ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: 5 ಕೋಟಿ ನಗದು ಪತ್ತೆ
ಬೆಂಗಳೂರು, ಅಕ್ಟೋಬರ್ 5: ಕೈಗಾರಿಕಾ ಇಲಾಖೆ ಅಧಿಕಾರಿ ಹಾಗೂ ಬಿಡಿಎ ಎಂಜಿನಿಯರ್ ಮನೆ ಮೇಲೆ ಶುಕ್ರವಾರ ಬೆಳಗ್ಗೆ ಎಸಿಬಿ ದಾಳಿ ನಡೆಸಿದೆ. ಕೈಗಾರಿಕಾ ಇಲಾಖೆ ಅಧಿಕಾರಿ ಟಿ.ಆರ್. ಸ್ವಾಮಿ ಅವರ ಮನೆಯಲ್ಲಿ 5 ಕೋಟಿ ರೂ ಹಣವನ್ನು ವಶಪಡಿಸಿಕೊಂಡಿದೆ.
ಕೈಗಾರಿಕಾ ಇಲಾಖೆ ಅಧಿಕಾರಿ ಟಿ.ಆರ್. ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ, ಬಲವಾದ ಮಾಹಿತಿ ಮೇರೆಗೆ ಏಸಿಬಿ ಅಧಿಕಾರಿಗಳು ದಾಳಿ ನಡೆಸಲು ಮುಂದಾಗಿದ್ದರು ಆ ಸಮಯದಲ್ಲಿ ಸ್ವಾಮಿ ಬಾಗಿಲು ತೆರೆಯದೆ ಅಸಹಕಾರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಲಾಕ್ ಒಡೆದು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಲಂಚ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಪ್ರಾಜೆಕ್ಟ್ ಇಂಜಿನಿಯರ್
ಸ್ವಾಮಿ ಕೆಐಎಡಿಬಿಯಲ್ಲಿ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಮಲ್ಲೇಶ್ವರದಲ್ಲಿರುವ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನ 15 ನೇ ಮಹಡಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು 5 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಇನ್ನೂ ತನಿಖೆ ಮುಂದುವರೆದಿದೆ. ಬಿಡಿಎ ಮುಖ್ಯ ಎಂಜಿನಿಯರ್ ಮನೆ ಮೇಲೆ ಕೂಡ ದಾಳಿ ನಡೆದಿದೆ. ಬಸವೇಶ್ವರನಗರದಲ್ಲಿರುವ ಗೌಡಯ್ಯನ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ.