು ಸ್ಥಳಕ್ಕೆ ಆಗಮಸಿ ಪರಿಶೀಲನೆ ನಡೆಸಿದ್ದಾರೆ. ಶಾರದಾ ಅವರ ಕುತ್ತಿಗೆ ಸುತ್ತ ಸಣ್ಣ ಪುಟ್ಟ ಗಾಯಗಳಾಗಿದ್ದು, ಅನುಮಾನಗೊಂಡ ಪೊಲೀಸರು ಪತಿ ಢಾಕ್ಯಾ ನಾಯಕ್ ನನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications