ನನ್ನದು ಅಕ್ಷರಶಃ ಸ್ವಚ್ಛ ರಾಜಕಾರಣ - ಎಂಎಲ್ಎ
"ಚಿಕ್ಕಮಗಳೂರಿನಲ್ಲಿ ಜಮೀನು ನೋಡಿಕೊಂಡು ಉಳಿದ ಜೀವನ ಕಳೆಯಬೇಕೆಂದು ಮನಸು ಸದಾ ಹಂಬಲಿಸುತ್ತಿರುತ್ತದೆ. ಈ ರಾಜಕೀಯ ಸಾಕಾಗಿ ಹೋಗಿದೆ. ಅಕ್ಷರಶಃ ಸ್ವಚ್ಛ ರಾಜಕಾರಣ ಮಾಡಿಕೊಂಡು ಬಂದವನು. ಒಂದೇ ಒಂದು ಸೈಟಿಗಾಗಿ ಕೈಯೊಡ್ಡಿದವನಲ್ಲ. ಎಂಟಾಣಿಯಷ್ಟು ಅಕ್ರಮ ಆಸ್ತಿ ಮಾಡಿದ್ದೇನೆಂದು ಯಾರಾದ್ರೂ ಪ್ರೂವ್ ಮಾಡಿದರೆ ರಾಜಕೀಯಕ್ಕೇ ಗುಡ್ ಬೈ ಹೇಳಿ ಹಳ್ಳಿಗೆ ಮರಳಿಬಿಡುತ್ತೇನೆ..."
ಬೆಂಗಳೂರಿನ ಅತ್ಯಂತ ಪುರಾತನ ಬಡಾವಣೆ, ಮಾಸ್ತಿ, ನಿಸಾರ್, ಡಿವಿಜಿ, ಅನಕೃ, ಲಂಕೇಶ್ ಮುಂತಾದ ಸಾರಸ್ವತ ಲೋಕದ ದಿಗ್ಗಜ ಸಾಹಿತಿಗಳು ಜೀವಿಸಿದಂಥ ಪ್ರದೇಶ, ಗಲ್ಲಿಗಲ್ಲಿಗಳಲ್ಲಿ ಗುಡಿಗಳನ್ನು ಹೊಂದಿರುವಂಥ, ಹೆಚ್ಚಾಗಿ ಕನ್ನಡಿಗರು ಮತ್ತು ಅಕ್ಷರಸ್ಥರು ವಾಸಿಸುವ, ಬೆಂಗಳೂರಿನ ಹೆಮ್ಮೆಯ ಸಾಂಸ್ಕೃತಿಕ ರಾಜಧಾನಿ ಬಸವನಗುಡಿ ವಿಧಾನಸಭೆ ಕ್ಷೇತ್ರವನ್ನು ಸತತ ಎರಡು ಅವಧಿಗಳಿಂದ ಪ್ರತಿನಿಧಿಸುತ್ತಿರುವ 56 ವರ್ಷದ ರವಿ ಸುಬ್ರಮಣ್ಯ ಅವರ ಮನದಾಳದ ಮಾತುಗಳಿವು.

ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದು ಅತ್ಲಾಗಿರಲಿ, ಚುನಾವಣೆಗೆ ಟಿಕೆಟ್ ಸಿಕ್ರೆ ಸಾಕು ಅಂತ ಕಾಯೋರು ಸಹಸ್ರ ಜನರಿರುವಾಗ, ರವಿ ಸುಬ್ರಮಣ್ಯರವರು ಹಳ್ಳಿಗೆ ಹೋಗುವ ಮಾತನಾಡಿದ್ದಾರೆ. ಅವರ ಮಾತಿನಲ್ಲಿ ಹುರುಳು ಇಲ್ಲದಿಲ್ಲ. ಬೆಂಗಳೂರನ್ನು ನಿಭಾಯಿಸಲು ಬಿಬಿಎಂಪಿ, ಬಿಡಿಎ, ಪೊಲೀಸ್ ಇಲಾಖೆ, ನೂರಾಎಂಟು ಟಾಸ್ಕ್ ಫೋರ್ಸ್ ಗಳಿರುವಾಗ ಎಂಎಲ್ಎಗೆ ಏನು ಕೆಲಸ? ಹೋಗಲಿ, ಅವರ ಮಾತನ್ನಾದರೂ ಯಾರು ಕೇಳ್ತಾರೆ? ಶಾಸಕರಾಗಿ 18 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ಒನ್ಇಂಡಿಯಾ ಜೊತೆ ಮಾತು ಆಡಾಡುತ್ತಲೇ ರವಿ ಸುಬ್ರಮಣ್ಯ ಆತ್ಮವಿಮರ್ಶೆಯಲ್ಲಿ ಮುಳುಗಿದರು.
ಬೆಂಗಳೂರಿನ ಹೊರಗಿರುವ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕನಿಗೆ ಸ್ಥಳೀಯ ಆಡಳಿತ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಲೋಕೋಪಯೋಗಿ, ಕಂದಾಯ ಇಲಾಖೆಗಳ ಮೇಲೆ ಹಿಡಿತವಿರುತ್ತದೆ, ತನ್ನ ಮಾತು ಇವರು ಕೇಳುತ್ತಾರೆ ಎಂಬ ನಂಬಿಕೆಯಿರುತ್ತದೆ. ಆದರೆ, ಇಂಥ ಅದೃಷ್ಟ ಬೆಂಗಳೂರಿನ ಶಾಸಕನಿಗೆ ಇರುತ್ತದಾ? ಬೆಂಗಳೂರಿನಲ್ಲಿ 28 ಎಂಎಲ್ಎಗಳಿದ್ದಾರೆ. ಅವರು ಸ್ವತಂತ್ರವಾಗಿ, ಬಿಬಿಎಂಪಿ, ಬಿಡಿಎಗಳ ಹಂಗಿಲ್ಲದೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದಾ ಎಂದು ಪ್ರಶ್ನಿಸುತ್ತಾರೆ ರವಿ.

2008ರ ಚುನಾವಣೆಯಲ್ಲಿ ಕಾಂಗ್ರೆಸ್ ಧುರೀಣ, ಮಾಜಿ ಮೇಯರ್ ಕೆ ಚಂದ್ರಶೇಖರ್ ಅವರನ್ನು, 2013ರಲ್ಲಿ ಜೆಡಿಎಸ್ ಅಭ್ಯರ್ಥಿ ಬಾಗೇಗೌಡ ಅವರನ್ನು 19 ಸಾವಿರ ಮತಗಳಿಂದ ಸೋಲಿಸಿ, ಕಾಂಗ್ರೆಸ್ ನ ಬಿಕೆ ಚಂದ್ರಶೇಖರ್ ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದ ರವಿ ಸುಬ್ರಮಣ್ಯ, ರಾಜ್ಯ ಕಂಡಿರುವ ಜನಾನುರಾಗಿ ರಾಜಕಾರಣಿಗಳಲ್ಲಿ ಒಬ್ಬರು. ಸದಾ ಬಸವನಗುಡಿ ವಿಧಾನಸಭೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಜಪಿಸುತ್ತಲೇ ಇರುವ ಅವರು, ತಮ್ಮ ಕನಸಿನ ಯೋಜನೆಗಳಾದ ನೀರು ಸರಬರಾಜು ಪೈಲಟ್ ಪ್ರಾಜೆಕ್ಟ್, ಸರಕಾರಿ ಶಾಲೆಗಳ ಉನ್ನತೀಕರಣ, ಬಸವನಗುಡಿ ಹೆರಿಟೇಜ್ ಕಾರಿಡಾರ್ ಮುಂತಾದ ಯೋಜನೆ ಮತ್ತು ಸವಾಲುಗಳ ಬಗ್ಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ. [ಬಸವನಗುಡಿಯಲ್ಲಿ ಗೆದ್ದವರು ಸೋತವರು]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications