ಆರ್ಕಿಡ್ಸ್ ಶಾಲೆಯಲ್ಲಿ ಅತ್ಯಾಚಾರ, ಆರೋಪಿ ಎಲ್ಲಿ?
ಬೆಂಗಳೂರು, ಅ.22: ವಿಬ್ಗಯಾರ್ ಶಾಲೆಯಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಘಟನೆಯಿಂದ ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಮತ್ತೊಂದು ಇಂಟರ್ ನ್ಯಾಷನಲ್ ಶಾಲೆಯಲ್ಲಿ ಇಂಥದ್ದೇ ನೀಚ ಕೃತ್ಯ ನಡೆದಿದೆ. ಆರ್ಕಿಡ್ಸ್ ಶಾಲೆಯಲ್ಲಿ ಹಸುಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅದರೆ, ಇದುವರೆವಿಗೂ ಆರೋಪಿಗಳ ಬಂಧನವಾಗಿಲ್ಲ.
ಜಾಲಹಳ್ಳಿಯಲ್ಲಿರುವ ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮೂರು ವರ್ಷ ವಯಸ್ಸಿನ ನರ್ಸರಿಯಲ್ಲಿ ಓದುತ್ತಿರುವ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಿಂದ ಅತ್ಯಾಚಾರ ನಡೆದಿರುವ ಬಗ್ಗೆ ಮಂಗಳವಾರ ದೂರು ದಾಖಲಾಗಿದೆ. ಆದರೆ, ಯಾರನ್ನು ಈವರೆಗೂ ಬಂಧಿಸಿಲ್ಲ, ವಿಚಾರಣೆ ನಡೆಯುತ್ತಲೇ ಇದೆ. ಹೀಗಾದರೆ ಮಕ್ಕಳ ರಕ್ಷಣೆ ಹೇಗೆ ಸಾಧ್ಯ ಎಂದು ಪೋಷಕರು ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. [ಮಕ್ಕಳ ಸುರಕ್ಷತೆಗೆ ಸರ್ಕಾರದ ಮಾರ್ಗಸೂಚಿ]
ಶಾಲಾ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು ಆರೋಪಿಗಳನ್ನು ರಕ್ಷಿಸಲು ಆಡಳಿತ ಮಂಡಳಿ ಮುಂದಾಗಿದೆ. ಸಿಸಿಟಿವಿ ಫುಟೇಜ್ ಇನ್ನೂ ನೀಡಿಲ್ಲ ಏಕೆ? ಪೋಷಕರ ಪ್ರಶ್ನೆಗೆ ಉತ್ತರಿಸಲು ಯಾರೂ ಬಂದಿಲ್ಲವೇಕೆ? ನಿಮ್ಮನ್ನು ನಂಬಿ ಮಕ್ಕಳು ಶಾಲೆಗೆ ಹೇಗೆ ಕಳಿಸಲು ಸಾಧ್ಯ? ಎಂದು ಪ್ರಶ್ನಿಸುತ್ತಿದ್ದಾರೆ

ಪೊಲೀಸರು ಶಾಲೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗೆ ಎಸಿಪಿ(ಮಲ್ಲೇಶ್ವರ) ಸಾರಾ ಫಾತಿಮಾ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಅತ್ಯಾಚಾರಕ್ಕೊಳಗಾದ ಬಾಲಕಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಹೇಳಿದ್ದಾರೆ. [ವಿಬ್ ಗಯಾರ್ ಶಾಲೆ ನೀಚ ಕೃತ್ಯ]
ಕಳೆದ ಜುಲೈ ತಿಂಗಳಿನಲ್ಲಿ ಮಾರತ್ ಹಳ್ಳಿ ಸಮೀಪದ ವಿಬ್ ಗಯಾರ್ ಹೈ ಶಾಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಶಾಲೆಯ ಸ್ಕೇಟಿಂಗ್ ತರಬೇತುದಾರ, ಜಿಮ್ ಮಾಸ್ಟರ್ ಗಳನ್ನು ಪೊಲೀಸರು ಬಂಧಿಸಿದ್ದರು. ಅದರೆ, ಚಾರ್ಜ್ ಶೀಟ್ ದಾಖಲಾಗಿಲ್ಲ. ಈ ಘಟನೆ ನಂತರ ಶಾಲೆಗಳಿಗೆ ನಿಯಮಗಳನ್ನು ವಿಧಿಸಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸ್ ಆಯುಕ್ತರು ನಿರ್ದೇಶಿಸಿದ್ದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications