ಬಗರ್ ಹುಕುಂ ಭೂ ಹಗರಣ: ಆರ್.ಅಶೋಕ್ ವಿರುದ್ಧ ಎಫ್ಐಆರ್
ಬೆಂಗಳೂರು, ಜನವರಿ 9: ಅಕ್ರಮವಾಗಿ ಬಗರ್ ಹುಕುಂ ಜಮೀನು ಮಂಜೂರು ಆರೋಪ ಹೊತ್ತಿರುವ ಉಪಮುಖ್ಯಮಂತ್ರಿ ಆರ್ ಅಶೋಕ್ ವಿರುದ್ಧ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
2004ರಲ್ಲಿ ಆರ್ ಅಶೋಕ್ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಹಾಲಿ ಮೇಯರ್ ಆಗಿರುವ ವೆಂಕಟೇಶ್ ಮೂರ್ತಿ ಹಾಗೂ ಅವರ ಪತ್ನಿಗೆ ಉತ್ತರ ಹಳ್ಳಿ ಸಮೀಪದ ಸುಮನಹಳ್ಳಿಯಲ್ಲಿ 8 ಎಕರೆ ಜಮೀನನ್ನು ಅಶೋಕ್ ಮಂಜೂರು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶೋಕ್ ವಿರುದ್ಧ ಸೆಕ್ಷನ್ 13(1)(c), 13(1)(d), 13(2) ಐಪಿಸಿ 420 & 120(b) ಅಡಿಯಲ್ಲಿ ದೂರು ದಾಖಲಾಗಿದೆ.
ಬಗರ್ ಹುಕುಂ: ಆರ್ ಅಶೋಕ್ ಮೇಲೆ ಎಫ್ ಐಆರ್
ಸಾಮಾನ್ಯವಾಗಿ ಬಗರ್ ಹುಕುಂ ಜಮೀನನ್ನು ಆರ್ಥಿಕವಾಗಿ ಹಿಂದುಳಿದ ಹಾಗೂ ಬಡತನದ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಸರ್ಕಾರದ ವತಿಯಿಂದ ನೀಡಲಾಗುತ್ತದೆ.
ಅದರೆ, ಮೇಯರ್ ವೆಂಕಟೇಶ್ ಮೂರ್ತಿ ಅವರು 2004ರಲ್ಲಿ ಸರ್ಕಾರಕ್ಕೆ ಸುಳ್ಳು ದಾಖಲಾತಿ ನೀಡಿ ಜಮೀನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಅಶೋಕ್ ಸೇರಿದಂತೆ ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.