ಬಳ್ಳಾರಿ: ತುಂಬಿ ಹರಿಯುತ್ತಿರುವ ನದಿಯಲ್ಲಿ ಯುವಕರ ಹುಚ್ಚಾಟ, ವಿಡಿಯೋ ವೈರಲ್
ಬಳ್ಳಾರಿ, ಸೆಪ್ಟೆಂಬರ್ 23: ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಯುವಕರು ಹುಚ್ಚಾಟ ಮಾಡಿದ್ದು, 100 ಅಡಿ ಎತ್ತರದ ಸೇತುವೆ ಮೇಲಿನಿಂದ ನದಿಗೆ ಯುವಕರು ಹಾರಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕು ದೇಶನೂರು ಗ್ರಾಮದ ಬಳಿ ಇರುವ ಸೇತುವೆಯಿಂದ ಜಿಗಿದು ನದಿಯಲ್ಲಿ ಈಜಾಡಿದ್ದಾರೆ. ತುಂಗಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಆದರೆ ಈ ಯುವಕರು ಅಪಾಯ ಲೆಕ್ಕಿಸದೇ ಸುಮಾರು 100 ಅಡಿ ಎತ್ತರದ ಸೇತುವೆಯಿಂದ ನದಿಗೆ ಹಾರಿ ಹುಚ್ಚಾಟ ಮಾಡಿದ್ದಾರೆ. ನೀರಿನ ರಭಸದಲ್ಲಿ ಒಂದು ಕ್ಷಣ ಮೈಮರೆತರೂ ನದಿಯಲ್ಲಿ ಕೊಚ್ಚಿಕೊಂಡು ಹೋಗುವ ಸಾಧ್ಯತೆ ಹೆಚ್ಚಿದೆ.

ಆದರೂ ಇದನ್ನು ಲೆಕ್ಕಿಸದೇ ಯುವಕರು ನದಿಗೆ ಹಾರುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಸೇತುವೆ ಬಳಿ ಪೊಲೀಸರನ್ನು ನಿಯೋಜಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇನ್ನು ತುಂಗಭದ್ರಾ ಜಲಾಶಯದ ಒಳಹರಿವು ಹಾಗೂ ಹೊರಹರಿವು ಪ್ರಮಾಣವೂ ತಗ್ಗಿದ್ದು, ಮುಳುಗಡೆಯಾಗಿದ್ದ ಪ್ರದೇಶಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಜಲಾಶಯದಿಂದ ನದಿಗೆ 74,016 ಕ್ಯೂಸೆಕ್ ನೀರನ್ನು ಹರಿ ಬಿಡಲಾಗುತ್ತಿದೆ. ಎರಡು ಅಡಿ ಎತ್ತರದಲ್ಲಿ 20 ಕ್ರಸ್ಟ್ ಗೇಟ್ ಹಾಗೂ ಒಂದು ಅಡಿ ಎತ್ತರದಲ್ಲಿ 8 ಕ್ರಸ್ಟ್ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ.

ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ 8,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಸದ್ಯ ಜಲಾಶಯಕ್ಕೆ 1,13,600 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದು ಒಟ್ಟು 1631.76 ಅಡಿ ಇದ್ದು, 96.122 ಟಿಎಂಸಿ ನೀರು ಸಂಗ್ರಹವಾಗಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications