ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ; ವಿಜಯನಗರಕ್ಕೆ ಸಿಎಂ ಕೊಟ್ರು ಭರ್ಜರಿ ಉಡುಗೊರೆ

|
Google Oneindia Kannada News

Recommended Video

B.S.Yediyurappa released 243.35cr fund for Vijayanagar assembly constituency | Oneindia Kannada

ಬಳ್ಳಾರಿ, ನವೆಂಬರ್ 11 : ಅನರ್ಹ ಶಾಸಕರ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭರ್ಜರಿ ಉಡುಗೊರೆ ನೀಡಿದ್ದಾರೆ. ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದ್ದು, ಇಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರಕ್ಕೆ 243.35 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ. ಮೊದಲ ಹಂತದಲ್ಲಿ 75 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಆನಂದ್ ಸಿಂಗ್ ಕ್ಷೇತ್ರದ ಶಾಸಕರಾಗಿದ್ದು, ಅನರ್ಹಗೊಂಡಿದ್ದಾರೆ.

2ನೇ ಉಪ ಚುನಾವಣೆ ಎದುರಿಸುತ್ತಿರುವ ವಿಜಯನಗರ ಪರಿಚಯ2ನೇ ಉಪ ಚುನಾವಣೆ ಎದುರಿಸುತ್ತಿರುವ ವಿಜಯನಗರ ಪರಿಚಯ

ತುಂಗಭದ್ರಾ ನದಿಯಯಿಂದ ನೀರನ್ನು ಎತ್ತಿ 18 ಕೆರೆ, 4 ಚೆಕ್ ಡ್ಯಾಂ ಭರ್ತಿ ಮಾಡಿ ಕೃಷಿ, ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ಅನುದಾನವನ್ನು ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ಈ ಯೋಜನೆಯಿಂದಾಗಿ ಸುಮಾರು 11 ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ.

ಹೊಸ ಜಿಲ್ಲೆ ರಚನೆಗೆ ಯಡಿಯೂರಪ್ಪ ಆಸಕ್ತಿಹೊಸ ಜಿಲ್ಲೆ ರಚನೆಗೆ ಯಡಿಯೂರಪ್ಪ ಆಸಕ್ತಿ

Yediyurappa

ನವೆಂಬರ್ ಮೊದಲ ವಾರದಲ್ಲಿ ಗ್ರಾಮೀಣ ರಸ್ತೆ, ಕಿರು ಸೇತುವೆಗಳ ನಿರ್ಮಾಣಕ್ಕೆ ಸರ್ಕಾರ 40 ಕೋಟಿ ರೂ. ಬಿಡುಗಡೆ ಮಾಡಿತ್ತು. ಈಗ ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮೊದಲು 243 ಕೋಟಿ ರೂ. ಅನುದಾನ ನೀಡಲಾಗಿದೆ.

ವಿಜಯನಗರ ಜಿಲ್ಲೆ; ಯಡಿಯೂರಪ್ಪ ಕರೆದ ಸಭೆಯಲ್ಲಿ ಆಗಿದ್ದೇನು? ವಿಜಯನಗರ ಜಿಲ್ಲೆ; ಯಡಿಯೂರಪ್ಪ ಕರೆದ ಸಭೆಯಲ್ಲಿ ಆಗಿದ್ದೇನು?

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಆನಂದ್ ಸಿಂಗ್ ನೀರಾವರಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ್ದರು. ಈಗ ಅದಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಉಪ ಚುನಾವಣೆಯಲ್ಲಿ ಇದು ಫಲ ನೀಡಲಿದೆಯೇ ಕಾದು ನೋಡಬೇಕು.

ಡಿಸೆಂಬರ್ 5ರಂದು ವಿಜಯನಗರ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ನವೆಂಬರ್ 11ರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಇದಕ್ಕೂ ಮೊದಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಆನಂದ್ ಸಿಂಗ್ 2 ಬಾರಿ ಬಿಜೆಪಿಯಿಂದ, 1 ಬಾರಿ ಕಾಂಗ್ರೆಸ್‌ನಿಂದ ವಿಜಯನಗರ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಈಗ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದು, ಉಪ ಚುನಾವಣೆ ಎದುರಾಗಿದೆ.

ವಿಜಯನಗರವನ್ನು ಜಿಲ್ಲೆಯಾಗಿ ಮಾಡಬೇಕು, ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬಾರದು ಎಂದು ಒತ್ತಾಯಿಸಿ ಕಾಂಗ್ರೆಸ್‌ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದರು. ಸ್ಪೀಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.

ಸ್ಪೀಕರ್ ಆದೇಶವನ್ನು ಆನಂದ್ ಸಿಂಗ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ. ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪು ಬುಧವಾರ ಪ್ರಕಟವಾಗಲಿದೆ. ತೀರ್ಪು ಅನರ್ಹ ಶಾಸಕರ ಪರವಾಗಿ ಬಂದರೆ ಆನಂದ್ ಸಿಂಗ್ ಬಿಜೆಪಿಯಿಂದ ಉಪ ಚುನಾವಣಾ ಅಭ್ಯರ್ಥಿಯಾಗಲಿದ್ದಾರೆ.

English summary
Ahead of the by election chief minister B.S.Yediyurappa gifted fund for Vijayanagar assembly seat, Ballari district. By election will be held on December 5, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X