ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೇ ಜಯ: ಅನಂತ ಕುಮಾರ್ ವಿಶ್ವಾಸ

By Nayana
|
Google Oneindia Kannada News

ಬೆಂಗಳೂರು, ಜೂನ್ 8: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಪಧವೀದರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿ ನಂತರ ಮಾತನಾಡಿದರು. ಕಾಂಗ್ರೆಸ್ , ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಅವರು ಈ ರಾಜ್ಯ ಸರ್ಕಾರ ದಿಕ್ಕು ತಪ್ಪಿದೆ.ಅತಂತ್ರ ಸ್ಥಿತಿಯಲ್ಲಿದೆ, ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 25 ಸಚಿವರು ಖಾತೆ ರಹಿತರಾಗಿದ್ದಾರೆ ಎಂದಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ: ಮಳೆಯ ನಡುವೆ ಮತದಾನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ: ಮಳೆಯ ನಡುವೆ ಮತದಾನ

ಸರ್ಕಾರ ರಚನೆ ಆದ ಮೇಲೂ 25 ಸಚಿವರು ಖಾತೆ ರಹಿತವಾಗಿದ್ದಾರೆ, ಖಾತೆ ಹಂಚಿಕೆಯಲ್ಲಿ ಎರಡೂ ಪಕ್ಷಗಳಲ್ಲಿ ಬಿಕ್ಕಟ್ಟು ತಲೆದೋರಿದೆ. ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಮುನರ್‌ ಸಮೀಕರಣ ನಡೆಯಲಿದೆ.

Ananth Kumar confident Bjp will win council poll

ಕಾಂಗ್ರೆಸ್‌ ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಇಷ್ಟವಿಲ್ಲ. ಈ ಮೈತ್ರಿ ಸರ್ಕಾರ ರಾಜ್ಯದ ಜನತೆಗೂ ಇಷ್ಟವಿಲ್ಲ, ಸರ್ಕಾರ ಬಿಕ್ಕಟ್ಟು ಮತ್ತೊಂದು ರಾಜಕೀಯ ಪುನರ್ ಸಮೀಕರಣಕ್ಕೆ ದಾರಿ ಮಾಡಿಕೊಡಲಿ ಎಂದು ಅನಂತ ಕುಮಾರ್ ಹೇಳಿದ್ದಾರೆ.

English summary
Union minister Ananth Kumar said reporters after casting his vote in Basavanagudi that the Bjp will win ongoing council election with huge margin defeating both congress and JDS candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X