ಅಪನಗದೀಕರಣ : ದರೋಡೆಗೆ ಇಳಿದಿದ್ದ ಪೊಲೀಸರ ವಜಾ
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆಯ ಬಗ್ಗೆಯೇ ಅಸಹ್ಯ ಮೂಡುವಂತೆ ಬೆಂಗಳೂರಿನ ಒಂದಿಷ್ಟು ಪೊಲೀಸರು ಯತ್ನಿಸಿದ್ದಾರೆ. ಹಣಕ್ಕಾಗಿ ಜನರು ಕಷ್ಟಪಡುತ್ತಿರುವ ಹೊತ್ತಿನಲ್ಲಿ, ಪೊಲೀಸರೇ ದರೋಡೆ ಮಾಡುವ ಯತ್ನಕ್ಕೆ ಇಳಿದಿದ್ದು ಅಕ್ಷಮ್ಯ.
ಬೆಂಗಳೂರು, ಡಿಸೆಂಬರ್ 15 : ಅಪನಗದೀಕರಣದ ದುರ್ಲಾಭ ಪಡೆದು ಲಕ್ಷಾಂತರ ರುಪಾಯಿ ಲಪಟಾಯಿಸಲು ಯತ್ನಿಸಿದ 8 ಪೊಲೀಸರನ್ನು ಯಾವುದೇ ವಿಚಾರಣೆ ಇಲ್ಲದೆ ಕೆಲಸದಿಂದ ವಜಾ ಮಾಡಲಾಗಿದೆ.
ಹಳೆ ನೋಟುಗಳನ್ನು ಹೊಸ ನಗದಿಗೆ ಪರಿವರ್ತಿಸುವ ಸೋಗಿನಲ್ಲಿ ಲಕ್ಷಾಂತರ ರುಪಾಯಿಗಳನ್ನು ದರೋಡೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆಗಳು ಈಗ ಭಾರೀ ದಂಡ ತೆತ್ತಿದ್ದಾರೆ. [ಠಾಕುಠೀಕಾಲಿ ಲಾಠಿ ಹಿಡಿದು ಬಂದ ಪೇದೆ ಮಾಡಿದ್ದೇನು?]

ಪೊಲೀಸ್ ಕಾಯ್ದೆಯ 311(2)(ಬಿ) ನಿಯಮದ ಅಡಿಯಲ್ಲಿ ಯಾವುದೇ ವಿಚಾರಣೆಯನ್ನು ಕೂಡ ನಡೆಸದೆ ಬ್ಯಾಂಕಿಗೆ ಕನ್ನ ಹಾಕಲು ಯತ್ನಿಸಿದ ಪೇದೆಗಳನ್ನು ವಜಾ ಮಾಡಲಾಗಿದೆ. ವಿವಿಧ ಠಾಣೆಗಳಲ್ಲಿ 35.5 ಲಕ್ಷ ರು., 8 ಲಕ್ಷ ರು ಮತ್ತು 22.3 ಲಕ್ಷ ರು. ದರೋಡೆ ಮಾಡಲು ಯತ್ನಿಸಿದ ಕೇಸನ್ನು 3 ಠಾಣೆಗಳಲ್ಲಿ ಹಾಕಲಾಗಿತ್ತು.
ಸಬ್ ಇನ್ಸ್ಪೆಕ್ಟರ್ ಎನ್ ಸಿ ಮಲ್ಲಿಕಾರ್ಜುನ, ಹೆಡ್ ಕಾನ್ಸ್ಟೇಬರ್ ಮಯೂರ, ಪೇದೆಗಳಾದ ಮಂಜುನಾಥ್ ಮೊಗ್ಗದ, ಎಲ್ ಕೆ ಗಿರೀಶ್, ಚಂದ್ರಶೇಖರ, ಅನಂತರಾಜು, ರಾಘವ ಕುಮಾರ್ ಮತ್ತು ಬಿ ಶೇಷ ಎಂಬವರನ್ನು ವಜಾ ಮಾಡಲಾಗಿದೆ.
ಇವರೆಲ್ಲ ಗಿರಿನಗರ, ಮಾಗಡಿ ರಸ್ತೆ ಮತ್ತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲಸದಿಂದ ವಜಾ ಆಗಿರುವ 8 ಪೊಲೀಸರಲ್ಲಿ ಐವರು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಚಾಕರಿ ಮಾಡುತ್ತಿದ್ದರು. [ವಿಧಾನಸೌಧದಲ್ಲೇ ಕೋಟಿ ಕೋಟಿ ಹಣದ ಕರ್ಮಕಾಂಡ!]
ಭ್ರಷ್ಟ ಇಲಾಖೆಗಳಲ್ಲೊಂದು ಎಂಬ ಕಳಂಕ ಕಟ್ಟಿಕೊಂಡಿರುವ ಪೊಲೀಸ್ ಇಲಾಖೆಯ ಕೊಳೆ ತೊಳೆಯುವ ನಿಟ್ಟಿನಲ್ಲಿ ಇದೊಂದು ಸ್ವಾಗತಾರ್ಹ ಕ್ರಮ ಎಂದು ಪರಿಗಣಿಸಲಾಗಿದೆ. ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಸಿಕೊಂಡು ಹಣ ಲಪಟಾಯಿಸುತ್ತಿದ್ದಾರೆ ಎಂದು ಹಲವಾರು ದೂರುಗಳು ಬಂದಿದ್ದವು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications