ಕಡಕೊಳದಲ್ಲಿ ಕರಡಿ ದಾಳಿ: ತೀವ್ರವಾಗಿ ಗಾಯಗೊಂಡ ಮಹಿಳೆ
ಬಳ್ಳಾರಿ, ಸೆಪ್ಟೆಂಬರ್ 04: ಕೂಡ್ಲಿಗಿ ತಾಲೂಕಿನ ಕಡಕೊಳ ವೀಳ್ಯದೆಲೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಮ್ಮ(65) ಎಂಬ ಮಹಿಳೆ ಮೇಲೆ ತಾಯಿ ಕರಡಿ ಮತ್ತು ಎರಡು ಮರಿ ಕರಡಿಗಳು ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿವೆ.
ಗಾಯಾಳು ವಿಮ್ಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಲಮ್ಮ ತಮ್ಮದೇ ಆದ ಸ್ವಂತ ವೀಳ್ಯದೆಲೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ, ಹಿಂಬದಿಯಿಂದ ಬಂದ ತಾಯಿ ಕರಡಿ ಮತ್ತು ಅಂದಾಜು ಒಂದು ವರ್ಷದ ಎರಡು ಮರಿ ಕರಡಿಗಳು ಈಕೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿವೆ.
ಮೈ ತುಂಬಾ ಕಾಲುಗಳಿಂದ ಗೀರಿ, ಆಘಾತಗೊಳಿಸಿದ್ದು, ಕರಡಿ ದಾಳಿಯಿಂದ ಕಂಗೆಟ್ಟ ಮಲ್ಲಮ್ಮ, ಗಟ್ಟಿಯಾಗಿ ಕೂಗಿಕೊಂಡಾಗ, ಅಕ್ಕಪಕ್ಕದ ಕೂಲಿಗಳು ಓಡಿಬಂದು, ಕರಡಿಗಳ ಮೇಲೆ ಕಲ್ಲುತೂರಿ, ಓಡಿಸಿ, ಗಾಯಾಳುವನ್ನು ಚಿಕ್ಕಜೋಗಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲು, ಶಿಫಾರಸ್ಸು ಮಾಡಿದ್ದಾರೆ.

ಈ ಕುರಿತು ವಲಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಸ್. ಮಂಜುನಾಥ್ ಒನ್ ಇಂಡಿಯಾ ಜೊತೆ ಮಾತನಾಡಿ, ಕರಡಿ ದಾಳಿ ನಡೆದ ಸ್ಥಳದಲ್ಲಿ ಒಂದು ವರ್ಷದ ಮರಿಯನ್ನು ಹಿಡಿದಿದ್ದೇವೆ. ಮತ್ತೊಂದು ಮರಿ ಹಾಗೂ ತಾಯಿ ಕರಡಿಗಾಗಿ ಕಾಯುತ್ತಿದ್ದೇವೆ.
ಗಾಯಾಳು ಪ್ರಸ್ತುತ ವಿಮ್ಸ್ಗೆ ದಾಖಲಾಗಿದ್ದಾರೆ. ಗಾಯಾಳು ಮಹಿಳೆಯ ಕುಟುಂಬದ ಸದಸ್ಯರು ಮತ್ತು ವೈದ್ಯರ ಜೊತೆಯಲ್ಲಿ ಸಂಪರ್ಕದಲ್ಲಿದ್ದೇನೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವೆ' ಎಂದು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications