ಸರಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡಿದ ರಾಜ್ಯಪಾಲರು!
ಬೆಂಗಳೂರು, ಮೇ 15: ಮತದಾರ ಮಹಾಪ್ರಭು ನೀಡಿದ ಜನಾದೇಶ ನಮ್ಮ ಬಳಿ ಇದೆ. ನಾವೇ ಸರ್ಕಾರ ರಚಿಸಲು ಅರ್ಹರು ಎಂದು ಹೇಳುತ್ತಿರುವ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ, ವಜುಭಾಯಿ ವಾಲರನ್ನು ಭೇಟಿ ಮಾಡಿದ್ದಾರೆ.
104 ಶಾಸಕರ ಬೆಂಬಲವಿರುವ ಎರಡು ಪತ್ರಗಳನ್ನು ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಮೊದಲು ಅವಕಾಶ ನೀಡಬೇಕು. ಗುರುವಾರ(ಮೇ 17) ದಂದು ಪ್ರಮಾಣ ವಚನ ಸ್ವೀಕರಿಸಿ, ಒಂದು ವಾರದೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಕೋರಿದ್ದಾರೆ.
ಆದರೆ, ಅತಂತ್ರ ವಿಧಾನಸಭೆ ಸೃಷ್ಟಿಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸಾಧ್ಯತೆ ಉಂಟಾಗಿದ್ದು, ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ.

ಈ ನಡುವೆ ಬುಧವಾರ ಬೆಳಗ್ಗೆ ನಡೆದ ಬಿಜೆಪಿ ನೂತನ ಶಾಸಕರ ಜತೆಗಿನ ಸಭೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ, ಶಿಕಾರಿಪುರದ ಶಾಸಕ, ಶಿವಮೊಗ್ಗದ ಸಂಸದ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಯಾರು ಅಧಿಕಾರ ಸ್ವೀಕರಿಸಲಿದ್ದಾರೆ? ಇನ್ನೂ ಸ್ಪಷ್ಟವಾಗಿಲ್ಲ. ಚೆಂಡು ಈಗ ರಾಜ್ಯಪಾಲ ವಜುಭಾಯಿ ವಾಲ ಅವರ ಅಂಗಳದಲ್ಲಿದೆ. ಮೂಲಗಳ ಪ್ರಕಾರ ಮೊದಲು ಮನವಿ ಸಲ್ಲಿಸುವ ಬಿಜೆಪಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.
15ನೇ ವಿಧಾನಸಭೆಗಾಗಿ ಮೇ 12ರಂದು ಚುನಾವಣೆ ನಡೆದಿದ್ದು, ಮೇ 15ರಂದು ಫಲಿತಾಂಶ ಹೊರಬಂದಿದೆ. ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆಯಿಂದಾಗಿ 224ಕ್ಷೇತ್ರಗಳ ಬದಲಿಗೆ 222 ಕ್ಷೇತ್ರಗಳಲ್ಲಿ ಮಾತ್ರ ಮತದಾನವಾಗಿತ್ತು.
ಈಗ 222 ಕ್ಷೇತ್ರಗಳ ಫಲಿತಾಂಶ ಇಲ್ಲಿದೆ
* ಬಲಾಬಲ 222/224: ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38, ಇತರೆ 2
* ಅಧಿಕಾರ ಸ್ಥಾಪನೆಗೆ ಬೇಕಾದ ಸಂಖ್ಯೆ : 112
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications