ಬಳ್ಳಾರಿಯಲ್ಲಿ ಅಕ್ಷಯ ತೃತೀಯದಂದು ನಾಲ್ಕು ಬಾಲ್ಯ ವಿವಾಹ ತಡೆದ ಅಧಿಕಾರಿಗಳು
ಬಳ್ಳಾರಿ, ಏಪ್ರಿಲ್ 28: ಲಾಕ್ ಡೌನ್ ನಡುವೆಯೂ ಬಾಲ್ಯ ವಿವಾಹ ಮಾಡಲು ಮುಂದಾಗಿರುವ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ಒಂದೇ ದಿನ ಬಳ್ಳಾರಿಯಲ್ಲಿ ನಾಲ್ಕು ಜೋಡಿ ಬಾಲ್ಯ ವಿವಾಹ ಪತ್ತೆಯಾಗಿದೆ.
ನಿನ್ನೆ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಳ್ಳಾರಿ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ನಡೆಯುತ್ತಿದ್ದ ಎರಡು ನಿಶ್ಚಿತಾರ್ಥ ಕಾರ್ಯಕ್ರಮ ಹಾಗೂ ಎರಡು ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಡೆದಿದೆ.
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಮೂಲದ 17 ವರ್ಷದ ಯುವತಿಗೆ ಬೆಳಗ್ಗೆ 5 ಗಂಟೆಗೆ ತರಾತುರಿಯಲ್ಲಿ ನಿಶ್ಚಿತಾರ್ಥ ಮಾಡಿ ಮುಗಿಸಿದ್ದಾರೆ. ಇನ್ನೊಂದೆಡೆ ಬಳ್ಳಾರಿ ಗಾಂಧಿನಗರ ಮೂಲದ 16 ವರ್ಷದ ಬಾಲಕಿಗೆ ನಿಶ್ಚಿತಾರ್ಥ ಮಾಡಲು ಮುಂದಾಗಿದ್ದ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ರಕ್ಷಿಸಿದ್ದಾರೆ. ಈ ಇಬ್ಬರು ಬಾಲಕಿಯರೊಂದಿಗೆ ಮದುವೆಯಾಗಲು ಮುಂದಾಗಿದ್ದವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದರೊಂದಿಗೆ ಜಿಲ್ಲೆಯ ಸಂಡೂರು ತಾಲೂಕು ಹಾಗೂ ಬಳ್ಳಾರಿ ತಾಲೂಕಿನ ಯಾಳ್ಪಿ ಗ್ರಾಮದಲ್ಲಿ ನಡೆಯಬೇಕಿದ್ದ ಎರಡು ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ.

ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹಾಗೂ ಬಳ್ಳಾರಿ ಗಾಂಧಿನಗರ ಮೂಲದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿ ನಗರದ ಶಾಂತಿಧಾಮದಲ್ಲಿ ಇರಿಸಲಾಗಿದೆ. ಮದುವೆ ಮಾಡಲು ಮುಂದಾಗಿದ್ದ ಕುಟುಂಬಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications