ಪೆರಿಫೆರಲ್ ರಿಂಗ್ ರಸ್ತೆ ನೈಸ್ ರಸ್ತೆಗೆ ಸೇರಲು 300 ಎಕರೆ ಭೂಮಿ ಬೇಕು
ಬೆಂಗಳೂರು, ನವೆಂಬರ್ 29 : ಕರ್ನಾಟಕ ಸರ್ಕಾರ ಬೆಂಗಳೂರು ನಗರದ ಸುತ್ತಲು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡುವ ಯೋಜನೆಗೆ ಒಪ್ಪಿಗೆ ನೀಡಿದೆ. ಈ ರಸ್ತೆಯನ್ನು ನೈಸ್ ರಸ್ತೆಗೆ ಸಂಪರ್ಕಿಸಲಾಗುತ್ತದೆ. ಆದರೆ, ಹೇಗೆ ಎಂಬುದು ಅಧಿಕಾರಿಗಳ ಪ್ರಶ್ನೆ.
ಬೆಂಗಳೂರು ನಗರದ ಸುತ್ತ 17 ಸಾವಿರ ಕೋಟಿ ವೆಚ್ಚದಲ್ಲಿ 65 ಕಿ.ಮೀ. ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲು ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. 12 ವರ್ಷಗಳ ಹಿಂದೆ ರೂಪಿಸಿದ್ದ ಯೋಜನೆ ಈಗ ಜಾರಿಗೆ ಬರುತ್ತಿದೆ.
ಪ್ರಸ್ತುತ ಇರುವ ನೈಸ್ ರಸ್ತೆ ತುಮಕೂರು ರಸ್ತೆ-ಮಾಗಡಿ ರಸ್ತೆ-ಮೈಸೂರು ರಸ್ತೆ-ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಈಗ ನಿರ್ಮಾಣ ಮಾಡಲು ಉದ್ದೇಶಿಸಿರುವ ಪೆರಿಫೆರಲ್ ರಿಂಗ್ ರಸ್ತೆ ಹೊಸೂರು ರಸ್ತೆ-ಹಳೆ ಮದ್ರಾಸ್ ರಸ್ತೆ-ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಇದರಿಂದ ಬೆಂಗಳೂರು ನಗರದ ಸುತ್ತಲೂ ರಿಂಗ್ ರಸ್ತೆ ನಿರ್ಮಾಣವಾದಂತೆ ಆಗಲಿದೆ.

ಕಳೆದ ವಾರ ಸಭೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪೆರಿಫೆರಲ್ ರಿಂಗ್ ರಸ್ತೆಯನ್ನು ನೈಸ್ ರಸ್ತೆಗೆ ಸಂಪರ್ಕಿಸಲು 300 ಎಕರೆ ಭೂಸ್ವಾಧೀನ ಮಾಡಿಕೊಳ್ಳಬೇಕು ಎಂದು ಅಂದಾಜಿಸಿದ್ದಾರೆ.
ತುಮಕೂರು ರಸ್ತೆ ಮತ್ತು ಹೊಸರು ರಸ್ತೆಯ ಭಾಗದಲ್ಲಿ ತಲಾ 150 ಎಕರೆ ಜಮೀನು ಸಿಕ್ಕರೆ ಪೆರಿಫೆರಲ್ರಿಂಗ್ ರಸ್ತೆಯನ್ನು ನೈಸ್ ರಸ್ತೆಗೆ ಸಂಪರ್ಕಿಸಬಹುದು ಎಂದು ಅಂದಾಜಿಸಿದ್ದಾರೆ. ರಸ್ತೆ ಮಾರ್ಗದ ಸಮೀಕ್ಷೆಯನ್ನು ನಡೆಸಿ, ನಂತರ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ.
ಕರ್ನಾಟಕ ಸರ್ಕಾರ ಭೂ ಸ್ವಾಧೀನಕ್ಕಾಗಿ 10 ಸಾವಿರ ಕೋಟಿ ರೂ.ಗಳನ್ನು ಬಿಡಿಎಗೆ ನೀಡಲಿದೆ. ಆದರೆ, ಅದಕ್ಕಿಂತ ಹೆಚ್ಚಿನ ಹಣ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಸರ್ವೇ ಕಾರ್ಯಗಳು ಮುಗಿದ ಬಳಿಕ ಎಷ್ಟು ಭೂಮಿ ಬೇಕಾಗಬಹುದು? ಎಂಬ ಅಂದಾಜು ಸಿಗಲಿದೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ












Click it and Unblock the Notifications