ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಣೆ: ಕಿರುತೆರೆ ನಟನಿಗೆ ಥಳಿಸಿದ ಪುಂಡರು
ಬೆಂಗಳೂರು, ಡಿಸೆಂಬರ್ 08 : ಇತ್ತೀಚೆಗಷ್ಟೆ ಫುಂಡರ ಗುಂಪೊಂದು ಯೂಟ್ಯೂಬ್ ಸ್ಟಾರ್ ಹುಚ್ಚಾವೆಂಕಟ್ ಮೇಲೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿ ಸುದ್ದಿಯಾಗಿತ್ತು. ಈಗ ಮತ್ತೊಬ್ಬ ಕಿರುತೆರೆ ನಟನ ಮೇಲೆ ಪುಂಡರು ಹಲ್ಲೆ ಮಾಡಿದ್ದಾರೆ.
'ನಾಗಿಣಿ' ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಮೇಲೆ ಹಲ್ಲೆ!
ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದ್ದಕ್ಕೆ ಕಿರುತರೆ ನಟನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ವಿಜಯನಗರದ ಮಾರುತಿ ಮಂದಿರದ ಬಳಿ ನಡೆದಿದೆ.

ಗೆಳೆಯನ ಭೇಟಿಗೆಂದು ಬಂದು, ಪಾರ್ಕ್ ಮಾಡಿದ್ದ ತಮ್ಮ ಕಾರ್ ನ ಬಳಿ ತೆರಳುತ್ತಿದ್ದ 'ನಾಗಿಣಿ' ಧಾರವಾಹಿಯ ನಟ ದೀಕ್ಷಿತ್ ಅವರ ಜೊತೆ ಕೆಲವು ಫುಂಡರು ಸೆಲ್ಫಿ ತೆಗೆಸಿಕೊಳ್ಳಲು ಮುಂದಾಗಿದ್ದಾರೆ, ಅವರು ಅನುಚಿತವಾಗಿ ಕುಡಿದಿದ್ದನ್ನು ಮನಗೊಂಡು ಸೆಲ್ಫಿ ತೆಗೆದುಕೊಳ್ಳಲು ದೀಕ್ಷಿತ್ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟೆಗೆದ್ದ ಅವರು ದೀಕ್ಷಿತ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೆ ಅಲ್ಲದೆ ಅವರ ಕಾರಿನ ಗಾಜನ್ನು ಪುಡಿ ಮಾಡಿದ್ದಾರೆ.
ಮೂವರೂ ಪುಂಡರು ಕುಡಿತದ ಅಮಲಿನಲ್ಲಿದ್ದರು ಎಂದು ದೀಕ್ಷಿತ್ ಹೇಳಿದ್ದಾರೆ, ದೀಕ್ಷಿತ್ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಘಟನೆ ಕುರಿತು ನಟ ದೀಕ್ಷಿತ್ ವಿಜಯನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
-
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications