'ಉ.ಪ್ರ ಸಿಎಂ ನಟನೆಗೆ ನನ್ನೆಲ್ಲ ರಾಷ್ಟ್ರಪ್ರಶಸ್ತಿ ಕೊಡೋಣ ಅನಿಸಿತು'
ಬೆಂಗಳೂರು, ಅಕ್ಟೋಬರ್ 2: "ನಾನು ಉತ್ತರ ಪ್ರದೇಶ ಮುಖ್ಯಮಂತ್ರಿಗಳ ಒಂದು ವಿಡಿಯೋ ನೋಡಿದೆ. ಅದರಲ್ಲಿದ್ದುದು ಚೀಫ್ ಮಿನಿಸ್ಟರೋ ಅಥವಾ ಯಾವುದಾದರೂ ದೇವಸ್ಥಾನದ ಪೂಜಾರಿಯೋ ಎಂದು ಗೊತ್ತಾಗದಷ್ಟು ಮಟ್ಟಿಗೆ ಅವರ ನಟನೆಯಿತ್ತು. ನನಗೆ 5 ರಾಷ್ಟ್ರಪ್ರಶಸ್ತಿಗಳು ಸಂದಿವೆ. ಅವರ ನಟನೆ ನೋಡಿ ಅವನ್ನು ಅವರಿಗೆ ಕೊಟ್ಟುಬಿಡೋಣ ಅನ್ನಿಸಿತು! ನಾನೊಬ್ಬ ದೊಡ್ಡ ನಟ. ಅವರೆಲ್ಲ (ರಾಜಕಾರಣಿಗಳು) ನನಗಿಂತ ದೊಡ್ಡ ನಟರಾಗಲು ಯತ್ನಿಸುತ್ತಿದ್ದಾರೆ".
-ಬಹುಭಾಷಾ ನಟ ಪ್ರಕಾಶ್ ರೈ ನೀಡಿದ ಈ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಆರಂಭವಾದ ಮೂರು ದಿನಗಳ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ ಐ)ನ 11ನೇ ರಾಜ್ಯ ಸಮ್ಮೇಳನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಗೌರಿ ನನ್ನ ಆತ್ಮೀಯ ಗೆಳತಿ. ಗೌರಿಯನ್ನು ಕೊಂದವರು ಯಾರು ಎಂಬುದು ಗೊತ್ತಿಲ್ಲದಿರಬಹುದು, ಆದರೆ ಗೌರಿಯವರ ಸಾವನ್ನು ಸಂಭ್ರಮಿಸುತ್ತಿರುವವರು ಯಾರು ಎಂಬುದು ಗೊತ್ತಿದೆ. ಗೌರಿಯವರ ಹತ್ಯೆಯನ್ನು ನಾನು ಖಂಡಿಸಿದ ಮೇಲೆ, ಜಾಲತಾಣಗಳಲ್ಲಿ ನಾನು ಎಂದೂ ಕೇಳಿರದಂತಹ ಕೆಟ್ಟ ಭಾಷೆಯ ಬಯ್ಗುಳವನ್ನು ನೋಡುತ್ತಿದ್ದೇನೆ. ಆದರೆ ಇಂತಹ ಬೆದರಿಕೆಗಳಿಂದ ನಾನು ಬೆದರುವವನಲ್ಲ ಎಂದು ಹೇಳಿದರು.
ಟ್ವೀಟರ್, ಫೇಸ್ ಬುಕ್ ಮುಂತಾದ ಜಾಲತಾಣದಲ್ಲಿ ಕೆಟ್ಟದಾಗಿ ನಿಂದಿಸುವವರು ಎದುರಿಗೆ ಬಂದು ನಿಂತು ಮಾತನಾಡಿ' ಎಂದು ಸವಾಲು ಹಾಕಿದರು.
ಸಮಾಜದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಜನರು ಅವರಿಗೇನು ಆಳುವ ಪಕ್ಷ. ಹಣಬಲದಿಂದ ಗೆಲ್ಲುತ್ತಾರೆ.', ಕ್ಷೇತ್ರದಲ್ಲಿ ಅವರ ಜಾತಿ ಓಟು ಜಾಸ್ತಿ ಇದೆ. ಗೆಲ್ಲುತ್ತಾರೆ' ಎಂಬಂತೆ ಮಾತನಾಡುತ್ತಿದ್ದಾರೆ ಎಂದು ವಿಷಾದಿಸಿದರು.
ಮಕ್ಕಳಿಗೆ ಕುಡಿಯಲು ಹಾಲಿಲ್ಲದಿರುವಾಗ ಚಿತ್ರನಟರ ಕಟೌಟ್ ಗಳಿಗೆ ಹಾಲಿನ ಅಭಿಷೇಕ ಮಾಡುವುದು ಮೂರ್ಖತನ. ರಾಜಕೀಯ, ಸಮಾಜ ಸುಧಾರಣೆ ಆಗಬೇಕಾದರೆ ಯುವಜನರು ಉತ್ತಮ ನಾಯಕರಾಗಿ ಬೆಳೆದು ಬರಬೇಕು ಎಂದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications