ಬಸವನಗುಡಿ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕಾಯಕಲ್ಪ
ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಸ್ಪರ್ಧಿಸುವ ಮಟ್ಟಕ್ಕೆ ಬೆಳೆಸುವ ಉದ್ದೇಶದಿಂದ ಮತ್ತೊಂದು ಮಹತ್ತರ ಯೋಜನೆಗೆ ಬಿಜೆಪಿ ನಾಯಕ ರವಿ ಕೈಹಾಕಿದ್ದಾರೆ. ಗುಟ್ಟಹಳ್ಳಿಯಲ್ಲಿರುವ ಸರಕಾರಿ ಶಾಲೆಯನ್ನು 1.5 ಕೋಟಿ ರು. ವೆಚ್ಚದಲ್ಲಿ ಉನ್ನತ ದರ್ಜೆಗೆ ಏರಿಸುವ ಕಾರ್ಯ ಭರದಿಂದ ಸಾಗಿದೆ. ಅಲ್ಲಿರುವ 200 ವಿದ್ಯಾರ್ಥಿಗಳಾಗಿ ವಿಜ್ಞಾನ, ರಾಸಾಯನಿಕ ಪ್ರಯೋಗಾಲಯ, ಗ್ರಂಥಾಲಯ, ಉತ್ತಮ ಗುಣಮಟ್ಟದ ಸಮವಸ್ತ್ರ, ಸುರಕ್ಷತೆಗೆ ಸಿಸಿಟಿವಿ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಅದು ಇನ್ನೇನು ಮುಕ್ತಾಯದ ಹಂತದಲ್ಲಿದೆ.
ಇದಲ್ಲದೆ, 100 ವರ್ಷಕ್ಕೂ ಹಳೆಯದಾಗಿರುವ ಸುಂಕೇನಹಳ್ಳಿ, ಗವಿಪುರಂ, ಕತ್ರಿಗುಪ್ಪೆ, ಶ್ರೀನಗರ ಮತ್ತು ಎನ್ಆರ್ ಕಾಲೋನಿಯಲ್ಲಿರುವ ಸರಕಾರಿ ಮತ್ತು ಬಿಬಿಎಂಪಿ ಶಾಲೆಗಳನ್ನು ಕೂಡ ಇದೇ ಮಟ್ಟಕ್ಕೆ ಏರಿಸುವ ಯೋಜನೆ ರೂಪುಗೊಳ್ಳುತ್ತಿದೆ. ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಸಾಫ್ಟ್ ವೇರ್ ಇಂಜಿನಿಯರುಗಳ ಮುಖಾಂತರ ತರಬೇತಿ ನೀಡುವ, ಕಲಿಕಾ ಕಿಟ್ ನೀಡುವ ಉದ್ದೇಶವೂ ಇದೆ. ಒಟ್ಟಿನಲ್ಲಿ ಸರಕಾರಿ ಶಾಲೆ ವಿದ್ಯಾರ್ಥಿಗಳು ಖಾಸಗಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸುವ ಮಟ್ಟಕ್ಕೆ ನಿಲ್ಲಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಬೇರೆ ಶಾಲೆಗಳಂತೆ ಈಜುಗೊಳ, ಪವರ್ ಪಾಯಿಂಟ್ ಪ್ರೆಸೆಂಟೇಶನ್ ನೀಡಲು ನಮಗೆ ಸಾಧ್ಯವಾಗುವುದಿಲ್ಲ. ಆದರೆ, ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಯಾರಿಗೂ ಕಮ್ಮಿ ಇಲ್ಲದಂತೆ ಸ್ಪರ್ಧಿಸಲಿದ್ದಾರೆ. ಇನ್ನು ಎರಡೇ ವರ್ಷದಲ್ಲಿ 200 ವಿದ್ಯಾರ್ಥಿಗಳ ಸಂಖ್ಯೆ 800ಕ್ಕೇರಲಿದೆ. ಶಾಲೆಯ ಜೊತೆಗೆ ಕಾಲೇಜನ್ನೂ ಇದೇ ಶಾಲೆಗಳ ಆವರಣದಲ್ಲಿ ಆರಂಭಿಸುವ ಚಿಂತನೆಯೂ ನಡೆದಿದೆ ಎಂದು ಸ್ವತಃ ಎಂಬಿಎ ಪದವೀಧರರಾಗಿರುವ ರವಿ ಸುಬ್ರಮಣ್ಯ ಅವರು ವಿವರಿಸಿದರು.
ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಕುರಿತು ಒನ್ಇಂಡಿಯಾ ಅವರ ಗಮನ ಸೆಳೆದಾಗ, ಬಸವನಗುಡಿ ಕ್ಷೇತ್ರದ ಎಲ್ಲ ಸರಕಾರಿ ಶಾಲೆಗಳಲ್ಲಿ ಕೂಡ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಸಲಾಗುವುದು ಎಂದು ಉತ್ತರಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications