ಶಾಲೆಗಳಿಗೆ ಎಂಎನ್ ರೆಡ್ಡಿರಿಂದ 'ಖಡಕ್' ಮಾರ್ಗ ಸೂಚಿ
ಬೆಂಗಳೂರು, ಜು.27: ಮಾರತ್ ಹಳ್ಳಿ ಸಮೀಪದ ವಿಬ್ ಗಯಾರ್ ಶಾಲಾ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಹೊಸ ಮಾರ್ಗಸೂಚಿಗಳನ್ನು ಅಳವಡಿಸಲು ಆ.31ರ ಗಡುವು ನೀಡಲಾಗಿದೆ ಎಂದು ನೂತನ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಹೇಳಿದ್ದಾರೆ.
‘ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಪ್ರಿ-ನರ್ಸರಿಯಿಂದ ಪ್ರೌಢ ಶಾಲೆ ಹಂತದವರೆಗೆ ಆ.31ರೊಳಗೆ ಕಡ್ಡಾಯವಾಗಿ ಸುರಕ್ಷತಾ ಮಾರ್ಗಸೂಚಿ ಅಳವಡಿಸಿಕೊಳ್ಳಬೇಕು. ಕರ್ನಾಟಕ ಪೊಲೀಸ್ ಕಾಯ್ದೆಯಡಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ' ಎಂದು ಹೇಳಿದರು.
'ನಿಗದಿತ ಗಡುವಿನೊಳಗೆ ಮಾರ್ಗಸೂಚಿ ಅಳವಡಿಸಿಕೊಳ್ಳದ ಶಾಲಾ ಆಡಳಿತ ಮಂಡಳಿ ವಿರುದ್ಧ ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದ (ಐಪಿಸಿ-188) ಆರೋಪದ ಮೇಲೆ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸಲಾಗುತ್ತದೆ' ಎಂದು ನಗರ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ಕುಮಾರ್, ಜಂಟಿ ಪೊಲೀಸ್ ಕಮಿಷನರ್ ಕೆ.ವಿ.ಶರತ್ಚಂದ್ರ, ಕೇಂದ್ರ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ವಿಬ್ ಗಯಾರ್ ಶಾಲೆಗೆ ಗಡುವು: ಶಾಲೆಯಲ್ಲಿ ಮಾರ್ಗಸೂಚಿ ಅಳವಡಿಕೆಗೆ ಆ.14ರ ಗಡುವು ನೀಡಲಾಗಿದೆ. ಬೆಳಿಗ್ಗೆ 8ರಿಂದ ಮಧ್ಯಾಹ್ನ 2, ಮಧ್ಯಾಹ್ನ 2ರಿಂದ ರಾತ್ರಿ 8 ಮತ್ತು ರಾತ್ರಿ 8ರ ನಂತರ, ಹೀಗೆ ಮೂರು ಪಾಳಿಗಳಲ್ಲಿ 66 ಮಂದಿ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು. ಅವರಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯೂ ಇರಬೇಕು.
ಶಾಲೆಯ ಪ್ರವೇಶ ದ್ವಾರದಲ್ಲಿ 10, ಪ್ರತಿ ಅಂತಸ್ತಿಗೆ ಇಬ್ಬರಂತೆ ನಾಲ್ಕು ಅಂತಸ್ತಿಗೆ ಎಂಟು ಮಂದಿ ಮತ್ತು 10 ಮಂದಿ ಮಹಿಳಾ ಭದ್ರತಾ ಸಿಬ್ಬಂದಿ ಕ್ರಮವಾಗಿ ಮೊದಲ ಎರಡು ಪಾಳಿಗಳಲ್ಲಿ ಕೆಲಸ ನಿರ್ವಹಿಸಬೇಕು. ರಾತ್ರಿ ಪಾಳಿಯಲ್ಲಿ 10 ಮಂದಿ ಭದ್ರತಾ ಸಿಬ್ಬಂದಿ ಇರಬೇಕು. ಉಳಿದಂತೆ ಇತರೆ ಶಾಲೆಗಳಿಗೆ ನಿಗದಿಪಡಿಸಿರುವ ಮಾರ್ಗಸೂಚಿ ಅಂಶಗಳೇ ವಿಬ್ ಗಯಾರ್ ಶಾಲೆಗೂ ಅನ್ವಯವಾಗುತ್ತವೆ.

ಮಾರ್ಗಸೂಚಿ ಮುಖ್ಯಾಂಶಗಳು:
* ಶಾಲಾ ವಾಹನಗಳಿಗೆ ಚಾಲಕನ ಜತೆಗೆ ಕಡ್ಡಾಯವಾಗಿ ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಬೇಕು.
* ವಾಹನದಲ್ಲಿ ಕಡ್ಡಾಯವಾಗಿ ಜಿಪಿಎಸ್ ವ್ಯವಸ್ಥೆ, ಸಿ.ಸಿ ಕ್ಯಾಮೆರಾ ಅಳವಡಿಸಬೇಕು. ಜಿಪಿಎಸ್ ಸಾಧನ ಹಾಗೂ ಸಿ.ಸಿ ಕ್ಯಾಮೆರಾವನ್ನು ಸದಾ ಸುಸ್ಥಿತಿಯಲ್ಲಿ ಇಡಬೇಕು.
* ಶಾಲೆಯ ಪ್ರವೇಶದ್ವಾರ ಮತ್ತು ಪ್ರತಿ ಅಂತಸ್ತಿಗೆ ಮೂರು ಪಾಳಿಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಭದ್ರತಾ ಸಿಬ್ಬಂದಿ ಪ್ರತಿ ಎರಡು ತಾಸಿಗೊಮ್ಮೆ ಭದ್ರತಾ ವಿಭಾಗದ ಮುಖ್ಯಸ್ಥರಿಗೆ ವರದಿ ನೀಡಬೇಕು. ಭದ್ರತೆಯ ಉಸ್ತುವಾರಿಗೆ ಮುಖ್ಯ ಮೇಲ್ವಿಚಾರಕ ಮತ್ತು ಮೂವರು ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು.
* ಪೋಷಕರಿಗೆ ಗುರುತಿನ ಚೀಟಿ ನೀಡಬೇಕು. ಆ ಚೀಟಿಯಲ್ಲಿ ಅವರ ಮಗುವಿನ ಭಾವಚಿತ್ರ ಇರಬೇಕು.
* ಶಿಕ್ಷಕರು, ಆಡಳಿತ ಮತ್ತು ಭದ್ರತಾ ಸಿಬ್ಬಂದಿ, ಸ್ವಚ್ಛತಾ ಕೆಲಸ ನಿರ್ವಹಿಸುವವರ ವೈಯಕ್ತಿಕ ವಿವರ ಸಂಗ್ರಹಿಸಿ, ಅವರ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು. ಅಲ್ಲದೇ, ಅವರೆಲ್ಲರಿಗೂ ಗುರುತಿನ ಚೀಟಿ ನೀಡಬೇಕು.
* ಶಾಲಾ ಆವರಣದಲ್ಲಿ ಅಪರಾಧ ಅಥವಾ ಕಾನೂನುಬಾಹಿರ ಚಟುವಟಿಕೆಗಳು ನಡೆದರೆ ಆ ಬಗ್ಗೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
* ಶಾಲೆಯ ಆಟದ ಮೈದಾನ, ಈಜುಕೊಳ, ಪ್ರಯೋಗಾಲಯ, ಗ್ರಂಥಾಲಯ, ವ್ಯಾಯಾಮ ಕೊಠಡಿಗೆ ಹೊರಗಿನವರ ಪ್ರವೇಶ ನಿರ್ಬಂಧಿಸಬೇಕು.
* ಕಟ್ಟಡದ ಪ್ರತಿ ಅಂತಸ್ತಿಗೂ ವಿಚಕ್ಷಣಾಧಿಕಾರಿಯನ್ನು ನೇಮಿಸಬೇಕು. ಅವರಿಗೆ ಶಾಲಾ ಆವರಣದಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇಡಲು ಸಾಧ್ಯವಾಗುವಂತೆ ಪಾರದರ್ಶಕವಾದ ಗಾಜಿನ ಚೌಕಿ ನಿರ್ಮಿಸಿಕೊಡಬೇಕು.
* ಚಾಲಕನ ಪೂರ್ವಾಪರ, ಚಾಲನಾ ಪರವಾನಗಿ ಬಗ್ಗೆ ಆಡಳಿತ ಮಂಡಳಿಯು ಪೊಲೀಸ್ ಠಾಣೆಯಿಂದ ಮಾಹಿತಿ ಪಡೆದು ಕೆಲಸಕ್ಕೆ ನೇಮಿಸಿಕೊಳ್ಳಬೇಕು.
* ಚಾಲಕರ ಯಾವುದೇ ತಪ್ಪಿಗೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ವಾಹನ ಮಾಲೀಕರೇ ಸಂಪೂರ್ಣ ಜವಾಬ್ದಾರರು. ಆ ಬಗ್ಗೆ ಆಡಳಿತ ಮಂಡಳಿಯು ವಾಹನ ಮಾಲೀಕರಿಂದ ಲಿಖಿತ ಒಪ್ಪಂದ ಮಾಡಿಕೊಳ್ಳಬೇಕು. ವಾಹನದ ಅರ್ಹತಾ ಪ್ರಮಾಣಪತ್ರ, ನೋಂದಣಿ, ತೆರಿಗೆಗೆ ಸಂಬಂಧಿಸಿದ ದಾಖಲೆಪತ್ರಗಳು ಇರಬೇಕು.
* ಸಾರಿಗೆ ಇಲಾಖೆ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ವಾಹನದಲ್ಲಿ ಕರೆದೊಯ್ಯಬಾರದು.
* ಶಿಕ್ಷಕರು, ಆಡಳಿತ ಮತ್ತು ಭದ್ರತಾ ಸಿಬ್ಬಂದಿ, ಸ್ವಚ್ಛತಾ ಕೆಲಸ ನಿರ್ವಹಿಸುವವರ ವೈಯಕ್ತಿಕ ವಿವರ ಸಂಗ್ರಹಿಸಿ, ಅವರ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು. ಅಲ್ಲದೇ, ಅವರೆಲ್ಲರಿಗೂ ಗುರುತಿನ ಚೀಟಿ ನೀಡಬೇಕು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications