ಕೂಡ್ಲಿಗಿಯಲ್ಲಿ ಹೋಳಿಗೆಮ್ಮ ಹಬ್ಬ, ಮಾತಾಡಂಗಿಲ್ಲ, ಊಟ ಹಾಕಂಗಿಲ್ಲ
ಬಳ್ಳಾರಿ, ಜೂನ್ 9: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಉತ್ತಮ ಮಳೆ, ಬೆಳೆ ಮತ್ತು ಜನ -ಜಾನುವಾರುಗಳ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿ, 'ಹೋಳಿಗೆಮ್ಮ' ಹಬ್ಬವನ್ನು ಆಚರಿಸಿ, ಊರಮ್ಮಳನ್ನು ತೃಪ್ತಿಪಡಿಸಿದ್ದಾರೆ.
ಇದು ವಿಶಿಷ್ಟವಾದ ಆಚರಣೆ. ಸಂಪ್ರದಾಯ. ಈ ಹಬ್ಬದ ಆರಣೆಯಿಂದಾಗಿಯೇ ತಾಲೂಕಿನಲ್ಲಿ ಯಾವುದೇ ಭೀಕರ ರೋಗ- ರುಜಿನಗಳು, ಪ್ರಕೃತಿ ವಿಕೋಪಗಳು ನಡೆಯುತ್ತಿಲ್ಲ. ಆ ಕಾರಣ ನಾವೆಲ್ಲರೂ ಜಾತ್ಯತೀತರಾಗಿ ಈ ಹಬ್ಬವನ್ನು ಆಚರಿಸುತ್ತೇವೆ ಎನ್ನುತ್ತಾರೆ ಇಲ್ಲಿಯ ಹೆಂಗಳೆಯರು.
ಗೃಹಿಣಿಯರು ಶ್ರದ್ಧೆ, ಭಕ್ತಿ ಮತ್ತು ಮಡಿವಂತಿಕೆಯಿಂದ ಹೂರಣ ಮಾಡಿ, ಹೋಳಿಗೆ ಬೇಯಿಸಿ, ನಾನಾ ರೀತಿ ಅಡುಗೆಗಳನ್ನು ಸಿದ್ಧಪಡಿಸುತ್ತಾರೆ. ಆ ನಂತರ ಮಡಿಕೆಯಲ್ಲಿ ಅವುಗಳೆಲ್ಲವನ್ನೂ ಬೇವಿನ ಎಲೆಯ ಜೊತೆಯಲ್ಲಿ ಇರಿಸಿ, ಪೂಜೆ ಮಾಡುತ್ತಾರೆ. ಊರಮ್ಮ ದೇವಿಯ ಆಲದ ಮರದ ಕೆಳಗಡೆ ಮಡಿಕೆಯನ್ನು ಇರಿಸಿ, ದೇವಿಗೆ ನಮಸ್ಕಾರ ಮಾಡಿ, ಪ್ರಾರ್ಥನೆ ಸಲ್ಲಿಸಿ, ನೈವೇದ್ಯ ಮಾಡುವುದು ವಾಡಿಕೆ.

ಈ ಆಚರಣೆಯ ಹಿನ್ನೆಲೆ - ಇತಿಹಾಸ ಇಲ್ಲಿನ ಜನರಿಗೆ ತಿಳಿದಿಲ್ಲ. ಆದರೂ ಈ ಹಬ್ಬದ ಆಚರಣೆ ತಪ್ಪಿಲ್ಲ, ಯಾರೂ ಕೈ ಬಿಟ್ಟಿಲ್ಲ. ಪ್ರತೀ ವರ್ಷ ತಪ್ಪದೇ ನಿಗದಿತ ದಿನದಂದು, ನಕ್ಷತ್ರ - ತಿಥಿ ಆಧರಿಸಿ ಆಚರಣೆ ಆಗುತ್ತಿದೆ.
ಹ್ಞಾಂ, ಈ ಹಬ್ಬದ ಆರಣೆಯಲ್ಲಿ ಒಂದೆರೆಡು ಷರತ್ತುಗಳು ಇವೆ. ಮೊದಲನೆಯದ್ದು, ಊರಮ್ಮಳಿಗೆ ಅಡುಗೆ ತೆಗೆದುಕೊಂಡು ಹೋಗುವಾಗ ಮನೆಯವರು ಎಲ್ಲರೂ, ಸಾಧ್ಯವಿದ್ದವರು ಮೌನವಾಗಿಯೇ ದೇವರಲ್ಲಿಗೆ ಹೋಗಬೇಕು. ದೇವರ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸಿದ ನಂತರವೇ ಮೌನ ಮುರಿಯಬೇಕು.
ದೇವರಿಗೆ ಹರಕೆ ಸಲ್ಲಿಸಿ, ಮನೆಗೆ ಬಂದ ನಂತರ ಅಡುಗೆಯನ್ನು ಮನೆ ಮಂದಿಯೇ ತಿನ್ನಬೇಕು. ಹೊರಗಿನವರು ರುಚಿ ನೋಡಲೂ ಅವಕಾಶ ನೀಡಬಾರದು.

ಈ ಎರಡು ಷರತ್ತುಗಳು ತಪ್ಪದೇ ಅನುಷ್ಠಾನಗೊಳ್ಳುತ್ತವೆ. ಊರೆಲ್ಲಾ ಹಬ್ಬದಲ್ಲಿ ತೊಡಗಿರುವಾಗ ಪಕ್ಕದ ಮನೆಗೆ ಊಟಕ್ಕೆ ಯಾರು ಹೋಗುತ್ತಾರೆ ಅಂತ ಮೂಗು ಮುರಿಯಬೇಡಿ. ಹಬ್ಬಕ್ಕಾಗಿ ನೆಂಟರನ್ನೂ ಕರೆಯುವಂತಿಲ್ಲ. ಈ ಹಬ್ಬವನ್ನು ಊರಲ್ಲಿ ಎಲ್ಲರೂ ಆಚರಿಸುತ್ತಾರೆ. ಆ ಕಾರಣ ಊರವರು ಯಾರ ಮನೆಗೂ ಊಟಕ್ಕೆ ಹೋಗುವುದಿಲ್ಲ.
ಅಂದಹಾಗೆ, ಈಚೆಗೆ ಅಂದರೆ ನಾಲ್ಕು ದಿನದ ಹಿಂದೆ, ಜೂನ್ 5ರ ಮಂಗಳವಾರ ಹೋಳಿಗೆಯಮ್ಮ ಹಬ್ಬವನ್ನು ಊರವರು ಅದ್ಧೂರಿಯಾಗಿ ಮನೆ ಮನೆಯಲ್ಲೂ ಆಚರಣೆ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications