ತಾಂಜೇನಿಯಾ ವಿದ್ಯಾರ್ಥಿಗಳಿಗೆ ಆತಂಕ ಮೂಡಿಸಿದ ಎಸ್ಎಂಎಸ್
ಬೆಂಗಳೂರು, ಫೆಬ್ರವರಿ 05 : ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ನಡುವೆಯೇ ವಿದ್ಯಾರ್ಥಿಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಬಹುದು ಎಂಬ ಎಸ್ಎಂಎಸ್ ಹರಿದಾಡುತ್ತಿದೆ.
'ಶನಿವಾರದ ತನಕ ಎಚ್ಚರಿಕೆಯಿಂದಿರಿ, ಸ್ಥಳೀಯರು ನಿಮ್ಮ ಮೇಲೆ ಹಲ್ಲೆ ನಡೆಸಬಹುದು' ಎಂಬ ಸಂದೇಶ ಆಫ್ರಿಕಾದ ವಿದ್ಯಾರ್ಥಿಗಳ ಮೊಬೈಲ್ಗಳಲ್ಲಿ ಹರಿದಾಡುತ್ತಿದೆ. ಇದರಿಂದ ಆತಂಕಗೊಂಡ ಕೆಲವು ವಿದ್ಯಾರ್ಥಿಗಳು ಕಾಲೇಜಿಗೂ ಹಾಜರಾಗಿಲ್ಲ. [ವಿದ್ಯಾರ್ಥಿನಿ ಹಲ್ಲೆ: ಪರಂ ವಿರುದ್ಧ ಟ್ವಿಟ್ಟರ್ ಮಂದಿ ಗರಂ]

ಪೊಲೀಸರು ಇಂತಹ ಎಸ್ಎಂಎಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆಚಾರ್ಯ ಕಾಲೇಜಿನಲ್ಲಿನ ಆಫ್ರಿಕಾದ ವಿದ್ಯಾರ್ಥಿಗಳು ಇಂಟರ್ನಲ್ ಪರೀಕ್ಷೆಗಳನ್ನು ಮುಂದೂಡಿ ಎಂದು ಕಾಲೇಜಿನ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. [ಲೈಂಗಿಕ ದೌರ್ಜನ್ಯ ನಡೆದಿಲ್ಲ, ಪ್ರಕರಣ ಸಿಸಿಬಿಗೆ: ಪರಮೇಶ್ವರ]
ಶುಕ್ರವಾರ ಇಂಟರ್ನಲ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿರುವ ಕಾಲೇಜಿನ ಆಡಳಿತ ಮಂಡಳಿ, ಆಫ್ರಿಕಾದ ವಿದ್ಯಾರ್ಥಿಗಳಿಗೆ ಪತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ವಿದ್ಯಾರ್ಥಿಗಳ ಮನೆಗೆ ತೆರಳಿ ಇಂತಹ ಎಸ್ಎಂಎಸ್ ಬಗ್ಗೆ ಭಯಪಡಬೇಕಾಗಿಲ್ಲ ಎಂದು ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಧೈರ್ಯ ತುಂಬಲಿದ್ದಾರೆ. [ಯುವತಿ ಮೇಲೆ ಹಲ್ಲೆ : ಸಿದ್ದರಾಮಯ್ಯಗೆ ಸುಷ್ಮಾ ಸ್ವರಾಜ್ ಕರೆ]
ಕೇಂದ್ರ ವಿದೇಶಾಂಗ ಸಚಿವಾಲಯ ಮತ್ತು ತಾಂಜೇನಿಯಾ ರಾಯಭಾರ ಕಚೇರಿಯ ಅಧಿಕಾರಿಗಳ ಒಂದು ತಂಡ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಲಿದೆ. ಪ್ರಕರಣದ ಕುರಿತು ವಿವರವಾದ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ.
ಜನವರಿ 31ರ ರಾತ್ರಿ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದ ಭಾರೀ ವಿವಾದ ಹುಟ್ಟು ಹಾಕಿದ್ದು, ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications