ಬಿಬಿಎಂಪಿ ಚುನಾವಣೆಗೆ ತಯಾರಿ ಆರಂಭಿಸಿದ ಎಎಪಿ
ಬೆಂಗಳೂರು, ಮೇ 11 : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಹುಮತಗಳಿಸಿ ಸರ್ಕಾರ ರಚನೆ ಮಾಡಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಮೂರು ತಿಂಗಳಿನಲ್ಲಿ ಚುನಾವಣೆ ಎದುರಾಗಲಿದ್ದು, ಎಎಪಿ ಸಿದ್ಧತೆ ಆರಂಭಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಎಎಪಿ ಬಹಳ ಹಿಂದೆಯೇ ಘೋಷಿಸಿತ್ತು. ಇದರ ಮೊದಲ ಹಂತವಾಗಿ ಪಕ್ಷ 'ಬೊಂಬಾಟ್ ಬೆಂಗಳೂರು' ಎಂಬ ಘೋಷಣೆಯೊಂದಿಗೆ ಮನೆ-ಮನೆಗಳ ಸಮೀಕ್ಷೆಗೆ ಚಾಲನೆ ನೀಡಿದೆ. [ಬೊಂಬಾಟ್ ಬೆಂಗಳೂರಿಗಾಗಿ ಎಎಪಿಯಿಂದ ವೆಬ್ ಸೈಟ್]

ಸಮೀಕ್ಷೆ ಹೇಗೆ : ಆಮ್ ಆದ್ಮಿ ಪಕ್ಷ 8 ಪ್ರಶ್ನೆಗಳೊಂದಿಗೆ ಮನೆ-ಮನೆ ಸಮೀಕ್ಷೆಯನ್ನು ಆರಂಭಿಸಿದೆ. ಮುಂಬರುವ ಬಿಬಿಎಂಪಿ ಚುನಾವಣೆ ಬಗ್ಗೆ ನಿಮಗೆ ಅರಿವಿದೆಯೇ? ಎಂಬುದರಿಂದ ಹಿಡಿದು ನಿಮಗೆ ಆಮ್ ಆದ್ಮಿ ಪಕ್ಷದ ಬೆಂಗಳೂರು ಪಾಲಿಕೆ ಬೇಕೆ? ಎಂಬುವ ತನಕ ಹಲವು ಪ್ರಶ್ನೆಗಳಿವೆ. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ : ಸುಪ್ರೀಂ]
5 ವರ್ಷಗಳಲ್ಲಿ ನಿಮ್ಮ ಪಾಲಿಕೆ ಸದಸ್ಯರನ್ನು ನೀವು ಭೇಟಿಯಾಗಿದ್ದೀರಾ?, ಬಿಬಿಎಂಪಿಯಲ್ಲಿ ಲಂಚವಿಲ್ಲದೇ ಏನಾದರೂ ಕೆಲಸವಾಗುತ್ತದೆ ಎಂದು ನಿಮಗೆ ಅನ್ನಿಸುತ್ತಿದೆಯೇ?, ದೆಹಲಿ ಚುನಾವಣೆಯಲ್ಲಿ ಎಎಪಿ ಹಣಬಲವಿಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಸೋಲಿಸಿರುವುದು ನಿಮಗೆ ಅರಿವಿದೆಯೇ? ಎಂಬ ಪ್ರಶ್ನೆಗಳನ್ನು ಜನರಿಗೆ ಕೇಳಲಾಗುತ್ತಿದೆ.
ಹೌದು ಅಥವ ಇಲ್ಲ ಎಂದು ಜನರು ಸಮೀಕ್ಷೆ ವೇಳೆ ಉತ್ತರ ನೀಡಬಹುದಾಗಿದೆ. ನಿಮ್ಮ ವಿಧಾನಸಭಾ ಕ್ಷೇತ್ರ, ವಾರ್ಡ್, ಮತದಾನದ ಬೂತ್ ಮಾಹಿತಿಯನ್ನು ಸಮೀಕ್ಷೆ ವೇಳೆ ಸಂಗ್ರಹಣೆ ಮಾಡಲಾಗುತ್ತದೆ. ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂ, ಇ-ಮೇಲ್ ವಿಳಾಸವನ್ನು ನೀವು ನೀಡಬಹುದಾಗಿದೆ.

ಬಿಬಿಎಂಪಿ ಚುನಾವಣೆ ಎಂದು? : ಅಂದಹಾಗೆ ಪಾಲಿಕೆಯ ಆಡಳಿತಾವಧಿ ಏಪ್ರಿಲ್ನಲ್ಲಿ ಅಂತ್ಯಗೊಂಡಿದ್ದು, ಸರ್ಕಾರ ಪಾಲಿಕೆಯನ್ನು ವಿಸರ್ಜಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಹಲವಾರು ದಿನಗಳ ಕಾನೂನು ಹೋರಾಟದ ಬಳಿಕ ಮೂರು ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮೇ 5ರಂದು ಆದೇಶ ನೀಡಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications